Homeಅಂತರಾಷ್ಟ್ರೀಯಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು...

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

- Advertisement -
- Advertisement -

ಹಲವು ದಿನಗಳ ಊಹಾಪೋಹಗಳ ನಂತರ, ಅಮೆರಿಕದ ಶ್ವೇತಭವನವು ಸೋಮವಾರ (ಸೆ.29) ಸುಮಾರು ಎರಡು ವರ್ಷಗಳ ಗಾಝಾ ಯುದ್ಧವನ್ನು ಕೊನೆಗೊಳಿಸುವ, ಹಮಾಸ್ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಯನ್ನು ಸುರಕ್ಷಿತಗೊಳಿಸುವ ಮತ್ತು ಪ್ಯಾಲೆಸ್ತೀನ್ ಪ್ರದೇಶದ ಭವಿಷ್ಯದ ಆಡಳಿತವನ್ನು ನಿಗದಿಪಡಿಸುವ ಗುರಿಯನ್ನು ಹೊಂದಿರುವ 20 ಅಂಶಗಳ ಯೋಜನೆಯನ್ನು ಪ್ರಸ್ತಾಪಿಸಿದೆ.

ಅಮೆರಿಕ ಮತ್ತು ಇಸ್ರೇಲ್‌ ಈ ಜಂಟಿ ಶಾಂತಿ ಯೋಜನೆಯು ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಕೊನೆಗೊಳಿಸುವ ಮತ್ತು ಗಾಝಾದ ಭವಿಷ್ಯದ ಆಡಳಿತದಿಂದ ಹಮಾಸ್ ಅನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದು ವರದಿಗಳು ಹೇಳಿವೆ.

ಈ ಪ್ರಸ್ತಾವನೆಯನ್ನು ಹಮಾಸ್ ಒಪ್ಪಿಕೊಳ್ಳುತ್ತದೆಯೇ? ಎಂಬುವುದು ಈಗ ಪ್ರಶ್ನೆಯಾಗಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಪ್ರಸ್ತಾವನೆಯನ್ನು ಹಮಾಸ್ ಅಧ್ಯಯನ ಮಾಡುತ್ತಿದೆ. ಅದಕ್ಕಾಗಿ ಒಂದು ತಂಡವನ್ನು ನೇಮಿಸಿದೆ.

ಅಮೆರಿಕ ಮುಂದಿಟ್ಟ ಶಾಂತಿ ಯೋಜನೆಯ ಪ್ರಕಾರ, ಇಸ್ರೇಲ್ ಮತ್ತು ಹಮಾಸ್ ಯೋಜನೆಯ ಷರತ್ತುಗಳನ್ನು ಒಪ್ಪಿಕೊಂಡರೆ ಯುದ್ಧ ಅಂತ್ಯಗೊಳ್ಳಲಿದೆ. ಇಸ್ರೇಲ್ ಯೋಜನೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡ 72 ಗಂಟೆಗಳ ಒಳಗೆ ಹಮಾಸ್ ತನ್ನ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು (ಮೃತರು ಮತ್ತು ಜೀವಂತ ಇರುವವರು) ಬಿಡುಗಡೆ ಮಾಡಬೇಕು.

ಒತ್ತೆಯಾಳುಗಳಿಗೆ ಬದಲಾಗಿ, ಇಸ್ರೇಲ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 250 ಪ್ಯಾಲೆಸ್ತೀನಿಯರನ್ನು ಮತ್ತು 2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಗಾಝಾದಲ್ಲಿ ಬಂಧಿಸಲ್ಪಟ್ಟ 1,700 ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ. ಒಬ್ಬರು ಇಸ್ರೇಲಿ ಒತ್ತೆಯಾಳುವಿನ ಮೃತದೇಹವನ್ನು ನೀಡಿದರೆ, ಅದಕ್ಕೆ ಬದಲಾಗಿ ಇಸ್ರೇಲ್ 15 ಪ್ಯಾಲೆಸ್ತೀನಿಯರ ಮೃತದೇಹಗಳನ್ನು ಹಸ್ತಾಂತರಿಸಲಿದೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಮಾತುಕತೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಯೋಜನೆಯ ಮೂಲಕ ಇಂದಿನ ದಿನ ‘ಶಾಂತಿಗಾಗಿ ಒಂದು ಐತಿಹಾಸಿಕ ದಿನ’ವಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಹಮಾಸ್ ಗುಂಪು ಈ ಯೋಜನೆಯನ್ನು ತಿರಸ್ಕರಿಸಿದರೆ, ಅದರ ಬೆದರಿಕೆಯನ್ನು ನಾಶಮಾಡುವ ಕೆಲಸವನ್ನು ಪೂರ್ಣಗೊಳಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಹಮಾಸ್ ಈ ಪ್ರಸ್ತಾಪವನ್ನು ನಿರಾಕರಿಸಿದರೆ ಅಥವಾ ಅನುಸರಿಸದಿದ್ದರೆ ಇಸ್ರೇಲ್ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಯೋಜನೆಯು ಹಮಾಸ್‌ಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ಮಾನವೀಯ ನೆರವು ಮತ್ತು ಗಾಝಾ ಪುನರ್ನಿರ್ಮಾಣದ ಭರವಸೆಗೆ ಪ್ರತಿಯಾಗಿ ಹೋರಾಟವನ್ನು ಅಂತ್ಯಗೊಳಿಸಿ ಶರಣಾಗುವುದು ಅಥವಾ ಶಸ್ತ್ರಾಸ್ತ್ರಗಳನ್ನು ತ್ಯಜಿಸುವುದು. ಇನ್ನೊಂದು ಒಪ್ಪಂದವನ್ನು ತಿರಸ್ಕರಿಸಿ ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುವ ಆಕ್ರಮಣವನ್ನು ಎದುರಿಸುವುದು.

ಯುದ್ಧವನ್ನು ಕೊನೆಗೊಳಿಸಿ, ಮಾನವೀಯ ನೆರವು ನೀಡಲು ಮತ್ತು ಗಾಝಾವನ್ನು ಪುನರ್ನಿರ್ಮಾಣ ಮಾಡಲು ಅವಕಾಶ ನೀಡಬೇಕಾದರೆ ಹಮಾಸ್ ಶಸ್ತ್ರಾಸ್ತ್ರ ತ್ಯಜಿಸಬೇಕು ಎಂಬ ಷರತ್ತನ್ನು ಅಮೆರಿಕ ಮತ್ತು ಇಸ್ರೇಲ್‌ ಹಮಾಸ್‌ಗೆ ಮುಂದಿಟ್ಟಿದೆ.

ಅಲ್ಲದೆ ಯೋಜನೆಯ ಪ್ರಕಾರ, ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ಕೊಡುವ ಪ್ರಸ್ತಾಪವನ್ನು ಮಾಡಲಾಗಿದೆ. ಆದರೆ, ಅದು ದೀರ್ಘಕಾಲೀನ ಗುರಿಯಾಗಿದೆ. ಪ್ರಸ್ತುತ, 20 ಲಕ್ಷಕ್ಕೂ ಹೆಚ್ಚು ಜನರಿರುವ ಗಾಝಾ ಅಂತಾರಾಷ್ಟ್ರೀಯ ನಿಯಂತ್ರಣಕ್ಕೆ ಒಳಪಡಲಿದೆ. ಗಾಝಾದ ಭದ್ರತೆಯ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಭದ್ರತಾ ಪಡೆಯು ತೆಗೆದುಕೊಳ್ಳಲಿದೆ. ಟ್ರಂಪ್ ಮತ್ತು ಬ್ರಿಟನ್‌ನ ಮಾಜಿ ಪ್ರಧಾನಮಂತ್ರಿ ಟೋನಿ ಬ್ಲೇರ್ ನೇತೃತ್ವದ ‘ಶಾಂತಿ ಮಂಡಳಿ’ ಎಂಬ ಸಂಸ್ಥೆಯು ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲಿದೆ. ಇಸ್ರೇಲಿ ಸೈನ್ಯವು ಗಾಝಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಳಿಯಲಿದೆ.

ಶ್ವೇತಭವನದಲ್ಲಿ ನಡೆದ ಸಭೆಯ ನಂತರ ಟ್ರಂಪ್ ಮತ್ತು ನೆತನ್ಯಾಹು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಈ ಯೋಜನೆಯ ಒಂದು ಭಾಗವು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರ ಘೋಷಿತ ನಿಲುವಿನೊಂದಿಗೆ ನೇರವಾಗಿ ವಿರೋಧಾಭಾಸವನ್ನು ಹೊಂದಿದೆ ಎಂದು ವರದಿಗಳು ಹೇಳಿವೆ. ಏಕೆಂದರೆ, ಯೋಜನೆಯ ಪ್ರಕಾರ, ಗಾಝಾವನ್ನು ಕಾಲಾಂತರದಲ್ಲಿ ಪ್ಯಾಲೆಸ್ಟೈನ್ ಅಥಾರಿಟಿ (ಪ್ಯಾಲೆಸ್ಟೈನ್ ಪ್ರಾಧಿಕಾರ) ಆಡಳಿತ ಮಾಡಲಿದೆ.

ಆದರೆ, ನೆತನ್ಯಾಹು ಮತ್ತು ಅವರ ಸರ್ಕಾರವು ಪ್ಯಾಲೆಸ್ಟೈನ್ ರಾಷ್ಟ್ರೀಯತೆಗೆ ವಿರೋಧವಾಗಿದ್ದು, ಇಂತಹ ಒಪ್ಪಂದವನ್ನು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಆದಾಗ್ಯೂ, ಈ ನಿಬಂಧನೆಯು ಯೋಜನೆಯ ದಾಖಲೆಯಲ್ಲಿ ಉಳಿದಿದೆ.

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...