Homeಅಂತರಾಷ್ಟ್ರೀಯರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

- Advertisement -
- Advertisement -

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15) ತಿಳಿಸಿದ್ದಾರೆ.

ಇರಾನ್ ಮತ್ತು ರಷ್ಯಾದಿಂದ ತೈಲ ಖರೀದಿಸುವುದರಿಂದ ಅಮೆರಿಕದ ನಿರ್ಬಂಧಗಳಿಗೆ ಗುರಿಯಾಗದಂತೆ ಈ ವಿನಾಯಿತಿಗಳು ರಕ್ಷಣೆ ನೀಡುತ್ತಿದ್ದವು. ಆದರೆ, ಅಮೆರಿಕ ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಮುಂಬರುವ ದಿನಗಳಲ್ಲಿ ಇರಾನ್ ಮತ್ತು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಅಮೆರಿಕದ ಆರ್ಥಿಕ ನಿರ್ಬಂಧಗಳು ಅನ್ವಯವಾಗುವ ಸಾಧ್ಯತೆ ಇದೆ.

ವಿನಾಯಿತಿಗಳು ಮಾರ್ಚ್ 11ಕ್ಕಿಂತ ಮೊದಲು ‘ಸಾಗಣೆಯಲ್ಲಿದ್ದ (on water)’ ತೈಲಕ್ಕೆ ಮಾತ್ರ ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಅಂತಹ ಎಲ್ಲಾ ವಿನಾಯಿತಿಗಳನ್ನು ಈಗಾಗಲೇ ಬಳಸಿಕೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದ ಸಂಘರ್ಷದ ನಡುವೆ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ರಷ್ಯಾದ ತೈಲವನ್ನು ಖರೀದಿಸಲು ಅಮೆರಿಕವು ಮಾರ್ಚ್ 5ರಂದು ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳಿಗೆ 30 ದಿನಗಳ ವಿನಾಯಿತಿಯನ್ನು ನೀಡಿತ್ತು. ಆ ಸಮಯದಲ್ಲಿ ಅಮೆರಿಕದ ಖಜಾನೆ ಕಾರ್ಯದರ್ಶಿಯವರು ಈ ಕ್ರಮವನ್ನು ಜಾಗತಿಕ ತೈಲ ಪೂರೈಕೆಯನ್ನು ಸ್ಥಿರವಾಗಿಡಲು ಕೈಗೊಂಡ ಅಲ್ಪಾವಧಿಯ ಕ್ರಮ ಎಂದು ಬಣ್ಣಿಸಿದ್ದರು. ಅಲ್ಲದೆ, ಈ ನಿರ್ಧಾರದಿಂದ ರಷ್ಯಾಕ್ಕೆ ಯಾವುದೇ ‘ಗಮನಾರ್ಹ ಆರ್ಥಿಕ ಲಾಭ’ ಸಿಗುವುದಿಲ್ಲ ಎಂದು ಪ್ರತಿಪಾದಿಸಿದ್ದರು.

NDTV ವರದಿ ಪ್ರಕಾರ, ಈ ವಿನಾಯಿತಿಯಿಂದಾಗಿ ಜಾಗತಿಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರೂ ಸಹ, ಭಾರತವು ರಷ್ಯಾದಿಂದ ಹೆಚ್ಚಿನ ಪ್ರಮಾಣದ ತೈಲವನ್ನು ಪಡೆಯಲು ಸಾಧ್ಯವಾಗಿದೆ. ಈ ಸಡಿಲಿಕೆಯ ಅವಧಿಯಲ್ಲಿ ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳು ಸುಮಾರು 3 ಕೋಟಿ (30 ಮಿಲಿಯನ್) ಬ್ಯಾರೆಲ್ ತೈಲಕ್ಕೆ ಆರ್ಡರ್ ನೀಡಿವೆ ಎಂದು ತಿಳಿದುಬಂದಿದೆ.

ಭಾರತಕ್ಕೆ ವಿನಾಯಿತಿ ನೀಡಿದ ಒಂದು ವಾರದ ನಂತರ, ಮಾರ್ಚ್ 11ಕ್ಕಿಂತ ಮೊದಲು ಸಾಗಣೆಗೆ ಸಿದ್ಧವಾಗಿದ್ದ ರಷ್ಯಾದ ಕಚ್ಚಾ ತೈಲಕ್ಕಾಗಿ ಅಮೆರಿಕ ಇತರ ರಾಷ್ಟ್ರಗಳಿಗೂ ಇದೇ ರೀತಿಯ 30 ದಿನಗಳ ಪರವಾನಗಿಯನ್ನು ವಿಸ್ತರಿಸಿತ್ತು. ಆ ವಿನಾಯಿತಿಯ ಅವಧಿಯು ಏಪ್ರಿಲ್ 11 ರಂದು ಮುಕ್ತಾಯಗೊಂಡಿದೆ.

ಮಾರ್ಚ್ 20ಕ್ಕಿಂತ ಮೊದಲು ಹಡಗುಗಳಿಗೆ ಲೋಡ್ ಮಾಡಲಾದ ಇರಾನ್ ಮೂಲದ ತೈಲ ಸಾಗಣೆಗೆ ನೀಡಲಾಗಿದ್ದ ಇಂತಹದ್ದೇ ವಿನಾಯಿತಿಯು ಈ ಭಾನುವಾರ ಮುಕ್ತಾಯಗೊಳ್ಳಲಿದೆ.

ಮಾರ್ಚ್ ತಿಂಗಳಿನಲ್ಲಿ ಇರಾನ್ ಸಂಬಂಧಿತ ಅಡೆತಡೆಗಳಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಉಂಟಾಗಿದ್ದ ಒತ್ತಡವನ್ನು ಕಡಿಮೆ ಮಾಡಲು ಈ ವಿನಾಯಿತಿಗಳನ್ನು ತಾತ್ಕಾಲಿಕ ಕ್ರಮವಾಗಿ ಜಾರಿಗೆ ತರಲಾಗಿತ್ತು. ನಿರ್ದಿಷ್ಟ ಗಡುವಿನ ಮೊದಲು ಈಗಾಗಲೇ ಹಡಗುಗಳಿಗೆ ಲೋಡ್ ಮಾಡಲಾದ ತೈಲವನ್ನು ಖರೀದಿಸಲು ಈ ಕ್ರಮವು ಅವಕಾಶ ಮಾಡಿಕೊಟ್ಟಿತ್ತು.

ಭಾರತವು ತೈಲ ಮತ್ತು ಅನಿಲದ ನಿವ್ವಳ ಆಮದುದಾರ ರಾಷ್ಟ್ರವಾಗಿದ್ದು, ತನ್ನ ಇಂಧನ ಅಗತ್ಯತೆಗಳ ಸುಮಾರು ಶೇಕಡಾ 80 ರಿಂದ 85 ರಷ್ಟನ್ನು ಆಮದಿನ ಮೂಲಕವೇ ಪೂರೈಸಿಕೊಳ್ಳುತ್ತಿದೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಇರಾನ್ ದೇಶವು ಬಹುತೇಕ ವಾಣಿಜ್ಯ ಹಡಗು ಸಂಚಾರಕ್ಕೆ ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಕಿರಿದಾದ ಜಲಮಾರ್ಗವು ಪರ್ಷಿಯನ್ ಕೊಲ್ಲಿಯನ್ನು ಅರಬ್ಬಿ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಜಾಗತಿಕ ಪೆಟ್ರೋಲಿಯಂ ಪೂರೈಕೆಯ ಸುಮಾರು 20% ರಷ್ಟು ಭಾಗವು ಈ ಸಮುದ್ರ ಮಾರ್ಗದ ಮೂಲಕವೇ ಹಾದುಹೋಗುತ್ತದೆ.

ಬುಧವಾರದ ಈ ಬೆಳವಣಿಗೆಗಳು, ರಷ್ಯಾದ ಕಚ್ಚಾ ತೈಲವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವ ವಿಚಾರದಲ್ಲಿ ಅಮೆರಿಕ ಮತ್ತು ಭಾರತ ನಡುವೆ ಈ ಹಿಂದೆ ಉಂಟಾಗಿದ್ದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ನಡೆದಿವೆ.

ಉಕ್ರೇನ್ ಯುದ್ಧದ ಮಧ್ಯೆಯೇ ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದಕ್ಕಾಗಿ ಟ್ರಂಪ್ ಆಡಳಿತವು ಆಗಸ್ಟ್‌ನಲ್ಲಿ ಭಾರತದ ಮೇಲೆ ದಂಡನಾತ್ಮಕ ಸುಂಕವನ್ನು ವಿಧಿಸಿತ್ತು. ಇದು ಅಮೆರಿಕದ ಒಟ್ಟು ಸುಂಕದ ದರವನ್ನು ಶೇಕಡಾ 50ಕ್ಕೆ ಏರಿಸಿತ್ತು.

ಫೆಬ್ರವರಿ 7ರಂದು, ರಷ್ಯಾದ ತೈಲವನ್ನು ಖರೀದಿಸಿದ ಕಾರಣಕ್ಕಾಗಿ ಭಾರತದ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ದಂಡನಾತ್ಮಕ ಸುಂಕವನ್ನು ರದ್ದುಗೊಳಿಸಲು ಅಧ್ಯಕ್ಷ ಟ್ರಂಪ್ ಕಾರ್ಯಕಾರಿ ಆದೇಶವನ್ನು ಹೊರಡಿಸಿದರು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂಕಿತ ದೊರೆತಿದ್ದು, ಅಮೆರಿಕಕ್ಕೆ ರಫ್ತಾಗುವ ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕದ ದರವು ಶೇಕಡಾ 18ಕ್ಕೆ ಇಳಿಕೆಯಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...