Homeಅಂತರಾಷ್ಟ್ರೀಯಉಕ್ರೇನ್‌ನಲ್ಲಿ ನಡೆಯುತ್ತಿರುವುದು 'ಮೋದಿ ಯುದ್ಧ': ಅಮೆರಿಕ ವಾಗ್ದಾಳಿ

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

- Advertisement -
- Advertisement -

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಅಮೆರಿಕದ ಶ್ವೇತಭವನದ ಅಧಿಕಾರಿಯೊಬ್ಬರು ಬಣ್ಣಿಸಿದ್ದು, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತವನ್ನು ಒತ್ತಾಯಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರದಿಂದ (ಆ.27) ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಅಮೆರಿಕದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿರುವ ಅಮೆರಿಕ, ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಶೇ.25 ದಂಡ ಸೇರಿ ಶೇ.50ರಷ್ಟು ಸುಂಕ ವಿಧಿಸಿದೆ. ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಮೋದಿಯವರ ಗೆಳೆಯ ಟ್ರಂಪ್ ಭಾರತದ ಮೇಲೆ ವಿಶ್ವದಲ್ಲೇ ಅತೀ ಹೆಚ್ಚು ಸುಂಕ ವಿಧಿಸಿದ್ದಾರೆ.

ಅತೀ ಹೆಚ್ಚು ಸುಂಕ ಹೇರಿರುವುದನ್ನು ಅನ್ಯಾಯ ಎಂದು ಕರೆದಿರುವ ಭಾರತ, ರಷ್ಯಾದಿಂದ ತೈಲ ಖರೀದಿಸುವುದನ್ನು ಕಡಿಮೆ ಮಾಡುವುದಿಲ್ಲ ಎಂದಿದೆ. ತನ್ನ 1.4 ಶತಕೋಟಿ ಜನರ ಹಿತಾಸಕ್ತಿಗಳನ್ನು ಕಾಪಾಡಲು ತೈಲ ಸಂಬಂಧ ‘ಉತ್ತಮ ಒಪ್ಪಂದ’ ಮಾಡಿಕೊಳ್ಳಲು ಬಯಸುವುದಾಗಿ ಹೇಳಿದೆ.

ಫೆಬ್ರವರಿ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಪ್ರಾರಂಭಿಸುವ ಮೊದಲು ಭಾರತದ ಒಟ್ಟು ಕಚ್ಚಾ ತೈಲದ ಶೇ. 2ಕ್ಕಿಂತ ಕಡಿಮೆ ಪ್ರಮಾಣವನ್ನು ರಷ್ಯಾ ಪೂರೈಸುತ್ತಿತ್ತು. ಈಗ ರಷ್ಯಾದಿಂದ ತೈಲ ಆಮದಿನ ಪ್ರಮಾಣ ಶೇ. 35 ರಿಂದ40ರಷ್ಟು ಏರಿಕೆಯಾಗಿದೆ. ಈ ಮೂಲಕ ರಷ್ಯಾ ಭಾರತದ ಕಚ್ಚಾ ತೈಲು ಅತಿದೊಡ್ಡ ಮೂಲ ಎನಿಸಿಕೊಂಡಿದೆ ಎಂದು ಬಿಬಿಸಿ ವರದಿ ವಿವರಿಸಿದೆ.

ರಷ್ಯಾ ತೈಲದ ಅತಿದೊಡ್ಡ ಆಮದುದಾರ ರಾಷ್ಟ್ರವಾದ ಚೀನಾ ಅಥವಾ ರಷ್ಯಾದೊಂದಿಗೆ ಇನ್ನೂ ದೊಡ್ಡ ಪ್ರಮಾಣದ ವ್ಯಾಪಾರವನ್ನು ನಡೆಸುತ್ತಿರುವ ಯುರೋಪಿಯನ್ ಒಕ್ಕೂಟದ ಮೇಲೆ ಅಮೆರಿಕ ನಮ್ಮ ಮೇಲೆ ವಿಧಿಸಿದಂತೆ ಹೆಚ್ಚುವರಿ ಸುಂಕಗಳನ್ನು ವಿಧಿಸಿಲ್ಲ ಎಂದು ಭಾರತ ಗಮನಸೆಳೆದಿದೆ.

ಬ್ಲೂಮ್‌ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ನವರೊ ಅವರು ಅಮೆರಿಕದ ಸುಂಕ ನಿಲುವನ್ನು ಪುನರುಚ್ಚರಿಸಿದ್ದಾರೆ.

“ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿ ಎಲ್ಲರೂ ನಷ್ಟ ಅನುಭವಿಸುತ್ತಿದ್ದಾರೆ. ಗ್ರಾಹಕರು, ವ್ಯವಹಾರಗಳು ಮತ್ತು ಎಲ್ಲವೂ ನಷ್ಟ ಅನುಭವಿಸುತ್ತಿವೆ. ಭಾರತದ ಹೆಚ್ಚಿನ ಸುಂಕದಿಂದ ನಮ್ಮ ಉದ್ಯೋಗ, ಕಾರ್ಖಾನೆಗಳು, ಆದಾಯ ಮತ್ತು ಹೆಚ್ಚಿನ ವೇತನದ ಮೇಲೆ ಪರಿಣಾಮ ಬೀರುವುದರಿಂದ ಕಾರ್ಮಿಕರು ನಷ್ಟ ಅನುಭವಿಸುತ್ತಾರೆ. ನಮ್ಮ ತೆರಿಗೆದಾರರೂ ನಷ್ಟ ಅನುಭವಿಸುತ್ತಿದ್ದಾರೆ. ‘ನಾವು ಮೋದಿಯವರ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದ್ದೇವೆ’ ಎಂದು ನವರೊ ಕಿಡಿಕಾರಿದ್ದಾರೆ.

ಉಕ್ರೇನ್‌ ಜೊತೆ ನಡೆಯುತ್ತಿರುವುದು ‘ಪುಟಿನ್ ಯುದ್ಧ’ ಎಂದು ನೀವು ಹೇಳುತ್ತೀರಾ ಎಂದು ಕೇಳಿದಾಗ, “ನಾನು ಮೋದಿ ಯುದ್ಧ’ ಎಂದು ಹೇಳಲು ಬಯಸುತ್ತೇನೆ. ಏಕೆಂದರೆ, ಉಕ್ರೇನ್‌ನ ಶಾಂತಿಯ ಹಾದಿ ಭಾಗಶಃ ನವದೆಹಲಿಯ ಮೂಲಕವೇ ಹಾದು ಹೋಗುತ್ತದೆ” ಎಂದು ನವರೋ ಹೇಳಿದ್ದಾರೆ.

“ನನಗೆ ಬೇಸರ ತರಿಸುವ ಸಂಗತಿಯೆಂದರೆ, ಭಾರತೀಯರು ಈ ವಿಷಯದಲ್ಲಿ ತುಂಬಾ ದುರಹಂಕಾರಿಗಳು. ನಮಗೆ ಹೆಚ್ಚಿನ ಸುಂಕ ಇಲ್ಲ, ನಮ್ಮದು ಸಾರ್ವಭೌಮತ್ವ, ನಾವು ಯಾರಿಂದ ಬೇಕಾದರು ತೈಲ ಖರೀದಿಸಿಬಹುದು, ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂಬ ಭಾವನೆ ಅವರಲ್ಲಿ ಇದೆ. ಹಾಗೆಯೇ ವರ್ತಿಸುತ್ತಿರಲಿ” ಎಂದು ನವರೋ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಶೇ.50ರಷ್ಟು ಸುಂಕ ಹೇರಿಕೆ ಭಾರತದಲ್ಲಿ ಬಟ್ಟೆಯಿಂದ ಹಿಡಿದು ವಜ್ರದವರೆಗೆ ರಫ್ತು ವಲಯದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಜನರ ಜೀವನೋಪಾಯದ ಮೇಲೆ ಪ್ರಭಾವ ಬೀರಲಿದೆ ಎಂದು ವರದಿಗಳು ಹೇಳಿವೆ.

ಸುಂಕದ ವಿಚಾರದಲ್ಲಿ ಅಮೆರಿಕ-ಭಾರತ ನಡುವಿನ ವ್ಯಾಪಾರ ಸಂಬಂಧ ಹಳಸಿದೆ. ಪರಿಣಾಮ ಈ ವಾರದ ಆರಂಭದಲ್ಲಿ ಪ್ರಾರಂಭವಾಗಬೇಕಿದ್ದ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಗಳು ರದ್ದುಗೊಂಡಿವೆ. ಆದರೆ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರನಾಗಿ ಉಳಿದಿರುವ ಭಾರತಕ್ಕೆ ಇನ್ನೂ ಒಂದು ಮಾರ್ಗದ ನಿರೀಕ್ಷೆಯಿದೆ ಎಂದು ವರದಿಗಳು ಹೇಳಿವೆ.

ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅಮೆರಿಕದ ಮತ್ತೊಬ್ಬ ಅಧಿಕಾರಿಯಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರ ಹೇಳಿಕೆಗಳು ಆ ದಿಕ್ಕಿನತ್ತ ಬೆರಳು ತೋರಿಸುತ್ತವೆ ಎಂದು ವಿಶ್ಲೇಷಕರು ಹೇಳುತ್ತಾರೆ.

“ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಅಮೆರಿಕ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ. ನಾವು ಒಟ್ಟಿಗೆ ಸೇರಲಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬೆಸೆಂಟ್ ಅವರು ಬುಧವಾರ ಫಾಕ್ಸ್ ಬಿಸಿನೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸುಂಕಗಳ ಪರಿಣಾಮವನ್ನು ತಗ್ಗಿಸಲು ತೆರಿಗೆಗಳನ್ನು ಕಡಿತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಬುಧವಾರ ಬಿಡುಗಡೆಯಾದ ಜುಲೈ ತಿಂಗಳ ಮಾಸಿಕ ಪರಿಶೀಲನಾ ವರದಿಯಲ್ಲಿ, ಭಾರತದ ಹಣಕಾಸು ಸಚಿವಾಲಯವು ಪ್ರಸ್ತುತ ನಡೆಯುತ್ತಿರುವ ಭಾರತ-ಯುಎಸ್ ವ್ಯಾಪಾರ ಮಾತುಕತೆಗಳು ಈ ನಿಟ್ಟಿನಲ್ಲಿ ‘ನಿರ್ಣಾಯಕ’ ಎಂದು ಬಿಬಿಸಿ ವರದಿ ಹೇಳಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ ವರದಿ ಮಾಡಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ವರದಿ ವಿವರಿಸಿದೆ.

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...