Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...