Homeಅಂತರಾಷ್ಟ್ರೀಯಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

ಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್‌ ಹತ್ಯೆಯ ಸಂಚಿಗೆ ಸಂಬಂಧಿಸಿದ ‘ದಿ ವಾಷಿಂಗ್ಟನ್ ಪೋಸ್ಟ್ ವರದಿ’ ಬೆನ್ನಲ್ಲಿ ಆರೋಪಗಳ ಬಗ್ಗೆ ತನಿಖೆಗೆ ಭಾರತ ಸರ್ಕಾರದೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದೆ ಎಂದು ಅಮೆರಿಕ ಹೇಳಿದೆ.

ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ದಿ ವಾಷಿಂಗ್ಟನ್ ಪೋಸ್ಟ್ ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನೂನ್‌ ಹತ್ಯೆಗೆ ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಅಧಿಕಾರಿಯನ್ನು ಆರೋಪಿ ಎಂದು ಹೇಳಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ವರದಿ ಕುರಿತು ಪ್ರತಿಕ್ರಿಯಿಸಿದ್ದು,  ಭಾರತೀಯ ವಿಚಾರಣಾ ಸಮಿತಿಯ ಫಲಿತಾಂಶಗಳ ಆಧಾರದ ಮೇಲೆ ನಾವು ಭಾರತ ಸರ್ಕಾರದಿಂದ ಉತ್ತರದಾಯಿತ್ವವನ್ನು ನಿರೀಕ್ಷಿಸುತ್ತೇವೆ ಮತ್ತು ನಾವು ಅವರೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದ್ದೇವೆ. ನಾವು ಹಿರಿಯ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ನೇರವಾಗಿ ಈ ಬಗ್ಗೆ ನಮ್ಮ ಕಾಳಜಿಯನ್ನು ವ್ಯಕ್ತಪಡಿಸುವುದನ್ನು ಮುಂದುವರಿಸುತ್ತೇವೆ, ಆದರೆ ಅದನ್ನು ಮೀರಿ, ನಾನು ಇದನ್ನು ಮತ್ತಷ್ಟು ವಿಶ್ಲೇಷಿಸಲು ಹೋಗುವುದಿಲ್ಲ ಎಂದು ವೇದಾಂತ್ ಪಟೇಲ್ ಹೇಳಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ವರದಿ ಏನು ಹೇಳಿದೆ?
ವಾಷಿಂಗ್ಟನ್ ಪೋಸ್ಟ್, ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ, ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಅಧಿಕಾರಿ  ವಿಕ್ರಮ್ ಯಾದವ್ ಆರೋಪಿ ಎಂದು ಹೆಸರಿಸಿದೆ. ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು. ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ. ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಕಳೆದ ವರ್ಷ, ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ಭಾರತೀಯ ಪ್ರಜೆ ನಿಖಿಲ್ ಗುಪ್ತಾ, ಪನ್ನುನ್‌ನನ್ನು ಕೊಲ್ಲುವ ಸಂಚಿನಲ್ಲಿ ಭಾರತೀಯ ಸರ್ಕಾರಿ ಉದ್ಯೋಗಿಯೊಂದಿಗೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದರು.  2023ರಲ್ಲಿ ಝೆಕ್ ರಿಪಬ್ಲಿಕ್‌ನಲ್ಲಿ ಗುಪ್ತಾ ಬಂಧನ ನಡೆದಿತ್ತು.

ವಾಷಿಂಗ್ಟನ್ ಪೋಸ್ಟ್ ವರದಿಗೆ ಭಾರತದ ಪ್ರತಿಕ್ರಿಯೆ
ಪನ್ನೂನ್ ಹತ್ಯೆಯ ಸಂಚಿನ ಕುರಿತು ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ‘ಆಧಾರ ರಹಿತ’ ಎಂದು ಹೇಳಿದೆ. ಕ್ರಿಮಿನಲ್ ಮತ್ತು ಭಯೋತ್ಪಾದಕ ಜಾಲಗಳ ಬಗ್ಗೆ ಯುಎಸ್ ಎತ್ತಿರುವ ಭದ್ರತಾ ಕಳವಳಗಳನ್ನು ಪರಿಹರಿಸಲು ಭಾರತ ಸರ್ಕಾರವು ಸ್ಥಾಪಿಸಿದ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಊಹಾತ್ಮಕ ಮತ್ತು ಬೇಜವಾಬ್ದಾರಿ ಕಾಮೆಂಟ್‌ಗಳು ಸಹಾಯಕವಾಗುವುದಿಲ್ಲ ಎಂದು ಜೈಸ್ವಾಲ್ ಹೇಳಿದ್ದರು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...