Homeಅಂತರಾಷ್ಟ್ರೀಯಉಕ್ರೇನ್‌ನಲ್ಲಿ ನಡೆಯುತ್ತಿರುವುದು 'ಮೋದಿ ಯುದ್ಧ': ಅಮೆರಿಕ ವಾಗ್ದಾಳಿ

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

- Advertisement -
- Advertisement -

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಅಮೆರಿಕದ ಶ್ವೇತಭವನದ ಅಧಿಕಾರಿಯೊಬ್ಬರು ಬಣ್ಣಿಸಿದ್ದು, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತವನ್ನು ಒತ್ತಾಯಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರದಿಂದ (ಆ.27) ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಅಮೆರಿಕದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿರುವ ಅಮೆರಿಕ, ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಶೇ.25 ದಂಡ ಸೇರಿ ಶೇ.50ರಷ್ಟು ಸುಂಕ ವಿಧಿಸಿದೆ. ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಮೋದಿಯವರ ಗೆಳೆಯ ಟ್ರಂಪ್ ಭಾರತದ ಮೇಲೆ ವಿಶ್ವದಲ್ಲೇ ಅತೀ ಹೆಚ್ಚು ಸುಂಕ ವಿಧಿಸಿದ್ದಾರೆ.

ಅತೀ ಹೆಚ್ಚು ಸುಂಕ ಹೇರಿರುವುದನ್ನು ಅನ್ಯಾಯ ಎಂದು ಕರೆದಿರುವ ಭಾರತ, ರಷ್ಯಾದಿಂದ ತೈಲ ಖರೀದಿಸುವುದನ್ನು ಕಡಿಮೆ ಮಾಡುವುದಿಲ್ಲ ಎಂದಿದೆ. ತನ್ನ 1.4 ಶತಕೋಟಿ ಜನರ ಹಿತಾಸಕ್ತಿಗಳನ್ನು ಕಾಪಾಡಲು ತೈಲ ಸಂಬಂಧ ‘ಉತ್ತಮ ಒಪ್ಪಂದ’ ಮಾಡಿಕೊಳ್ಳಲು ಬಯಸುವುದಾಗಿ ಹೇಳಿದೆ.

ಫೆಬ್ರವರಿ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಪ್ರಾರಂಭಿಸುವ ಮೊದಲು ಭಾರತದ ಒಟ್ಟು ಕಚ್ಚಾ ತೈಲದ ಶೇ. 2ಕ್ಕಿಂತ ಕಡಿಮೆ ಪ್ರಮಾಣವನ್ನು ರಷ್ಯಾ ಪೂರೈಸುತ್ತಿತ್ತು. ಈಗ ರಷ್ಯಾದಿಂದ ತೈಲ ಆಮದಿನ ಪ್ರಮಾಣ ಶೇ. 35 ರಿಂದ40ರಷ್ಟು ಏರಿಕೆಯಾಗಿದೆ. ಈ ಮೂಲಕ ರಷ್ಯಾ ಭಾರತದ ಕಚ್ಚಾ ತೈಲು ಅತಿದೊಡ್ಡ ಮೂಲ ಎನಿಸಿಕೊಂಡಿದೆ ಎಂದು ಬಿಬಿಸಿ ವರದಿ ವಿವರಿಸಿದೆ.

ರಷ್ಯಾ ತೈಲದ ಅತಿದೊಡ್ಡ ಆಮದುದಾರ ರಾಷ್ಟ್ರವಾದ ಚೀನಾ ಅಥವಾ ರಷ್ಯಾದೊಂದಿಗೆ ಇನ್ನೂ ದೊಡ್ಡ ಪ್ರಮಾಣದ ವ್ಯಾಪಾರವನ್ನು ನಡೆಸುತ್ತಿರುವ ಯುರೋಪಿಯನ್ ಒಕ್ಕೂಟದ ಮೇಲೆ ಅಮೆರಿಕ ನಮ್ಮ ಮೇಲೆ ವಿಧಿಸಿದಂತೆ ಹೆಚ್ಚುವರಿ ಸುಂಕಗಳನ್ನು ವಿಧಿಸಿಲ್ಲ ಎಂದು ಭಾರತ ಗಮನಸೆಳೆದಿದೆ.

ಬ್ಲೂಮ್‌ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ನವರೊ ಅವರು ಅಮೆರಿಕದ ಸುಂಕ ನಿಲುವನ್ನು ಪುನರುಚ್ಚರಿಸಿದ್ದಾರೆ.

“ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿ ಎಲ್ಲರೂ ನಷ್ಟ ಅನುಭವಿಸುತ್ತಿದ್ದಾರೆ. ಗ್ರಾಹಕರು, ವ್ಯವಹಾರಗಳು ಮತ್ತು ಎಲ್ಲವೂ ನಷ್ಟ ಅನುಭವಿಸುತ್ತಿವೆ. ಭಾರತದ ಹೆಚ್ಚಿನ ಸುಂಕದಿಂದ ನಮ್ಮ ಉದ್ಯೋಗ, ಕಾರ್ಖಾನೆಗಳು, ಆದಾಯ ಮತ್ತು ಹೆಚ್ಚಿನ ವೇತನದ ಮೇಲೆ ಪರಿಣಾಮ ಬೀರುವುದರಿಂದ ಕಾರ್ಮಿಕರು ನಷ್ಟ ಅನುಭವಿಸುತ್ತಾರೆ. ನಮ್ಮ ತೆರಿಗೆದಾರರೂ ನಷ್ಟ ಅನುಭವಿಸುತ್ತಿದ್ದಾರೆ. ‘ನಾವು ಮೋದಿಯವರ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದ್ದೇವೆ’ ಎಂದು ನವರೊ ಕಿಡಿಕಾರಿದ್ದಾರೆ.

ಉಕ್ರೇನ್‌ ಜೊತೆ ನಡೆಯುತ್ತಿರುವುದು ‘ಪುಟಿನ್ ಯುದ್ಧ’ ಎಂದು ನೀವು ಹೇಳುತ್ತೀರಾ ಎಂದು ಕೇಳಿದಾಗ, “ನಾನು ಮೋದಿ ಯುದ್ಧ’ ಎಂದು ಹೇಳಲು ಬಯಸುತ್ತೇನೆ. ಏಕೆಂದರೆ, ಉಕ್ರೇನ್‌ನ ಶಾಂತಿಯ ಹಾದಿ ಭಾಗಶಃ ನವದೆಹಲಿಯ ಮೂಲಕವೇ ಹಾದು ಹೋಗುತ್ತದೆ” ಎಂದು ನವರೋ ಹೇಳಿದ್ದಾರೆ.

“ನನಗೆ ಬೇಸರ ತರಿಸುವ ಸಂಗತಿಯೆಂದರೆ, ಭಾರತೀಯರು ಈ ವಿಷಯದಲ್ಲಿ ತುಂಬಾ ದುರಹಂಕಾರಿಗಳು. ನಮಗೆ ಹೆಚ್ಚಿನ ಸುಂಕ ಇಲ್ಲ, ನಮ್ಮದು ಸಾರ್ವಭೌಮತ್ವ, ನಾವು ಯಾರಿಂದ ಬೇಕಾದರು ತೈಲ ಖರೀದಿಸಿಬಹುದು, ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂಬ ಭಾವನೆ ಅವರಲ್ಲಿ ಇದೆ. ಹಾಗೆಯೇ ವರ್ತಿಸುತ್ತಿರಲಿ” ಎಂದು ನವರೋ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಶೇ.50ರಷ್ಟು ಸುಂಕ ಹೇರಿಕೆ ಭಾರತದಲ್ಲಿ ಬಟ್ಟೆಯಿಂದ ಹಿಡಿದು ವಜ್ರದವರೆಗೆ ರಫ್ತು ವಲಯದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಜನರ ಜೀವನೋಪಾಯದ ಮೇಲೆ ಪ್ರಭಾವ ಬೀರಲಿದೆ ಎಂದು ವರದಿಗಳು ಹೇಳಿವೆ.

ಸುಂಕದ ವಿಚಾರದಲ್ಲಿ ಅಮೆರಿಕ-ಭಾರತ ನಡುವಿನ ವ್ಯಾಪಾರ ಸಂಬಂಧ ಹಳಸಿದೆ. ಪರಿಣಾಮ ಈ ವಾರದ ಆರಂಭದಲ್ಲಿ ಪ್ರಾರಂಭವಾಗಬೇಕಿದ್ದ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಗಳು ರದ್ದುಗೊಂಡಿವೆ. ಆದರೆ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರನಾಗಿ ಉಳಿದಿರುವ ಭಾರತಕ್ಕೆ ಇನ್ನೂ ಒಂದು ಮಾರ್ಗದ ನಿರೀಕ್ಷೆಯಿದೆ ಎಂದು ವರದಿಗಳು ಹೇಳಿವೆ.

ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅಮೆರಿಕದ ಮತ್ತೊಬ್ಬ ಅಧಿಕಾರಿಯಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರ ಹೇಳಿಕೆಗಳು ಆ ದಿಕ್ಕಿನತ್ತ ಬೆರಳು ತೋರಿಸುತ್ತವೆ ಎಂದು ವಿಶ್ಲೇಷಕರು ಹೇಳುತ್ತಾರೆ.

“ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಅಮೆರಿಕ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ. ನಾವು ಒಟ್ಟಿಗೆ ಸೇರಲಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬೆಸೆಂಟ್ ಅವರು ಬುಧವಾರ ಫಾಕ್ಸ್ ಬಿಸಿನೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸುಂಕಗಳ ಪರಿಣಾಮವನ್ನು ತಗ್ಗಿಸಲು ತೆರಿಗೆಗಳನ್ನು ಕಡಿತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಬುಧವಾರ ಬಿಡುಗಡೆಯಾದ ಜುಲೈ ತಿಂಗಳ ಮಾಸಿಕ ಪರಿಶೀಲನಾ ವರದಿಯಲ್ಲಿ, ಭಾರತದ ಹಣಕಾಸು ಸಚಿವಾಲಯವು ಪ್ರಸ್ತುತ ನಡೆಯುತ್ತಿರುವ ಭಾರತ-ಯುಎಸ್ ವ್ಯಾಪಾರ ಮಾತುಕತೆಗಳು ಈ ನಿಟ್ಟಿನಲ್ಲಿ ‘ನಿರ್ಣಾಯಕ’ ಎಂದು ಬಿಬಿಸಿ ವರದಿ ಹೇಳಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ ವರದಿ ಮಾಡಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ವರದಿ ವಿವರಿಸಿದೆ.

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...