Homeಅಂತರಾಷ್ಟ್ರೀಯಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

ಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್‌ ಹತ್ಯೆಯ ಸಂಚಿಗೆ ಸಂಬಂಧಿಸಿದ ‘ದಿ ವಾಷಿಂಗ್ಟನ್ ಪೋಸ್ಟ್ ವರದಿ’ ಬೆನ್ನಲ್ಲಿ ಆರೋಪಗಳ ಬಗ್ಗೆ ತನಿಖೆಗೆ ಭಾರತ ಸರ್ಕಾರದೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದೆ ಎಂದು ಅಮೆರಿಕ ಹೇಳಿದೆ.

ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ದಿ ವಾಷಿಂಗ್ಟನ್ ಪೋಸ್ಟ್ ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನೂನ್‌ ಹತ್ಯೆಗೆ ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಅಧಿಕಾರಿಯನ್ನು ಆರೋಪಿ ಎಂದು ಹೇಳಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ವರದಿ ಕುರಿತು ಪ್ರತಿಕ್ರಿಯಿಸಿದ್ದು,  ಭಾರತೀಯ ವಿಚಾರಣಾ ಸಮಿತಿಯ ಫಲಿತಾಂಶಗಳ ಆಧಾರದ ಮೇಲೆ ನಾವು ಭಾರತ ಸರ್ಕಾರದಿಂದ ಉತ್ತರದಾಯಿತ್ವವನ್ನು ನಿರೀಕ್ಷಿಸುತ್ತೇವೆ ಮತ್ತು ನಾವು ಅವರೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದ್ದೇವೆ. ನಾವು ಹಿರಿಯ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ನೇರವಾಗಿ ಈ ಬಗ್ಗೆ ನಮ್ಮ ಕಾಳಜಿಯನ್ನು ವ್ಯಕ್ತಪಡಿಸುವುದನ್ನು ಮುಂದುವರಿಸುತ್ತೇವೆ, ಆದರೆ ಅದನ್ನು ಮೀರಿ, ನಾನು ಇದನ್ನು ಮತ್ತಷ್ಟು ವಿಶ್ಲೇಷಿಸಲು ಹೋಗುವುದಿಲ್ಲ ಎಂದು ವೇದಾಂತ್ ಪಟೇಲ್ ಹೇಳಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ವರದಿ ಏನು ಹೇಳಿದೆ?
ವಾಷಿಂಗ್ಟನ್ ಪೋಸ್ಟ್, ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ, ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಅಧಿಕಾರಿ  ವಿಕ್ರಮ್ ಯಾದವ್ ಆರೋಪಿ ಎಂದು ಹೆಸರಿಸಿದೆ. ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು. ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ. ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಕಳೆದ ವರ್ಷ, ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ಭಾರತೀಯ ಪ್ರಜೆ ನಿಖಿಲ್ ಗುಪ್ತಾ, ಪನ್ನುನ್‌ನನ್ನು ಕೊಲ್ಲುವ ಸಂಚಿನಲ್ಲಿ ಭಾರತೀಯ ಸರ್ಕಾರಿ ಉದ್ಯೋಗಿಯೊಂದಿಗೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದರು.  2023ರಲ್ಲಿ ಝೆಕ್ ರಿಪಬ್ಲಿಕ್‌ನಲ್ಲಿ ಗುಪ್ತಾ ಬಂಧನ ನಡೆದಿತ್ತು.

ವಾಷಿಂಗ್ಟನ್ ಪೋಸ್ಟ್ ವರದಿಗೆ ಭಾರತದ ಪ್ರತಿಕ್ರಿಯೆ
ಪನ್ನೂನ್ ಹತ್ಯೆಯ ಸಂಚಿನ ಕುರಿತು ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ‘ಆಧಾರ ರಹಿತ’ ಎಂದು ಹೇಳಿದೆ. ಕ್ರಿಮಿನಲ್ ಮತ್ತು ಭಯೋತ್ಪಾದಕ ಜಾಲಗಳ ಬಗ್ಗೆ ಯುಎಸ್ ಎತ್ತಿರುವ ಭದ್ರತಾ ಕಳವಳಗಳನ್ನು ಪರಿಹರಿಸಲು ಭಾರತ ಸರ್ಕಾರವು ಸ್ಥಾಪಿಸಿದ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಊಹಾತ್ಮಕ ಮತ್ತು ಬೇಜವಾಬ್ದಾರಿ ಕಾಮೆಂಟ್‌ಗಳು ಸಹಾಯಕವಾಗುವುದಿಲ್ಲ ಎಂದು ಜೈಸ್ವಾಲ್ ಹೇಳಿದ್ದರು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...