Homeಅಂತರಾಷ್ಟ್ರೀಯಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

ಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

- Advertisement -
- Advertisement -

ಇರಾನ್ ಜೊತೆಗೆ ತೈಲ ಅಥವಾ ಪೆಟ್ರೋಕೆಮಿಕಲ್ ಉತ್ಪನ್ನಗಳ ಮಾರಾಟ ಮತ್ತು ಖರೀದಿ ಮಾಡುತ್ತಿರುವ ಕಾರಣ ನೀಡಿ ಭಾರತದ ಆರು ಕಂಪನಿಗಳ ಮೇಲೆ ಟ್ರಂಪ್ ಆಡಳಿತವು ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ಭಾರತದ ಕಂಪನಿಗಳು ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿ ಪೆಟ್ರೋಲಿಯಂ ಉತ್ಪನ್ನಗಳ ಖರೀದಿ ಮತ್ತು ಮಾರುಕಟ್ಟೆ ವಹಿವಾಟು ನಡೆಸುತ್ತಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಆರೋಪಿಸಿದೆ.

ಆಲ್ಕೆಮಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್, ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್, ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ, ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್, ಕಾಂಚನ್ ಪಾಲಿಮರ್ಸ್ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಇರಾನ್ ಜೊತೆ ತೈಲ ವ್ಯವಹಾರ ಹೊಂದಿರುವ ವಿವಿಧ ದೇಶಗಳ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅವುಗಳಲ್ಲಿ ಭಾರತದ 6 ಕಂಪನಿಗಳು ಸೇರಿವೆ ಎಂದು ವರದಿಗಳು ಹೇಳಿವೆ.

ಇರಾನ್ ಮಧ್ಯ ಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುತ್ತಿದೆ. ತೈಲ ವ್ಯವಹಾರದ ಆದಾಯವನ್ನು ವಿವಿಧ ದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುತ್ತಿದೆ. ತನ್ನದೇ ಜನರನ್ನು ಧಮನಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ಪ್ರಮುಖವಾಗಿ ಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟರ್ಕಿ ಮತ್ತು ಇಂಡೋನೇಷ್ಯಾದ ಕಂಪನಿಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಅವರು ಹೇಳಿದಂತೆ, ಇರಾನ್ ಜೊತೆ ತೈಲ ವ್ಯವಹಾರ ಮಾಡಲು ಮುಂದಾಗುವ ದೇಶ, ಕಂಪನಿ ಮತ್ತು ವ್ಯಕ್ತಿಗಳು ಸ್ವಯಂ ಅಪಾಯ ತಂದುಕೊಳ್ಳಿಲಿದ್ದಾರೆ. ಅವರಿಗೆ ಅಮೆರಿಕದಲ್ಲಿ ವ್ಯವಹಾರ ನಡೆಸಲು ನಿರ್ಬಂಧ ವಿಧಿಸಲಾಗುವುದು ಎಂದು ಅಮೆರಿಕದ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತದ ಪೆಟ್ರೋಕೆಮಿಕಲ್ ಟ್ರೇಡಿಂಗ್ ಕಂಪನಿ ಆಲ್ಕೆಮಿಕಲ್ ಸೊಲ್ಯೂಷನ್ಸ್ 2024ರ ಜನವರಿಯಿಂದ ಡಿಸೆಂಬರ್ ನಡುವೆ ಬಹು ಕಂಪನಿಗಳ ಮೂಲಕ 84 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿರುವ ಆರೋಪವಿದೆ.

ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ ಕಂಪನಿಯು 2024ರ ಜನವರಿ 2025ರ ಜನವರಿ ನಡುವೆ ಬಹು ಕಂಪನಿಗಳಿಂದ ಮೆಥನಾಲ್ ಮತ್ತು ಟೊಲುಯೀನ್ ಸೇರಿದಂತೆ 22 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಕಾಂಚನ್ ಪಾಲಿಮರ್ಸ್ ಕಂಪನಿಯು 2024ರ ಫೆಬ್ರವರಿಯಿಂದ ಜುಲೈ ನಡುವೆ ಯುಎಇ ಮೂಲದ ತನಾಯಿಸ್ ಟ್ರೇಡಿಂಗ್‌ನಿಂದ ಪಾಲಿಥಿಲೀನ್ ಸೇರಿದಂತೆ 1.3 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್ ಕಂಪನಿಯು 2024ರ ಜನವರಿಯಿಂದ 2025ರ ಜನವರಿ ನಡುವೆ ಬಹು ಕಂಪನಿಗಳಿಂದ 49 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಟೊಲ್ಯೂನ್ ಸೇರಿದಂತೆ ಇರಾನ್ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಇನ್ನುಳಿದ ಎರಡು ಭಾರತೀಯ ಕಂಪನಿಗಳಾದ ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್ ಮತ್ತು ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್ ಕಳೆದ ವರ್ಷದ ಬಹು ಕಂಪನಿಗಳೊಂದಿಗೆ ಕ್ರಮವಾಗಿ 51 ಮಿಲಿಯನ್ ಡಾಲರ್ ಮತ್ತು 14 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ವ್ಯವಹಾರ ನಡೆಸಿವೆ ಎಂದು ಹೇಳಲಾಗಿದೆ.

ಉದ್ದೇಶಪೂರ್ವಕವಾಗಿ ಇರಾನ್‌ನಿಂದ ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿ, ಸ್ವಾಧೀನ, ಮಾರಾಟ, ಸಾಗಣೆ ಮತ್ತು ಮಾರುಕಟ್ಟೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಕಂಪನಿಗಳಿಗೆ ಅಮೆರಿಕ ನಿರ್ಬಂಧ ವಿಧಿಸಿದೆ ಎಂದು ವರದಿಗಳು ಹೇಳಿವೆ.

ಭಾರತಕ್ಕೆ ಶೇ.25 ಸುಂಕ ವಿಧಿಸಿದ ಟ್ರಂಪ್ ಆಡಳಿತ: ಆಗಸ್ಟ್ 1ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...