Homeಅಂತರಾಷ್ಟ್ರೀಯರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

- Advertisement -
- Advertisement -

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15) ತಿಳಿಸಿದ್ದಾರೆ.

ಇರಾನ್ ಮತ್ತು ರಷ್ಯಾದಿಂದ ತೈಲ ಖರೀದಿಸುವುದರಿಂದ ಅಮೆರಿಕದ ನಿರ್ಬಂಧಗಳಿಗೆ ಗುರಿಯಾಗದಂತೆ ಈ ವಿನಾಯಿತಿಗಳು ರಕ್ಷಣೆ ನೀಡುತ್ತಿದ್ದವು. ಆದರೆ, ಅಮೆರಿಕ ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಮುಂಬರುವ ದಿನಗಳಲ್ಲಿ ಇರಾನ್ ಮತ್ತು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಅಮೆರಿಕದ ಆರ್ಥಿಕ ನಿರ್ಬಂಧಗಳು ಅನ್ವಯವಾಗುವ ಸಾಧ್ಯತೆ ಇದೆ.

ವಿನಾಯಿತಿಗಳು ಮಾರ್ಚ್ 11ಕ್ಕಿಂತ ಮೊದಲು ‘ಸಾಗಣೆಯಲ್ಲಿದ್ದ (on water)’ ತೈಲಕ್ಕೆ ಮಾತ್ರ ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಅಂತಹ ಎಲ್ಲಾ ವಿನಾಯಿತಿಗಳನ್ನು ಈಗಾಗಲೇ ಬಳಸಿಕೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದ ಸಂಘರ್ಷದ ನಡುವೆ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ರಷ್ಯಾದ ತೈಲವನ್ನು ಖರೀದಿಸಲು ಅಮೆರಿಕವು ಮಾರ್ಚ್ 5ರಂದು ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳಿಗೆ 30 ದಿನಗಳ ವಿನಾಯಿತಿಯನ್ನು ನೀಡಿತ್ತು. ಆ ಸಮಯದಲ್ಲಿ ಅಮೆರಿಕದ ಖಜಾನೆ ಕಾರ್ಯದರ್ಶಿಯವರು ಈ ಕ್ರಮವನ್ನು ಜಾಗತಿಕ ತೈಲ ಪೂರೈಕೆಯನ್ನು ಸ್ಥಿರವಾಗಿಡಲು ಕೈಗೊಂಡ ಅಲ್ಪಾವಧಿಯ ಕ್ರಮ ಎಂದು ಬಣ್ಣಿಸಿದ್ದರು. ಅಲ್ಲದೆ, ಈ ನಿರ್ಧಾರದಿಂದ ರಷ್ಯಾಕ್ಕೆ ಯಾವುದೇ ‘ಗಮನಾರ್ಹ ಆರ್ಥಿಕ ಲಾಭ’ ಸಿಗುವುದಿಲ್ಲ ಎಂದು ಪ್ರತಿಪಾದಿಸಿದ್ದರು.

NDTV ವರದಿ ಪ್ರಕಾರ, ಈ ವಿನಾಯಿತಿಯಿಂದಾಗಿ ಜಾಗತಿಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರೂ ಸಹ, ಭಾರತವು ರಷ್ಯಾದಿಂದ ಹೆಚ್ಚಿನ ಪ್ರಮಾಣದ ತೈಲವನ್ನು ಪಡೆಯಲು ಸಾಧ್ಯವಾಗಿದೆ. ಈ ಸಡಿಲಿಕೆಯ ಅವಧಿಯಲ್ಲಿ ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳು ಸುಮಾರು 3 ಕೋಟಿ (30 ಮಿಲಿಯನ್) ಬ್ಯಾರೆಲ್ ತೈಲಕ್ಕೆ ಆರ್ಡರ್ ನೀಡಿವೆ ಎಂದು ತಿಳಿದುಬಂದಿದೆ.

ಭಾರತಕ್ಕೆ ವಿನಾಯಿತಿ ನೀಡಿದ ಒಂದು ವಾರದ ನಂತರ, ಮಾರ್ಚ್ 11ಕ್ಕಿಂತ ಮೊದಲು ಸಾಗಣೆಗೆ ಸಿದ್ಧವಾಗಿದ್ದ ರಷ್ಯಾದ ಕಚ್ಚಾ ತೈಲಕ್ಕಾಗಿ ಅಮೆರಿಕ ಇತರ ರಾಷ್ಟ್ರಗಳಿಗೂ ಇದೇ ರೀತಿಯ 30 ದಿನಗಳ ಪರವಾನಗಿಯನ್ನು ವಿಸ್ತರಿಸಿತ್ತು. ಆ ವಿನಾಯಿತಿಯ ಅವಧಿಯು ಏಪ್ರಿಲ್ 11 ರಂದು ಮುಕ್ತಾಯಗೊಂಡಿದೆ.

ಮಾರ್ಚ್ 20ಕ್ಕಿಂತ ಮೊದಲು ಹಡಗುಗಳಿಗೆ ಲೋಡ್ ಮಾಡಲಾದ ಇರಾನ್ ಮೂಲದ ತೈಲ ಸಾಗಣೆಗೆ ನೀಡಲಾಗಿದ್ದ ಇಂತಹದ್ದೇ ವಿನಾಯಿತಿಯು ಈ ಭಾನುವಾರ ಮುಕ್ತಾಯಗೊಳ್ಳಲಿದೆ.

ಮಾರ್ಚ್ ತಿಂಗಳಿನಲ್ಲಿ ಇರಾನ್ ಸಂಬಂಧಿತ ಅಡೆತಡೆಗಳಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಉಂಟಾಗಿದ್ದ ಒತ್ತಡವನ್ನು ಕಡಿಮೆ ಮಾಡಲು ಈ ವಿನಾಯಿತಿಗಳನ್ನು ತಾತ್ಕಾಲಿಕ ಕ್ರಮವಾಗಿ ಜಾರಿಗೆ ತರಲಾಗಿತ್ತು. ನಿರ್ದಿಷ್ಟ ಗಡುವಿನ ಮೊದಲು ಈಗಾಗಲೇ ಹಡಗುಗಳಿಗೆ ಲೋಡ್ ಮಾಡಲಾದ ತೈಲವನ್ನು ಖರೀದಿಸಲು ಈ ಕ್ರಮವು ಅವಕಾಶ ಮಾಡಿಕೊಟ್ಟಿತ್ತು.

ಭಾರತವು ತೈಲ ಮತ್ತು ಅನಿಲದ ನಿವ್ವಳ ಆಮದುದಾರ ರಾಷ್ಟ್ರವಾಗಿದ್ದು, ತನ್ನ ಇಂಧನ ಅಗತ್ಯತೆಗಳ ಸುಮಾರು ಶೇಕಡಾ 80 ರಿಂದ 85 ರಷ್ಟನ್ನು ಆಮದಿನ ಮೂಲಕವೇ ಪೂರೈಸಿಕೊಳ್ಳುತ್ತಿದೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಇರಾನ್ ದೇಶವು ಬಹುತೇಕ ವಾಣಿಜ್ಯ ಹಡಗು ಸಂಚಾರಕ್ಕೆ ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಕಿರಿದಾದ ಜಲಮಾರ್ಗವು ಪರ್ಷಿಯನ್ ಕೊಲ್ಲಿಯನ್ನು ಅರಬ್ಬಿ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಜಾಗತಿಕ ಪೆಟ್ರೋಲಿಯಂ ಪೂರೈಕೆಯ ಸುಮಾರು 20% ರಷ್ಟು ಭಾಗವು ಈ ಸಮುದ್ರ ಮಾರ್ಗದ ಮೂಲಕವೇ ಹಾದುಹೋಗುತ್ತದೆ.

ಬುಧವಾರದ ಈ ಬೆಳವಣಿಗೆಗಳು, ರಷ್ಯಾದ ಕಚ್ಚಾ ತೈಲವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವ ವಿಚಾರದಲ್ಲಿ ಅಮೆರಿಕ ಮತ್ತು ಭಾರತ ನಡುವೆ ಈ ಹಿಂದೆ ಉಂಟಾಗಿದ್ದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ನಡೆದಿವೆ.

ಉಕ್ರೇನ್ ಯುದ್ಧದ ಮಧ್ಯೆಯೇ ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದಕ್ಕಾಗಿ ಟ್ರಂಪ್ ಆಡಳಿತವು ಆಗಸ್ಟ್‌ನಲ್ಲಿ ಭಾರತದ ಮೇಲೆ ದಂಡನಾತ್ಮಕ ಸುಂಕವನ್ನು ವಿಧಿಸಿತ್ತು. ಇದು ಅಮೆರಿಕದ ಒಟ್ಟು ಸುಂಕದ ದರವನ್ನು ಶೇಕಡಾ 50ಕ್ಕೆ ಏರಿಸಿತ್ತು.

ಫೆಬ್ರವರಿ 7ರಂದು, ರಷ್ಯಾದ ತೈಲವನ್ನು ಖರೀದಿಸಿದ ಕಾರಣಕ್ಕಾಗಿ ಭಾರತದ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ದಂಡನಾತ್ಮಕ ಸುಂಕವನ್ನು ರದ್ದುಗೊಳಿಸಲು ಅಧ್ಯಕ್ಷ ಟ್ರಂಪ್ ಕಾರ್ಯಕಾರಿ ಆದೇಶವನ್ನು ಹೊರಡಿಸಿದರು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂಕಿತ ದೊರೆತಿದ್ದು, ಅಮೆರಿಕಕ್ಕೆ ರಫ್ತಾಗುವ ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕದ ದರವು ಶೇಕಡಾ 18ಕ್ಕೆ ಇಳಿಕೆಯಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...