Homeಮುಖಪುಟಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ ಹೊರಡಿಸಲಾಗಿದೆ ಎಂದು ವರದಿಯಾಗಿದೆ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ.

ಅದಾನಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು (ನ.21) ಬೆಳಿಗ್ಗೆ ವರದಿ ಹೊರಬಿದ್ದಿದೆ. ಅದಾನಿ ಗ್ರೂಪ್ ತಮ್ಮ ಮೇಲಿನ ಆರೋಪದ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ಪ್ರತಿಕ್ರಿಯಿಸಿಲ್ಲ. ಆರೋಪಿಗಳ ಪರ ವಕೀಲರನ್ನು ತಕ್ಷಣ ಗುರುತಿಸಲು ಸಾಧ್ಯವಾಗಿಲ್ಲ ಎಂದು business-standard.com ವರದಿ ಮಾಡಿದೆ.

ಇದನ್ನೂ ಓದಿ : ಎಕ್ಸಿಟ್ ಪೋಲ್‌ | ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...