Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...