Homeಅಂತರಾಷ್ಟ್ರೀಯಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

ಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

- Advertisement -
- Advertisement -

ಇರಾನ್ ಜೊತೆಗೆ ತೈಲ ಅಥವಾ ಪೆಟ್ರೋಕೆಮಿಕಲ್ ಉತ್ಪನ್ನಗಳ ಮಾರಾಟ ಮತ್ತು ಖರೀದಿ ಮಾಡುತ್ತಿರುವ ಕಾರಣ ನೀಡಿ ಭಾರತದ ಆರು ಕಂಪನಿಗಳ ಮೇಲೆ ಟ್ರಂಪ್ ಆಡಳಿತವು ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ಭಾರತದ ಕಂಪನಿಗಳು ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿ ಪೆಟ್ರೋಲಿಯಂ ಉತ್ಪನ್ನಗಳ ಖರೀದಿ ಮತ್ತು ಮಾರುಕಟ್ಟೆ ವಹಿವಾಟು ನಡೆಸುತ್ತಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಆರೋಪಿಸಿದೆ.

ಆಲ್ಕೆಮಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್, ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್, ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ, ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್, ಕಾಂಚನ್ ಪಾಲಿಮರ್ಸ್ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಇರಾನ್ ಜೊತೆ ತೈಲ ವ್ಯವಹಾರ ಹೊಂದಿರುವ ವಿವಿಧ ದೇಶಗಳ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅವುಗಳಲ್ಲಿ ಭಾರತದ 6 ಕಂಪನಿಗಳು ಸೇರಿವೆ ಎಂದು ವರದಿಗಳು ಹೇಳಿವೆ.

ಇರಾನ್ ಮಧ್ಯ ಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುತ್ತಿದೆ. ತೈಲ ವ್ಯವಹಾರದ ಆದಾಯವನ್ನು ವಿವಿಧ ದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುತ್ತಿದೆ. ತನ್ನದೇ ಜನರನ್ನು ಧಮನಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ಪ್ರಮುಖವಾಗಿ ಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟರ್ಕಿ ಮತ್ತು ಇಂಡೋನೇಷ್ಯಾದ ಕಂಪನಿಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಅವರು ಹೇಳಿದಂತೆ, ಇರಾನ್ ಜೊತೆ ತೈಲ ವ್ಯವಹಾರ ಮಾಡಲು ಮುಂದಾಗುವ ದೇಶ, ಕಂಪನಿ ಮತ್ತು ವ್ಯಕ್ತಿಗಳು ಸ್ವಯಂ ಅಪಾಯ ತಂದುಕೊಳ್ಳಿಲಿದ್ದಾರೆ. ಅವರಿಗೆ ಅಮೆರಿಕದಲ್ಲಿ ವ್ಯವಹಾರ ನಡೆಸಲು ನಿರ್ಬಂಧ ವಿಧಿಸಲಾಗುವುದು ಎಂದು ಅಮೆರಿಕದ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತದ ಪೆಟ್ರೋಕೆಮಿಕಲ್ ಟ್ರೇಡಿಂಗ್ ಕಂಪನಿ ಆಲ್ಕೆಮಿಕಲ್ ಸೊಲ್ಯೂಷನ್ಸ್ 2024ರ ಜನವರಿಯಿಂದ ಡಿಸೆಂಬರ್ ನಡುವೆ ಬಹು ಕಂಪನಿಗಳ ಮೂಲಕ 84 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿರುವ ಆರೋಪವಿದೆ.

ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ ಕಂಪನಿಯು 2024ರ ಜನವರಿ 2025ರ ಜನವರಿ ನಡುವೆ ಬಹು ಕಂಪನಿಗಳಿಂದ ಮೆಥನಾಲ್ ಮತ್ತು ಟೊಲುಯೀನ್ ಸೇರಿದಂತೆ 22 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಕಾಂಚನ್ ಪಾಲಿಮರ್ಸ್ ಕಂಪನಿಯು 2024ರ ಫೆಬ್ರವರಿಯಿಂದ ಜುಲೈ ನಡುವೆ ಯುಎಇ ಮೂಲದ ತನಾಯಿಸ್ ಟ್ರೇಡಿಂಗ್‌ನಿಂದ ಪಾಲಿಥಿಲೀನ್ ಸೇರಿದಂತೆ 1.3 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್ ಕಂಪನಿಯು 2024ರ ಜನವರಿಯಿಂದ 2025ರ ಜನವರಿ ನಡುವೆ ಬಹು ಕಂಪನಿಗಳಿಂದ 49 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಟೊಲ್ಯೂನ್ ಸೇರಿದಂತೆ ಇರಾನ್ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಇನ್ನುಳಿದ ಎರಡು ಭಾರತೀಯ ಕಂಪನಿಗಳಾದ ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್ ಮತ್ತು ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್ ಕಳೆದ ವರ್ಷದ ಬಹು ಕಂಪನಿಗಳೊಂದಿಗೆ ಕ್ರಮವಾಗಿ 51 ಮಿಲಿಯನ್ ಡಾಲರ್ ಮತ್ತು 14 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ವ್ಯವಹಾರ ನಡೆಸಿವೆ ಎಂದು ಹೇಳಲಾಗಿದೆ.

ಉದ್ದೇಶಪೂರ್ವಕವಾಗಿ ಇರಾನ್‌ನಿಂದ ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿ, ಸ್ವಾಧೀನ, ಮಾರಾಟ, ಸಾಗಣೆ ಮತ್ತು ಮಾರುಕಟ್ಟೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಕಂಪನಿಗಳಿಗೆ ಅಮೆರಿಕ ನಿರ್ಬಂಧ ವಿಧಿಸಿದೆ ಎಂದು ವರದಿಗಳು ಹೇಳಿವೆ.

ಭಾರತಕ್ಕೆ ಶೇ.25 ಸುಂಕ ವಿಧಿಸಿದ ಟ್ರಂಪ್ ಆಡಳಿತ: ಆಗಸ್ಟ್ 1ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...