Homeಮುಖಪುಟಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ ಹೊರಡಿಸಲಾಗಿದೆ ಎಂದು ವರದಿಯಾಗಿದೆ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ.

ಅದಾನಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು (ನ.21) ಬೆಳಿಗ್ಗೆ ವರದಿ ಹೊರಬಿದ್ದಿದೆ. ಅದಾನಿ ಗ್ರೂಪ್ ತಮ್ಮ ಮೇಲಿನ ಆರೋಪದ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ಪ್ರತಿಕ್ರಿಯಿಸಿಲ್ಲ. ಆರೋಪಿಗಳ ಪರ ವಕೀಲರನ್ನು ತಕ್ಷಣ ಗುರುತಿಸಲು ಸಾಧ್ಯವಾಗಿಲ್ಲ ಎಂದು business-standard.com ವರದಿ ಮಾಡಿದೆ.

ಇದನ್ನೂ ಓದಿ : ಎಕ್ಸಿಟ್ ಪೋಲ್‌ | ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...