Homeಮುಖಪುಟಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಲ್ಲಿ ಮೃತರ ಸಂಖ್ಯೆ ಗಣನೀಯ ಹೆಚ್ಚಳ: ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಲ್ಲಿ ಮೃತರ ಸಂಖ್ಯೆ ಗಣನೀಯ ಹೆಚ್ಚಳ: ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

- Advertisement -
- Advertisement -

ಪ್ಯಾಲೆಸ್ತೀನ್‌ ಗುಂಪು ಹಮಾಸ್‌ ಇಸ್ರೇಲ್‌ ಮೇಲೆ ನಡೆಸಿದ ಭೂ, ನೌಕಾ, ವಾಯು ದಾಳಿಯಲ್ಲಿ ಹಲವಾರು ಅಮೆರಿಕದ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಲ್ಲದೆ ಇಸ್ರೇಲ್‌ಗೆ ಎಲ್ಲಾ ರೀತಿಯ ನೆರವನ್ನು ಅಮೆರಿಕ ಘೋಷಿಸಿದೆ.

ಕೊಲ್ಲಲ್ಪಟ್ಟ ಅಮೇರಿಕನ್ನರ ನಿಖರ ಸಂಖ್ಯೆ ಮತ್ತು ಮೃತರ ಗುರುತಿನ ಬಗ್ಗೆ ಯಾವುದೇ ಹೆಚ್ಚಿನ ವಿವರಗಳನ್ನು ಅಧಿಕಾರಿ ಈವರೆಗೆ ಒದಗಿಸಿಲ್ಲ. ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಿ, ನಾವು ಹಲವಾರು ಯುಎಸ್ ನಾಗರಿಕರ ಸಾವನ್ನು ದೃಢೀಕರಿಸಿದ್ದೇವೆ ಎಂದು ಹೇಳಿದ್ದಾರೆ. ನಾವು ಮೃತರಿಗೆ ಮತ್ತು ಎಲ್ಲಾ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನವನ್ನು ಹೇಳುತ್ತೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ಗೆ ಮಿತ್ರರಾಷ್ಟ್ರ ಅಮೆರಿಕ ಬೆಂಬಲಕ್ಕೆ ನಿಂತಿದ್ದು,  US ಅಧ್ಯಕ್ಷ ಜೋ ಬಿಡನ್  ಇಸ್ರೇಲ್‌ಗೆ, ಅಮೆರಿಕಾ ಹಡಗುಗಳು ಮತ್ತು ಯುದ್ಧವಿಮಾನಗಳ ನೆರವು ಕಳುಹಿಸಲು ಆದೇಶಿಸಿದ್ದಾರೆ.

USS ಗೆರಾಲ್ಡ್ R ಫೋರ್ಡ್ ಮತ್ತು ಅದರ ಜೊತೆಗೆ ಯುದ್ಧನೌಕೆಗಳನ್ನು ಪೂರ್ವ ಮೆಡಿಟರೇನಿಯನ್‌ಗೆ ಕಳುಹಿಸುತ್ತಿರುವುದಾಗಿ ಹೇಳಿದೆ. ಗಾಜಾ ಪಟ್ಟಿಯಿಂದ ಇಸ್ರೇಲ್‌ ಮೇಲೆ ಸಾವಿರಾರು ರಾಕೆಟ್‌ಗಳ ಸರಣಿ ದಾಳಿ ಬಳಿಕ ಅಮೆರಿಕ ಇಸ್ರೇಲ್‌ಗೆ ಬೆಂಬಲವನ್ನುಸೂಚಿಸಿದೆ.

ಅಮೆರಿಕಾ ಅಧ್ಯಕ್ಷ ಬಿಡೆನ್ ಭಾನುವಾರ ಇಸ್ರೇಲ್‌ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದು, ಇಸ್ರೇಲ್‌ ರಕ್ಷಣಾ ಪಡೆಗಳಿಗೆ ಹೆಚ್ಚುವರಿ ಸಹಾಯವನ್ನು ಮಾಡುವುದಾಗಿ ಹೇಳಿದ್ದಾರೆ.

ಇದಲ್ಲದೆ ದಾಳಿಯ ನಂತರ ಕಾಣೆಯಾದ ಮತ್ತು ಮೃತ ಅಮೆರಿಕನ್ನರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್  ಹೇಳಿದ್ದಾರೆ. ಇಸ್ರೇಲ್ ವಿರುದ್ಧದ ಭಯೋತ್ಪಾದಕ ದಾಳಿ ಕುರಿತು ಚರ್ಚಿಸಲು ನಾನು ಪ್ಯಾಲೇಸ್ತೀನಿ ಪ್ರಾಧಿಕಾರದ ಅಧ್ಯಕ್ಷ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದೇನೆ. ಈ ಪ್ರದೇಶದ ಎಲ್ಲಾ ನಾಯಕರು ಭಯೋತ್ಪಾದನೆಯ ಈ ಭಯಾನಕ ಕೃತ್ಯಗಳನ್ನು ಖಂಡಿಸಬೇಕು ಎಂದು ನಾನು ಒತ್ತಾಯಿಸಿದೆ ಎಂದು ಬ್ಲಿಂಕೆನ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇಸ್ರೇಲಿ-ಪ್ಯಾಲೆಸ್ತೀನ್‌ ಸಂಘರ್ಷದ ಉಲ್ಬಣದಿಂದ ಸಾವಿನ ಸಂಖ್ಯೆ 1,100 ದಾಟಿದೆ. ಇಸ್ರೇಲ್‌ನಲ್ಲಿ 700ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು ಮತ್ತು ಗಾಜಾದಲ್ಲಿ ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: ಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...