Homeಅಂತರಾಷ್ಟ್ರೀಯಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

ಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

- Advertisement -
- Advertisement -

ಇರಾನ್ ಜೊತೆಗೆ ತೈಲ ಅಥವಾ ಪೆಟ್ರೋಕೆಮಿಕಲ್ ಉತ್ಪನ್ನಗಳ ಮಾರಾಟ ಮತ್ತು ಖರೀದಿ ಮಾಡುತ್ತಿರುವ ಕಾರಣ ನೀಡಿ ಭಾರತದ ಆರು ಕಂಪನಿಗಳ ಮೇಲೆ ಟ್ರಂಪ್ ಆಡಳಿತವು ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ಭಾರತದ ಕಂಪನಿಗಳು ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿ ಪೆಟ್ರೋಲಿಯಂ ಉತ್ಪನ್ನಗಳ ಖರೀದಿ ಮತ್ತು ಮಾರುಕಟ್ಟೆ ವಹಿವಾಟು ನಡೆಸುತ್ತಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಆರೋಪಿಸಿದೆ.

ಆಲ್ಕೆಮಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್, ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್, ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ, ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್, ಕಾಂಚನ್ ಪಾಲಿಮರ್ಸ್ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಇರಾನ್ ಜೊತೆ ತೈಲ ವ್ಯವಹಾರ ಹೊಂದಿರುವ ವಿವಿಧ ದೇಶಗಳ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅವುಗಳಲ್ಲಿ ಭಾರತದ 6 ಕಂಪನಿಗಳು ಸೇರಿವೆ ಎಂದು ವರದಿಗಳು ಹೇಳಿವೆ.

ಇರಾನ್ ಮಧ್ಯ ಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುತ್ತಿದೆ. ತೈಲ ವ್ಯವಹಾರದ ಆದಾಯವನ್ನು ವಿವಿಧ ದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುತ್ತಿದೆ. ತನ್ನದೇ ಜನರನ್ನು ಧಮನಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ಪ್ರಮುಖವಾಗಿ ಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟರ್ಕಿ ಮತ್ತು ಇಂಡೋನೇಷ್ಯಾದ ಕಂಪನಿಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಅವರು ಹೇಳಿದಂತೆ, ಇರಾನ್ ಜೊತೆ ತೈಲ ವ್ಯವಹಾರ ಮಾಡಲು ಮುಂದಾಗುವ ದೇಶ, ಕಂಪನಿ ಮತ್ತು ವ್ಯಕ್ತಿಗಳು ಸ್ವಯಂ ಅಪಾಯ ತಂದುಕೊಳ್ಳಿಲಿದ್ದಾರೆ. ಅವರಿಗೆ ಅಮೆರಿಕದಲ್ಲಿ ವ್ಯವಹಾರ ನಡೆಸಲು ನಿರ್ಬಂಧ ವಿಧಿಸಲಾಗುವುದು ಎಂದು ಅಮೆರಿಕದ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತದ ಪೆಟ್ರೋಕೆಮಿಕಲ್ ಟ್ರೇಡಿಂಗ್ ಕಂಪನಿ ಆಲ್ಕೆಮಿಕಲ್ ಸೊಲ್ಯೂಷನ್ಸ್ 2024ರ ಜನವರಿಯಿಂದ ಡಿಸೆಂಬರ್ ನಡುವೆ ಬಹು ಕಂಪನಿಗಳ ಮೂಲಕ 84 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿರುವ ಆರೋಪವಿದೆ.

ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ ಕಂಪನಿಯು 2024ರ ಜನವರಿ 2025ರ ಜನವರಿ ನಡುವೆ ಬಹು ಕಂಪನಿಗಳಿಂದ ಮೆಥನಾಲ್ ಮತ್ತು ಟೊಲುಯೀನ್ ಸೇರಿದಂತೆ 22 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಕಾಂಚನ್ ಪಾಲಿಮರ್ಸ್ ಕಂಪನಿಯು 2024ರ ಫೆಬ್ರವರಿಯಿಂದ ಜುಲೈ ನಡುವೆ ಯುಎಇ ಮೂಲದ ತನಾಯಿಸ್ ಟ್ರೇಡಿಂಗ್‌ನಿಂದ ಪಾಲಿಥಿಲೀನ್ ಸೇರಿದಂತೆ 1.3 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್ ಕಂಪನಿಯು 2024ರ ಜನವರಿಯಿಂದ 2025ರ ಜನವರಿ ನಡುವೆ ಬಹು ಕಂಪನಿಗಳಿಂದ 49 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಟೊಲ್ಯೂನ್ ಸೇರಿದಂತೆ ಇರಾನ್ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಇನ್ನುಳಿದ ಎರಡು ಭಾರತೀಯ ಕಂಪನಿಗಳಾದ ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್ ಮತ್ತು ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್ ಕಳೆದ ವರ್ಷದ ಬಹು ಕಂಪನಿಗಳೊಂದಿಗೆ ಕ್ರಮವಾಗಿ 51 ಮಿಲಿಯನ್ ಡಾಲರ್ ಮತ್ತು 14 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ವ್ಯವಹಾರ ನಡೆಸಿವೆ ಎಂದು ಹೇಳಲಾಗಿದೆ.

ಉದ್ದೇಶಪೂರ್ವಕವಾಗಿ ಇರಾನ್‌ನಿಂದ ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿ, ಸ್ವಾಧೀನ, ಮಾರಾಟ, ಸಾಗಣೆ ಮತ್ತು ಮಾರುಕಟ್ಟೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಕಂಪನಿಗಳಿಗೆ ಅಮೆರಿಕ ನಿರ್ಬಂಧ ವಿಧಿಸಿದೆ ಎಂದು ವರದಿಗಳು ಹೇಳಿವೆ.

ಭಾರತಕ್ಕೆ ಶೇ.25 ಸುಂಕ ವಿಧಿಸಿದ ಟ್ರಂಪ್ ಆಡಳಿತ: ಆಗಸ್ಟ್ 1ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....