Homeಅಂತರಾಷ್ಟ್ರೀಯಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು...

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

- Advertisement -
- Advertisement -

ಹಲವು ದಿನಗಳ ಊಹಾಪೋಹಗಳ ನಂತರ, ಅಮೆರಿಕದ ಶ್ವೇತಭವನವು ಸೋಮವಾರ (ಸೆ.29) ಸುಮಾರು ಎರಡು ವರ್ಷಗಳ ಗಾಝಾ ಯುದ್ಧವನ್ನು ಕೊನೆಗೊಳಿಸುವ, ಹಮಾಸ್ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಯನ್ನು ಸುರಕ್ಷಿತಗೊಳಿಸುವ ಮತ್ತು ಪ್ಯಾಲೆಸ್ತೀನ್ ಪ್ರದೇಶದ ಭವಿಷ್ಯದ ಆಡಳಿತವನ್ನು ನಿಗದಿಪಡಿಸುವ ಗುರಿಯನ್ನು ಹೊಂದಿರುವ 20 ಅಂಶಗಳ ಯೋಜನೆಯನ್ನು ಪ್ರಸ್ತಾಪಿಸಿದೆ.

ಅಮೆರಿಕ ಮತ್ತು ಇಸ್ರೇಲ್‌ ಈ ಜಂಟಿ ಶಾಂತಿ ಯೋಜನೆಯು ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಕೊನೆಗೊಳಿಸುವ ಮತ್ತು ಗಾಝಾದ ಭವಿಷ್ಯದ ಆಡಳಿತದಿಂದ ಹಮಾಸ್ ಅನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದು ವರದಿಗಳು ಹೇಳಿವೆ.

ಈ ಪ್ರಸ್ತಾವನೆಯನ್ನು ಹಮಾಸ್ ಒಪ್ಪಿಕೊಳ್ಳುತ್ತದೆಯೇ? ಎಂಬುವುದು ಈಗ ಪ್ರಶ್ನೆಯಾಗಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಪ್ರಸ್ತಾವನೆಯನ್ನು ಹಮಾಸ್ ಅಧ್ಯಯನ ಮಾಡುತ್ತಿದೆ. ಅದಕ್ಕಾಗಿ ಒಂದು ತಂಡವನ್ನು ನೇಮಿಸಿದೆ.

ಅಮೆರಿಕ ಮುಂದಿಟ್ಟ ಶಾಂತಿ ಯೋಜನೆಯ ಪ್ರಕಾರ, ಇಸ್ರೇಲ್ ಮತ್ತು ಹಮಾಸ್ ಯೋಜನೆಯ ಷರತ್ತುಗಳನ್ನು ಒಪ್ಪಿಕೊಂಡರೆ ಯುದ್ಧ ಅಂತ್ಯಗೊಳ್ಳಲಿದೆ. ಇಸ್ರೇಲ್ ಯೋಜನೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡ 72 ಗಂಟೆಗಳ ಒಳಗೆ ಹಮಾಸ್ ತನ್ನ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು (ಮೃತರು ಮತ್ತು ಜೀವಂತ ಇರುವವರು) ಬಿಡುಗಡೆ ಮಾಡಬೇಕು.

ಒತ್ತೆಯಾಳುಗಳಿಗೆ ಬದಲಾಗಿ, ಇಸ್ರೇಲ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 250 ಪ್ಯಾಲೆಸ್ತೀನಿಯರನ್ನು ಮತ್ತು 2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಗಾಝಾದಲ್ಲಿ ಬಂಧಿಸಲ್ಪಟ್ಟ 1,700 ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ. ಒಬ್ಬರು ಇಸ್ರೇಲಿ ಒತ್ತೆಯಾಳುವಿನ ಮೃತದೇಹವನ್ನು ನೀಡಿದರೆ, ಅದಕ್ಕೆ ಬದಲಾಗಿ ಇಸ್ರೇಲ್ 15 ಪ್ಯಾಲೆಸ್ತೀನಿಯರ ಮೃತದೇಹಗಳನ್ನು ಹಸ್ತಾಂತರಿಸಲಿದೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಮಾತುಕತೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಯೋಜನೆಯ ಮೂಲಕ ಇಂದಿನ ದಿನ ‘ಶಾಂತಿಗಾಗಿ ಒಂದು ಐತಿಹಾಸಿಕ ದಿನ’ವಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಹಮಾಸ್ ಗುಂಪು ಈ ಯೋಜನೆಯನ್ನು ತಿರಸ್ಕರಿಸಿದರೆ, ಅದರ ಬೆದರಿಕೆಯನ್ನು ನಾಶಮಾಡುವ ಕೆಲಸವನ್ನು ಪೂರ್ಣಗೊಳಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಹಮಾಸ್ ಈ ಪ್ರಸ್ತಾಪವನ್ನು ನಿರಾಕರಿಸಿದರೆ ಅಥವಾ ಅನುಸರಿಸದಿದ್ದರೆ ಇಸ್ರೇಲ್ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಯೋಜನೆಯು ಹಮಾಸ್‌ಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ಮಾನವೀಯ ನೆರವು ಮತ್ತು ಗಾಝಾ ಪುನರ್ನಿರ್ಮಾಣದ ಭರವಸೆಗೆ ಪ್ರತಿಯಾಗಿ ಹೋರಾಟವನ್ನು ಅಂತ್ಯಗೊಳಿಸಿ ಶರಣಾಗುವುದು ಅಥವಾ ಶಸ್ತ್ರಾಸ್ತ್ರಗಳನ್ನು ತ್ಯಜಿಸುವುದು. ಇನ್ನೊಂದು ಒಪ್ಪಂದವನ್ನು ತಿರಸ್ಕರಿಸಿ ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುವ ಆಕ್ರಮಣವನ್ನು ಎದುರಿಸುವುದು.

ಯುದ್ಧವನ್ನು ಕೊನೆಗೊಳಿಸಿ, ಮಾನವೀಯ ನೆರವು ನೀಡಲು ಮತ್ತು ಗಾಝಾವನ್ನು ಪುನರ್ನಿರ್ಮಾಣ ಮಾಡಲು ಅವಕಾಶ ನೀಡಬೇಕಾದರೆ ಹಮಾಸ್ ಶಸ್ತ್ರಾಸ್ತ್ರ ತ್ಯಜಿಸಬೇಕು ಎಂಬ ಷರತ್ತನ್ನು ಅಮೆರಿಕ ಮತ್ತು ಇಸ್ರೇಲ್‌ ಹಮಾಸ್‌ಗೆ ಮುಂದಿಟ್ಟಿದೆ.

ಅಲ್ಲದೆ ಯೋಜನೆಯ ಪ್ರಕಾರ, ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ಕೊಡುವ ಪ್ರಸ್ತಾಪವನ್ನು ಮಾಡಲಾಗಿದೆ. ಆದರೆ, ಅದು ದೀರ್ಘಕಾಲೀನ ಗುರಿಯಾಗಿದೆ. ಪ್ರಸ್ತುತ, 20 ಲಕ್ಷಕ್ಕೂ ಹೆಚ್ಚು ಜನರಿರುವ ಗಾಝಾ ಅಂತಾರಾಷ್ಟ್ರೀಯ ನಿಯಂತ್ರಣಕ್ಕೆ ಒಳಪಡಲಿದೆ. ಗಾಝಾದ ಭದ್ರತೆಯ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಭದ್ರತಾ ಪಡೆಯು ತೆಗೆದುಕೊಳ್ಳಲಿದೆ. ಟ್ರಂಪ್ ಮತ್ತು ಬ್ರಿಟನ್‌ನ ಮಾಜಿ ಪ್ರಧಾನಮಂತ್ರಿ ಟೋನಿ ಬ್ಲೇರ್ ನೇತೃತ್ವದ ‘ಶಾಂತಿ ಮಂಡಳಿ’ ಎಂಬ ಸಂಸ್ಥೆಯು ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲಿದೆ. ಇಸ್ರೇಲಿ ಸೈನ್ಯವು ಗಾಝಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಳಿಯಲಿದೆ.

ಶ್ವೇತಭವನದಲ್ಲಿ ನಡೆದ ಸಭೆಯ ನಂತರ ಟ್ರಂಪ್ ಮತ್ತು ನೆತನ್ಯಾಹು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಈ ಯೋಜನೆಯ ಒಂದು ಭಾಗವು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರ ಘೋಷಿತ ನಿಲುವಿನೊಂದಿಗೆ ನೇರವಾಗಿ ವಿರೋಧಾಭಾಸವನ್ನು ಹೊಂದಿದೆ ಎಂದು ವರದಿಗಳು ಹೇಳಿವೆ. ಏಕೆಂದರೆ, ಯೋಜನೆಯ ಪ್ರಕಾರ, ಗಾಝಾವನ್ನು ಕಾಲಾಂತರದಲ್ಲಿ ಪ್ಯಾಲೆಸ್ಟೈನ್ ಅಥಾರಿಟಿ (ಪ್ಯಾಲೆಸ್ಟೈನ್ ಪ್ರಾಧಿಕಾರ) ಆಡಳಿತ ಮಾಡಲಿದೆ.

ಆದರೆ, ನೆತನ್ಯಾಹು ಮತ್ತು ಅವರ ಸರ್ಕಾರವು ಪ್ಯಾಲೆಸ್ಟೈನ್ ರಾಷ್ಟ್ರೀಯತೆಗೆ ವಿರೋಧವಾಗಿದ್ದು, ಇಂತಹ ಒಪ್ಪಂದವನ್ನು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಆದಾಗ್ಯೂ, ಈ ನಿಬಂಧನೆಯು ಯೋಜನೆಯ ದಾಖಲೆಯಲ್ಲಿ ಉಳಿದಿದೆ.

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...