Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...