Homeಅಂತರಾಷ್ಟ್ರೀಯರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

- Advertisement -
- Advertisement -

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15) ತಿಳಿಸಿದ್ದಾರೆ.

ಇರಾನ್ ಮತ್ತು ರಷ್ಯಾದಿಂದ ತೈಲ ಖರೀದಿಸುವುದರಿಂದ ಅಮೆರಿಕದ ನಿರ್ಬಂಧಗಳಿಗೆ ಗುರಿಯಾಗದಂತೆ ಈ ವಿನಾಯಿತಿಗಳು ರಕ್ಷಣೆ ನೀಡುತ್ತಿದ್ದವು. ಆದರೆ, ಅಮೆರಿಕ ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಮುಂಬರುವ ದಿನಗಳಲ್ಲಿ ಇರಾನ್ ಮತ್ತು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಅಮೆರಿಕದ ಆರ್ಥಿಕ ನಿರ್ಬಂಧಗಳು ಅನ್ವಯವಾಗುವ ಸಾಧ್ಯತೆ ಇದೆ.

ವಿನಾಯಿತಿಗಳು ಮಾರ್ಚ್ 11ಕ್ಕಿಂತ ಮೊದಲು ‘ಸಾಗಣೆಯಲ್ಲಿದ್ದ (on water)’ ತೈಲಕ್ಕೆ ಮಾತ್ರ ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಅಂತಹ ಎಲ್ಲಾ ವಿನಾಯಿತಿಗಳನ್ನು ಈಗಾಗಲೇ ಬಳಸಿಕೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದ ಸಂಘರ್ಷದ ನಡುವೆ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ರಷ್ಯಾದ ತೈಲವನ್ನು ಖರೀದಿಸಲು ಅಮೆರಿಕವು ಮಾರ್ಚ್ 5ರಂದು ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳಿಗೆ 30 ದಿನಗಳ ವಿನಾಯಿತಿಯನ್ನು ನೀಡಿತ್ತು. ಆ ಸಮಯದಲ್ಲಿ ಅಮೆರಿಕದ ಖಜಾನೆ ಕಾರ್ಯದರ್ಶಿಯವರು ಈ ಕ್ರಮವನ್ನು ಜಾಗತಿಕ ತೈಲ ಪೂರೈಕೆಯನ್ನು ಸ್ಥಿರವಾಗಿಡಲು ಕೈಗೊಂಡ ಅಲ್ಪಾವಧಿಯ ಕ್ರಮ ಎಂದು ಬಣ್ಣಿಸಿದ್ದರು. ಅಲ್ಲದೆ, ಈ ನಿರ್ಧಾರದಿಂದ ರಷ್ಯಾಕ್ಕೆ ಯಾವುದೇ ‘ಗಮನಾರ್ಹ ಆರ್ಥಿಕ ಲಾಭ’ ಸಿಗುವುದಿಲ್ಲ ಎಂದು ಪ್ರತಿಪಾದಿಸಿದ್ದರು.

NDTV ವರದಿ ಪ್ರಕಾರ, ಈ ವಿನಾಯಿತಿಯಿಂದಾಗಿ ಜಾಗತಿಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರೂ ಸಹ, ಭಾರತವು ರಷ್ಯಾದಿಂದ ಹೆಚ್ಚಿನ ಪ್ರಮಾಣದ ತೈಲವನ್ನು ಪಡೆಯಲು ಸಾಧ್ಯವಾಗಿದೆ. ಈ ಸಡಿಲಿಕೆಯ ಅವಧಿಯಲ್ಲಿ ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳು ಸುಮಾರು 3 ಕೋಟಿ (30 ಮಿಲಿಯನ್) ಬ್ಯಾರೆಲ್ ತೈಲಕ್ಕೆ ಆರ್ಡರ್ ನೀಡಿವೆ ಎಂದು ತಿಳಿದುಬಂದಿದೆ.

ಭಾರತಕ್ಕೆ ವಿನಾಯಿತಿ ನೀಡಿದ ಒಂದು ವಾರದ ನಂತರ, ಮಾರ್ಚ್ 11ಕ್ಕಿಂತ ಮೊದಲು ಸಾಗಣೆಗೆ ಸಿದ್ಧವಾಗಿದ್ದ ರಷ್ಯಾದ ಕಚ್ಚಾ ತೈಲಕ್ಕಾಗಿ ಅಮೆರಿಕ ಇತರ ರಾಷ್ಟ್ರಗಳಿಗೂ ಇದೇ ರೀತಿಯ 30 ದಿನಗಳ ಪರವಾನಗಿಯನ್ನು ವಿಸ್ತರಿಸಿತ್ತು. ಆ ವಿನಾಯಿತಿಯ ಅವಧಿಯು ಏಪ್ರಿಲ್ 11 ರಂದು ಮುಕ್ತಾಯಗೊಂಡಿದೆ.

ಮಾರ್ಚ್ 20ಕ್ಕಿಂತ ಮೊದಲು ಹಡಗುಗಳಿಗೆ ಲೋಡ್ ಮಾಡಲಾದ ಇರಾನ್ ಮೂಲದ ತೈಲ ಸಾಗಣೆಗೆ ನೀಡಲಾಗಿದ್ದ ಇಂತಹದ್ದೇ ವಿನಾಯಿತಿಯು ಈ ಭಾನುವಾರ ಮುಕ್ತಾಯಗೊಳ್ಳಲಿದೆ.

ಮಾರ್ಚ್ ತಿಂಗಳಿನಲ್ಲಿ ಇರಾನ್ ಸಂಬಂಧಿತ ಅಡೆತಡೆಗಳಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಉಂಟಾಗಿದ್ದ ಒತ್ತಡವನ್ನು ಕಡಿಮೆ ಮಾಡಲು ಈ ವಿನಾಯಿತಿಗಳನ್ನು ತಾತ್ಕಾಲಿಕ ಕ್ರಮವಾಗಿ ಜಾರಿಗೆ ತರಲಾಗಿತ್ತು. ನಿರ್ದಿಷ್ಟ ಗಡುವಿನ ಮೊದಲು ಈಗಾಗಲೇ ಹಡಗುಗಳಿಗೆ ಲೋಡ್ ಮಾಡಲಾದ ತೈಲವನ್ನು ಖರೀದಿಸಲು ಈ ಕ್ರಮವು ಅವಕಾಶ ಮಾಡಿಕೊಟ್ಟಿತ್ತು.

ಭಾರತವು ತೈಲ ಮತ್ತು ಅನಿಲದ ನಿವ್ವಳ ಆಮದುದಾರ ರಾಷ್ಟ್ರವಾಗಿದ್ದು, ತನ್ನ ಇಂಧನ ಅಗತ್ಯತೆಗಳ ಸುಮಾರು ಶೇಕಡಾ 80 ರಿಂದ 85 ರಷ್ಟನ್ನು ಆಮದಿನ ಮೂಲಕವೇ ಪೂರೈಸಿಕೊಳ್ಳುತ್ತಿದೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಇರಾನ್ ದೇಶವು ಬಹುತೇಕ ವಾಣಿಜ್ಯ ಹಡಗು ಸಂಚಾರಕ್ಕೆ ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಕಿರಿದಾದ ಜಲಮಾರ್ಗವು ಪರ್ಷಿಯನ್ ಕೊಲ್ಲಿಯನ್ನು ಅರಬ್ಬಿ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಜಾಗತಿಕ ಪೆಟ್ರೋಲಿಯಂ ಪೂರೈಕೆಯ ಸುಮಾರು 20% ರಷ್ಟು ಭಾಗವು ಈ ಸಮುದ್ರ ಮಾರ್ಗದ ಮೂಲಕವೇ ಹಾದುಹೋಗುತ್ತದೆ.

ಬುಧವಾರದ ಈ ಬೆಳವಣಿಗೆಗಳು, ರಷ್ಯಾದ ಕಚ್ಚಾ ತೈಲವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವ ವಿಚಾರದಲ್ಲಿ ಅಮೆರಿಕ ಮತ್ತು ಭಾರತ ನಡುವೆ ಈ ಹಿಂದೆ ಉಂಟಾಗಿದ್ದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ನಡೆದಿವೆ.

ಉಕ್ರೇನ್ ಯುದ್ಧದ ಮಧ್ಯೆಯೇ ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದಕ್ಕಾಗಿ ಟ್ರಂಪ್ ಆಡಳಿತವು ಆಗಸ್ಟ್‌ನಲ್ಲಿ ಭಾರತದ ಮೇಲೆ ದಂಡನಾತ್ಮಕ ಸುಂಕವನ್ನು ವಿಧಿಸಿತ್ತು. ಇದು ಅಮೆರಿಕದ ಒಟ್ಟು ಸುಂಕದ ದರವನ್ನು ಶೇಕಡಾ 50ಕ್ಕೆ ಏರಿಸಿತ್ತು.

ಫೆಬ್ರವರಿ 7ರಂದು, ರಷ್ಯಾದ ತೈಲವನ್ನು ಖರೀದಿಸಿದ ಕಾರಣಕ್ಕಾಗಿ ಭಾರತದ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ದಂಡನಾತ್ಮಕ ಸುಂಕವನ್ನು ರದ್ದುಗೊಳಿಸಲು ಅಧ್ಯಕ್ಷ ಟ್ರಂಪ್ ಕಾರ್ಯಕಾರಿ ಆದೇಶವನ್ನು ಹೊರಡಿಸಿದರು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂಕಿತ ದೊರೆತಿದ್ದು, ಅಮೆರಿಕಕ್ಕೆ ರಫ್ತಾಗುವ ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕದ ದರವು ಶೇಕಡಾ 18ಕ್ಕೆ ಇಳಿಕೆಯಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...