Homeಅಂತರಾಷ್ಟ್ರೀಯಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು...

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

- Advertisement -
- Advertisement -

ಹಲವು ದಿನಗಳ ಊಹಾಪೋಹಗಳ ನಂತರ, ಅಮೆರಿಕದ ಶ್ವೇತಭವನವು ಸೋಮವಾರ (ಸೆ.29) ಸುಮಾರು ಎರಡು ವರ್ಷಗಳ ಗಾಝಾ ಯುದ್ಧವನ್ನು ಕೊನೆಗೊಳಿಸುವ, ಹಮಾಸ್ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಯನ್ನು ಸುರಕ್ಷಿತಗೊಳಿಸುವ ಮತ್ತು ಪ್ಯಾಲೆಸ್ತೀನ್ ಪ್ರದೇಶದ ಭವಿಷ್ಯದ ಆಡಳಿತವನ್ನು ನಿಗದಿಪಡಿಸುವ ಗುರಿಯನ್ನು ಹೊಂದಿರುವ 20 ಅಂಶಗಳ ಯೋಜನೆಯನ್ನು ಪ್ರಸ್ತಾಪಿಸಿದೆ.

ಅಮೆರಿಕ ಮತ್ತು ಇಸ್ರೇಲ್‌ ಈ ಜಂಟಿ ಶಾಂತಿ ಯೋಜನೆಯು ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಕೊನೆಗೊಳಿಸುವ ಮತ್ತು ಗಾಝಾದ ಭವಿಷ್ಯದ ಆಡಳಿತದಿಂದ ಹಮಾಸ್ ಅನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದು ವರದಿಗಳು ಹೇಳಿವೆ.

ಈ ಪ್ರಸ್ತಾವನೆಯನ್ನು ಹಮಾಸ್ ಒಪ್ಪಿಕೊಳ್ಳುತ್ತದೆಯೇ? ಎಂಬುವುದು ಈಗ ಪ್ರಶ್ನೆಯಾಗಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಪ್ರಸ್ತಾವನೆಯನ್ನು ಹಮಾಸ್ ಅಧ್ಯಯನ ಮಾಡುತ್ತಿದೆ. ಅದಕ್ಕಾಗಿ ಒಂದು ತಂಡವನ್ನು ನೇಮಿಸಿದೆ.

ಅಮೆರಿಕ ಮುಂದಿಟ್ಟ ಶಾಂತಿ ಯೋಜನೆಯ ಪ್ರಕಾರ, ಇಸ್ರೇಲ್ ಮತ್ತು ಹಮಾಸ್ ಯೋಜನೆಯ ಷರತ್ತುಗಳನ್ನು ಒಪ್ಪಿಕೊಂಡರೆ ಯುದ್ಧ ಅಂತ್ಯಗೊಳ್ಳಲಿದೆ. ಇಸ್ರೇಲ್ ಯೋಜನೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡ 72 ಗಂಟೆಗಳ ಒಳಗೆ ಹಮಾಸ್ ತನ್ನ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು (ಮೃತರು ಮತ್ತು ಜೀವಂತ ಇರುವವರು) ಬಿಡುಗಡೆ ಮಾಡಬೇಕು.

ಒತ್ತೆಯಾಳುಗಳಿಗೆ ಬದಲಾಗಿ, ಇಸ್ರೇಲ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 250 ಪ್ಯಾಲೆಸ್ತೀನಿಯರನ್ನು ಮತ್ತು 2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಗಾಝಾದಲ್ಲಿ ಬಂಧಿಸಲ್ಪಟ್ಟ 1,700 ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ. ಒಬ್ಬರು ಇಸ್ರೇಲಿ ಒತ್ತೆಯಾಳುವಿನ ಮೃತದೇಹವನ್ನು ನೀಡಿದರೆ, ಅದಕ್ಕೆ ಬದಲಾಗಿ ಇಸ್ರೇಲ್ 15 ಪ್ಯಾಲೆಸ್ತೀನಿಯರ ಮೃತದೇಹಗಳನ್ನು ಹಸ್ತಾಂತರಿಸಲಿದೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಮಾತುಕತೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಯೋಜನೆಯ ಮೂಲಕ ಇಂದಿನ ದಿನ ‘ಶಾಂತಿಗಾಗಿ ಒಂದು ಐತಿಹಾಸಿಕ ದಿನ’ವಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಹಮಾಸ್ ಗುಂಪು ಈ ಯೋಜನೆಯನ್ನು ತಿರಸ್ಕರಿಸಿದರೆ, ಅದರ ಬೆದರಿಕೆಯನ್ನು ನಾಶಮಾಡುವ ಕೆಲಸವನ್ನು ಪೂರ್ಣಗೊಳಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಹಮಾಸ್ ಈ ಪ್ರಸ್ತಾಪವನ್ನು ನಿರಾಕರಿಸಿದರೆ ಅಥವಾ ಅನುಸರಿಸದಿದ್ದರೆ ಇಸ್ರೇಲ್ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಯೋಜನೆಯು ಹಮಾಸ್‌ಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ಮಾನವೀಯ ನೆರವು ಮತ್ತು ಗಾಝಾ ಪುನರ್ನಿರ್ಮಾಣದ ಭರವಸೆಗೆ ಪ್ರತಿಯಾಗಿ ಹೋರಾಟವನ್ನು ಅಂತ್ಯಗೊಳಿಸಿ ಶರಣಾಗುವುದು ಅಥವಾ ಶಸ್ತ್ರಾಸ್ತ್ರಗಳನ್ನು ತ್ಯಜಿಸುವುದು. ಇನ್ನೊಂದು ಒಪ್ಪಂದವನ್ನು ತಿರಸ್ಕರಿಸಿ ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುವ ಆಕ್ರಮಣವನ್ನು ಎದುರಿಸುವುದು.

ಯುದ್ಧವನ್ನು ಕೊನೆಗೊಳಿಸಿ, ಮಾನವೀಯ ನೆರವು ನೀಡಲು ಮತ್ತು ಗಾಝಾವನ್ನು ಪುನರ್ನಿರ್ಮಾಣ ಮಾಡಲು ಅವಕಾಶ ನೀಡಬೇಕಾದರೆ ಹಮಾಸ್ ಶಸ್ತ್ರಾಸ್ತ್ರ ತ್ಯಜಿಸಬೇಕು ಎಂಬ ಷರತ್ತನ್ನು ಅಮೆರಿಕ ಮತ್ತು ಇಸ್ರೇಲ್‌ ಹಮಾಸ್‌ಗೆ ಮುಂದಿಟ್ಟಿದೆ.

ಅಲ್ಲದೆ ಯೋಜನೆಯ ಪ್ರಕಾರ, ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ಕೊಡುವ ಪ್ರಸ್ತಾಪವನ್ನು ಮಾಡಲಾಗಿದೆ. ಆದರೆ, ಅದು ದೀರ್ಘಕಾಲೀನ ಗುರಿಯಾಗಿದೆ. ಪ್ರಸ್ತುತ, 20 ಲಕ್ಷಕ್ಕೂ ಹೆಚ್ಚು ಜನರಿರುವ ಗಾಝಾ ಅಂತಾರಾಷ್ಟ್ರೀಯ ನಿಯಂತ್ರಣಕ್ಕೆ ಒಳಪಡಲಿದೆ. ಗಾಝಾದ ಭದ್ರತೆಯ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಭದ್ರತಾ ಪಡೆಯು ತೆಗೆದುಕೊಳ್ಳಲಿದೆ. ಟ್ರಂಪ್ ಮತ್ತು ಬ್ರಿಟನ್‌ನ ಮಾಜಿ ಪ್ರಧಾನಮಂತ್ರಿ ಟೋನಿ ಬ್ಲೇರ್ ನೇತೃತ್ವದ ‘ಶಾಂತಿ ಮಂಡಳಿ’ ಎಂಬ ಸಂಸ್ಥೆಯು ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲಿದೆ. ಇಸ್ರೇಲಿ ಸೈನ್ಯವು ಗಾಝಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಳಿಯಲಿದೆ.

ಶ್ವೇತಭವನದಲ್ಲಿ ನಡೆದ ಸಭೆಯ ನಂತರ ಟ್ರಂಪ್ ಮತ್ತು ನೆತನ್ಯಾಹು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಈ ಯೋಜನೆಯ ಒಂದು ಭಾಗವು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರ ಘೋಷಿತ ನಿಲುವಿನೊಂದಿಗೆ ನೇರವಾಗಿ ವಿರೋಧಾಭಾಸವನ್ನು ಹೊಂದಿದೆ ಎಂದು ವರದಿಗಳು ಹೇಳಿವೆ. ಏಕೆಂದರೆ, ಯೋಜನೆಯ ಪ್ರಕಾರ, ಗಾಝಾವನ್ನು ಕಾಲಾಂತರದಲ್ಲಿ ಪ್ಯಾಲೆಸ್ಟೈನ್ ಅಥಾರಿಟಿ (ಪ್ಯಾಲೆಸ್ಟೈನ್ ಪ್ರಾಧಿಕಾರ) ಆಡಳಿತ ಮಾಡಲಿದೆ.

ಆದರೆ, ನೆತನ್ಯಾಹು ಮತ್ತು ಅವರ ಸರ್ಕಾರವು ಪ್ಯಾಲೆಸ್ಟೈನ್ ರಾಷ್ಟ್ರೀಯತೆಗೆ ವಿರೋಧವಾಗಿದ್ದು, ಇಂತಹ ಒಪ್ಪಂದವನ್ನು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಆದಾಗ್ಯೂ, ಈ ನಿಬಂಧನೆಯು ಯೋಜನೆಯ ದಾಖಲೆಯಲ್ಲಿ ಉಳಿದಿದೆ.

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...