Homeಅಂತರಾಷ್ಟ್ರೀಯಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

ಇರಾನ್ ಜೊತೆ ತೈಲ ವ್ಯಾಪಾರ: ಭಾರತದ ಆರು ಕಂಪನಿಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

- Advertisement -
- Advertisement -

ಇರಾನ್ ಜೊತೆಗೆ ತೈಲ ಅಥವಾ ಪೆಟ್ರೋಕೆಮಿಕಲ್ ಉತ್ಪನ್ನಗಳ ಮಾರಾಟ ಮತ್ತು ಖರೀದಿ ಮಾಡುತ್ತಿರುವ ಕಾರಣ ನೀಡಿ ಭಾರತದ ಆರು ಕಂಪನಿಗಳ ಮೇಲೆ ಟ್ರಂಪ್ ಆಡಳಿತವು ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ಭಾರತದ ಕಂಪನಿಗಳು ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿ ಪೆಟ್ರೋಲಿಯಂ ಉತ್ಪನ್ನಗಳ ಖರೀದಿ ಮತ್ತು ಮಾರುಕಟ್ಟೆ ವಹಿವಾಟು ನಡೆಸುತ್ತಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಆರೋಪಿಸಿದೆ.

ಆಲ್ಕೆಮಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್, ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್, ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ, ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್, ಕಾಂಚನ್ ಪಾಲಿಮರ್ಸ್ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಇರಾನ್ ಜೊತೆ ತೈಲ ವ್ಯವಹಾರ ಹೊಂದಿರುವ ವಿವಿಧ ದೇಶಗಳ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅವುಗಳಲ್ಲಿ ಭಾರತದ 6 ಕಂಪನಿಗಳು ಸೇರಿವೆ ಎಂದು ವರದಿಗಳು ಹೇಳಿವೆ.

ಇರಾನ್ ಮಧ್ಯ ಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುತ್ತಿದೆ. ತೈಲ ವ್ಯವಹಾರದ ಆದಾಯವನ್ನು ವಿವಿಧ ದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುತ್ತಿದೆ. ತನ್ನದೇ ಜನರನ್ನು ಧಮನಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ಪ್ರಮುಖವಾಗಿ ಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟರ್ಕಿ ಮತ್ತು ಇಂಡೋನೇಷ್ಯಾದ ಕಂಪನಿಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಅವರು ಹೇಳಿದಂತೆ, ಇರಾನ್ ಜೊತೆ ತೈಲ ವ್ಯವಹಾರ ಮಾಡಲು ಮುಂದಾಗುವ ದೇಶ, ಕಂಪನಿ ಮತ್ತು ವ್ಯಕ್ತಿಗಳು ಸ್ವಯಂ ಅಪಾಯ ತಂದುಕೊಳ್ಳಿಲಿದ್ದಾರೆ. ಅವರಿಗೆ ಅಮೆರಿಕದಲ್ಲಿ ವ್ಯವಹಾರ ನಡೆಸಲು ನಿರ್ಬಂಧ ವಿಧಿಸಲಾಗುವುದು ಎಂದು ಅಮೆರಿಕದ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತದ ಪೆಟ್ರೋಕೆಮಿಕಲ್ ಟ್ರೇಡಿಂಗ್ ಕಂಪನಿ ಆಲ್ಕೆಮಿಕಲ್ ಸೊಲ್ಯೂಷನ್ಸ್ 2024ರ ಜನವರಿಯಿಂದ ಡಿಸೆಂಬರ್ ನಡುವೆ ಬಹು ಕಂಪನಿಗಳ ಮೂಲಕ 84 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿರುವ ಆರೋಪವಿದೆ.

ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ ಕಂಪನಿಯು 2024ರ ಜನವರಿ 2025ರ ಜನವರಿ ನಡುವೆ ಬಹು ಕಂಪನಿಗಳಿಂದ ಮೆಥನಾಲ್ ಮತ್ತು ಟೊಲುಯೀನ್ ಸೇರಿದಂತೆ 22 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಕಾಂಚನ್ ಪಾಲಿಮರ್ಸ್ ಕಂಪನಿಯು 2024ರ ಫೆಬ್ರವರಿಯಿಂದ ಜುಲೈ ನಡುವೆ ಯುಎಇ ಮೂಲದ ತನಾಯಿಸ್ ಟ್ರೇಡಿಂಗ್‌ನಿಂದ ಪಾಲಿಥಿಲೀನ್ ಸೇರಿದಂತೆ 1.3 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಮೌಲ್ಯದ ಇರಾನಿನ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್ ಕಂಪನಿಯು 2024ರ ಜನವರಿಯಿಂದ 2025ರ ಜನವರಿ ನಡುವೆ ಬಹು ಕಂಪನಿಗಳಿಂದ 49 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಮೌಲ್ಯದ ಟೊಲ್ಯೂನ್ ಸೇರಿದಂತೆ ಇರಾನ್ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎನ್ನಲಾಗಿದೆ.

ಇನ್ನುಳಿದ ಎರಡು ಭಾರತೀಯ ಕಂಪನಿಗಳಾದ ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್ ಮತ್ತು ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್ ಕಳೆದ ವರ್ಷದ ಬಹು ಕಂಪನಿಗಳೊಂದಿಗೆ ಕ್ರಮವಾಗಿ 51 ಮಿಲಿಯನ್ ಡಾಲರ್ ಮತ್ತು 14 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ವ್ಯವಹಾರ ನಡೆಸಿವೆ ಎಂದು ಹೇಳಲಾಗಿದೆ.

ಉದ್ದೇಶಪೂರ್ವಕವಾಗಿ ಇರಾನ್‌ನಿಂದ ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿ, ಸ್ವಾಧೀನ, ಮಾರಾಟ, ಸಾಗಣೆ ಮತ್ತು ಮಾರುಕಟ್ಟೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಕಂಪನಿಗಳಿಗೆ ಅಮೆರಿಕ ನಿರ್ಬಂಧ ವಿಧಿಸಿದೆ ಎಂದು ವರದಿಗಳು ಹೇಳಿವೆ.

ಭಾರತಕ್ಕೆ ಶೇ.25 ಸುಂಕ ವಿಧಿಸಿದ ಟ್ರಂಪ್ ಆಡಳಿತ: ಆಗಸ್ಟ್ 1ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...