Homeಮುಖಪುಟಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ ಹೊರಡಿಸಲಾಗಿದೆ ಎಂದು ವರದಿಯಾಗಿದೆ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ.

ಅದಾನಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು (ನ.21) ಬೆಳಿಗ್ಗೆ ವರದಿ ಹೊರಬಿದ್ದಿದೆ. ಅದಾನಿ ಗ್ರೂಪ್ ತಮ್ಮ ಮೇಲಿನ ಆರೋಪದ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ಪ್ರತಿಕ್ರಿಯಿಸಿಲ್ಲ. ಆರೋಪಿಗಳ ಪರ ವಕೀಲರನ್ನು ತಕ್ಷಣ ಗುರುತಿಸಲು ಸಾಧ್ಯವಾಗಿಲ್ಲ ಎಂದು business-standard.com ವರದಿ ಮಾಡಿದೆ.

ಇದನ್ನೂ ಓದಿ : ಎಕ್ಸಿಟ್ ಪೋಲ್‌ | ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...