Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...