Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....