Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...