Homeಅಂತರಾಷ್ಟ್ರೀಯಉಕ್ರೇನ್‌ನಲ್ಲಿ ನಡೆಯುತ್ತಿರುವುದು 'ಮೋದಿ ಯುದ್ಧ': ಅಮೆರಿಕ ವಾಗ್ದಾಳಿ

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

- Advertisement -
- Advertisement -

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಅಮೆರಿಕದ ಶ್ವೇತಭವನದ ಅಧಿಕಾರಿಯೊಬ್ಬರು ಬಣ್ಣಿಸಿದ್ದು, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತವನ್ನು ಒತ್ತಾಯಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರದಿಂದ (ಆ.27) ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಅಮೆರಿಕದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿರುವ ಅಮೆರಿಕ, ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಶೇ.25 ದಂಡ ಸೇರಿ ಶೇ.50ರಷ್ಟು ಸುಂಕ ವಿಧಿಸಿದೆ. ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಮೋದಿಯವರ ಗೆಳೆಯ ಟ್ರಂಪ್ ಭಾರತದ ಮೇಲೆ ವಿಶ್ವದಲ್ಲೇ ಅತೀ ಹೆಚ್ಚು ಸುಂಕ ವಿಧಿಸಿದ್ದಾರೆ.

ಅತೀ ಹೆಚ್ಚು ಸುಂಕ ಹೇರಿರುವುದನ್ನು ಅನ್ಯಾಯ ಎಂದು ಕರೆದಿರುವ ಭಾರತ, ರಷ್ಯಾದಿಂದ ತೈಲ ಖರೀದಿಸುವುದನ್ನು ಕಡಿಮೆ ಮಾಡುವುದಿಲ್ಲ ಎಂದಿದೆ. ತನ್ನ 1.4 ಶತಕೋಟಿ ಜನರ ಹಿತಾಸಕ್ತಿಗಳನ್ನು ಕಾಪಾಡಲು ತೈಲ ಸಂಬಂಧ ‘ಉತ್ತಮ ಒಪ್ಪಂದ’ ಮಾಡಿಕೊಳ್ಳಲು ಬಯಸುವುದಾಗಿ ಹೇಳಿದೆ.

ಫೆಬ್ರವರಿ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಪ್ರಾರಂಭಿಸುವ ಮೊದಲು ಭಾರತದ ಒಟ್ಟು ಕಚ್ಚಾ ತೈಲದ ಶೇ. 2ಕ್ಕಿಂತ ಕಡಿಮೆ ಪ್ರಮಾಣವನ್ನು ರಷ್ಯಾ ಪೂರೈಸುತ್ತಿತ್ತು. ಈಗ ರಷ್ಯಾದಿಂದ ತೈಲ ಆಮದಿನ ಪ್ರಮಾಣ ಶೇ. 35 ರಿಂದ40ರಷ್ಟು ಏರಿಕೆಯಾಗಿದೆ. ಈ ಮೂಲಕ ರಷ್ಯಾ ಭಾರತದ ಕಚ್ಚಾ ತೈಲು ಅತಿದೊಡ್ಡ ಮೂಲ ಎನಿಸಿಕೊಂಡಿದೆ ಎಂದು ಬಿಬಿಸಿ ವರದಿ ವಿವರಿಸಿದೆ.

ರಷ್ಯಾ ತೈಲದ ಅತಿದೊಡ್ಡ ಆಮದುದಾರ ರಾಷ್ಟ್ರವಾದ ಚೀನಾ ಅಥವಾ ರಷ್ಯಾದೊಂದಿಗೆ ಇನ್ನೂ ದೊಡ್ಡ ಪ್ರಮಾಣದ ವ್ಯಾಪಾರವನ್ನು ನಡೆಸುತ್ತಿರುವ ಯುರೋಪಿಯನ್ ಒಕ್ಕೂಟದ ಮೇಲೆ ಅಮೆರಿಕ ನಮ್ಮ ಮೇಲೆ ವಿಧಿಸಿದಂತೆ ಹೆಚ್ಚುವರಿ ಸುಂಕಗಳನ್ನು ವಿಧಿಸಿಲ್ಲ ಎಂದು ಭಾರತ ಗಮನಸೆಳೆದಿದೆ.

ಬ್ಲೂಮ್‌ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ನವರೊ ಅವರು ಅಮೆರಿಕದ ಸುಂಕ ನಿಲುವನ್ನು ಪುನರುಚ್ಚರಿಸಿದ್ದಾರೆ.

“ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿ ಎಲ್ಲರೂ ನಷ್ಟ ಅನುಭವಿಸುತ್ತಿದ್ದಾರೆ. ಗ್ರಾಹಕರು, ವ್ಯವಹಾರಗಳು ಮತ್ತು ಎಲ್ಲವೂ ನಷ್ಟ ಅನುಭವಿಸುತ್ತಿವೆ. ಭಾರತದ ಹೆಚ್ಚಿನ ಸುಂಕದಿಂದ ನಮ್ಮ ಉದ್ಯೋಗ, ಕಾರ್ಖಾನೆಗಳು, ಆದಾಯ ಮತ್ತು ಹೆಚ್ಚಿನ ವೇತನದ ಮೇಲೆ ಪರಿಣಾಮ ಬೀರುವುದರಿಂದ ಕಾರ್ಮಿಕರು ನಷ್ಟ ಅನುಭವಿಸುತ್ತಾರೆ. ನಮ್ಮ ತೆರಿಗೆದಾರರೂ ನಷ್ಟ ಅನುಭವಿಸುತ್ತಿದ್ದಾರೆ. ‘ನಾವು ಮೋದಿಯವರ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದ್ದೇವೆ’ ಎಂದು ನವರೊ ಕಿಡಿಕಾರಿದ್ದಾರೆ.

ಉಕ್ರೇನ್‌ ಜೊತೆ ನಡೆಯುತ್ತಿರುವುದು ‘ಪುಟಿನ್ ಯುದ್ಧ’ ಎಂದು ನೀವು ಹೇಳುತ್ತೀರಾ ಎಂದು ಕೇಳಿದಾಗ, “ನಾನು ಮೋದಿ ಯುದ್ಧ’ ಎಂದು ಹೇಳಲು ಬಯಸುತ್ತೇನೆ. ಏಕೆಂದರೆ, ಉಕ್ರೇನ್‌ನ ಶಾಂತಿಯ ಹಾದಿ ಭಾಗಶಃ ನವದೆಹಲಿಯ ಮೂಲಕವೇ ಹಾದು ಹೋಗುತ್ತದೆ” ಎಂದು ನವರೋ ಹೇಳಿದ್ದಾರೆ.

“ನನಗೆ ಬೇಸರ ತರಿಸುವ ಸಂಗತಿಯೆಂದರೆ, ಭಾರತೀಯರು ಈ ವಿಷಯದಲ್ಲಿ ತುಂಬಾ ದುರಹಂಕಾರಿಗಳು. ನಮಗೆ ಹೆಚ್ಚಿನ ಸುಂಕ ಇಲ್ಲ, ನಮ್ಮದು ಸಾರ್ವಭೌಮತ್ವ, ನಾವು ಯಾರಿಂದ ಬೇಕಾದರು ತೈಲ ಖರೀದಿಸಿಬಹುದು, ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂಬ ಭಾವನೆ ಅವರಲ್ಲಿ ಇದೆ. ಹಾಗೆಯೇ ವರ್ತಿಸುತ್ತಿರಲಿ” ಎಂದು ನವರೋ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಶೇ.50ರಷ್ಟು ಸುಂಕ ಹೇರಿಕೆ ಭಾರತದಲ್ಲಿ ಬಟ್ಟೆಯಿಂದ ಹಿಡಿದು ವಜ್ರದವರೆಗೆ ರಫ್ತು ವಲಯದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಜನರ ಜೀವನೋಪಾಯದ ಮೇಲೆ ಪ್ರಭಾವ ಬೀರಲಿದೆ ಎಂದು ವರದಿಗಳು ಹೇಳಿವೆ.

ಸುಂಕದ ವಿಚಾರದಲ್ಲಿ ಅಮೆರಿಕ-ಭಾರತ ನಡುವಿನ ವ್ಯಾಪಾರ ಸಂಬಂಧ ಹಳಸಿದೆ. ಪರಿಣಾಮ ಈ ವಾರದ ಆರಂಭದಲ್ಲಿ ಪ್ರಾರಂಭವಾಗಬೇಕಿದ್ದ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಗಳು ರದ್ದುಗೊಂಡಿವೆ. ಆದರೆ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರನಾಗಿ ಉಳಿದಿರುವ ಭಾರತಕ್ಕೆ ಇನ್ನೂ ಒಂದು ಮಾರ್ಗದ ನಿರೀಕ್ಷೆಯಿದೆ ಎಂದು ವರದಿಗಳು ಹೇಳಿವೆ.

ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅಮೆರಿಕದ ಮತ್ತೊಬ್ಬ ಅಧಿಕಾರಿಯಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರ ಹೇಳಿಕೆಗಳು ಆ ದಿಕ್ಕಿನತ್ತ ಬೆರಳು ತೋರಿಸುತ್ತವೆ ಎಂದು ವಿಶ್ಲೇಷಕರು ಹೇಳುತ್ತಾರೆ.

“ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಅಮೆರಿಕ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ. ನಾವು ಒಟ್ಟಿಗೆ ಸೇರಲಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬೆಸೆಂಟ್ ಅವರು ಬುಧವಾರ ಫಾಕ್ಸ್ ಬಿಸಿನೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸುಂಕಗಳ ಪರಿಣಾಮವನ್ನು ತಗ್ಗಿಸಲು ತೆರಿಗೆಗಳನ್ನು ಕಡಿತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಬುಧವಾರ ಬಿಡುಗಡೆಯಾದ ಜುಲೈ ತಿಂಗಳ ಮಾಸಿಕ ಪರಿಶೀಲನಾ ವರದಿಯಲ್ಲಿ, ಭಾರತದ ಹಣಕಾಸು ಸಚಿವಾಲಯವು ಪ್ರಸ್ತುತ ನಡೆಯುತ್ತಿರುವ ಭಾರತ-ಯುಎಸ್ ವ್ಯಾಪಾರ ಮಾತುಕತೆಗಳು ಈ ನಿಟ್ಟಿನಲ್ಲಿ ‘ನಿರ್ಣಾಯಕ’ ಎಂದು ಬಿಬಿಸಿ ವರದಿ ಹೇಳಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ ವರದಿ ಮಾಡಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ವರದಿ ವಿವರಿಸಿದೆ.

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...