Homeಅಂತರಾಷ್ಟ್ರೀಯಸಿಎಎ: ಮುಸ್ಲಿಮರ ಮೇಲಿನ ಪ್ರಭಾವದ ಬಗ್ಗೆ ಯುಎಸ್ ಸೆನೆಟರ್ ಕಳವಳ

ಸಿಎಎ: ಮುಸ್ಲಿಮರ ಮೇಲಿನ ಪ್ರಭಾವದ ಬಗ್ಗೆ ಯುಎಸ್ ಸೆನೆಟರ್ ಕಳವಳ

- Advertisement -
- Advertisement -

ಭಾರತದಲ್ಲಿ ಸಿಎಎ ಕುರಿತು ಅಧಿಸೂಚನೆ ಹೊರಡಿಸಿರುವ ಬಗ್ಗೆ ಅಮೆರಿಕದ ಸೆನೆಟರ್‌ವೋರ್ವರು ಆತಂಕ ವ್ಯಕ್ತಪಡಿಸಿದ್ದು, ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧವು ಧರ್ವವನ್ನು ಮೀರಿ ಮಾನವ ಹಕ್ಕುಗಳನ್ನು ಕಾಪಾಡುವ ಮೌಲ್ಯಗಳಲ್ಲಿ ಬೇರೂರಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ.

ಭಾರತ ಸರಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆ, ವಿಶೇಷವಾಗಿ ಭಾರತದ ಮುಸ್ಲಿಂ ಸಮುದಾಯದ ಮೇಲೆ ಕಾನೂನಿನ ಸಂಭಾವ್ಯ ಪರಿಣಾಮಗಳನ್ನು ಸೂಚಿಸುವ ಭಾರತ ಸರ್ಕಾರದ ಕಾಯ್ದೆ ಬಗ್ಗೆ ನಾನು ತೀವ್ರವಾಗಿ ಕಳವಳಗೊಂಡಿದ್ದೇನೆ. ಪವಿತ್ರವಾದ ರಂಜಾನ್ ತಿಂಗಳಲ್ಲಿ ಅದನ್ನು ಜಾರಿಗೆ ತರಲಾಗಿದೆ ಇದು ಮತ್ತಷ್ಟು ಹದಗೆಡಿಸುವಂತೆ ಮಾಡಿದೆ ಎಂದು ಅಮೆರಿಕದ ಸೆನೆಟರ್, ವಿದೇಶಿ ಸಂಬಂಧಗಳ ಸಮಿತಿಯ ಅಧ್ಯಕ್ಷ  ಕಾರ್ಡಿನ್ ಹೇಳಿದ್ದಾರೆ.

ಅಮೆರಿಕ ಮತ್ತು ಭಾರತದ ಸಂಬಂಧವು ಗಾಢವಾಗುತ್ತಿದ್ದಂತೆ, ನಮ್ಮ ಸಹಕಾರವು ಧರ್ಮವನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳ ಮಾನವ ಹಕ್ಕುಗಳನ್ನು ರಕ್ಷಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಸಿಎಎ ಜಾರಿ ಬಗ್ಗೆ ಹಿಂದೂ ಅಮೆರಿಕನ್‌ ಗುಂಪುಗಳು ಭಾರತವನ್ನು ಶ್ಲಾಘಿಸಿದ ಬೆನ್ನಲ್ಲಿ ಅಮೆರಿಕದ ಸೆನೆಟರ್‌ ಈ ಹೇಳಿಕೆಯನ್ನು ನೀಡಿದ್ದು, ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಕಳೆದ ವಾರ, ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಸಿಎಎ ಅಧಿಸೂಚನೆಯ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ವಿವಾದಿತ ಕಾನೂನಿನ ಅನುಷ್ಠಾನದ ಬಗ್ಗೆ ಬಿಡೆನ್ ಆಡಳಿತವು ಪರಿಶೀಲನೆ ನಡೆಸುತ್ತಿದೆ ಎಂದು ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದರು.

ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಮತ್ತು ಕಾನೂನಿನಡಿಯಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನವಾದ ಹಕ್ಕುಗಳನ್ನು ನೀಡುವುದು ಮೂಲಭೂತ ಪ್ರಜಾಪ್ರಭುತ್ವದ ತತ್ವಗಳಾಗಿವೆ ಎಂದು ಮಿಲ್ಲರ್ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಭಾರತ, ಅಮೆರಿಕ ಸಿಎಎ ಬಗ್ಗೆ ತಪ್ಪು ಮಾಹಿತಿ ಹೊಂದಿದೆ ಮತ್ತು ಟೀಕೆ ಅನಗತ್ಯ ಎಂದು ಪ್ರತಿಕ್ರಿಯಿಸಿತ್ತು.

ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಇದಾದ 5 ವರ್ಷಗಳ ಬಳಿಕ ಕೇಂದ್ರವು ಕಳೆದ ವಾರ ದೇಶದಲ್ಲಿ ಸಿಎಎ ಜಾರಿಗೆ ತಂದಿದೆ. ಸಿಎಎ ತಮ್ಮ ಪೌರತ್ವದ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಹಿಂದೂಗಳಂತೆ ಸಮಾನ ಹಕ್ಕುಗಳನ್ನು ಭಾರತೀಯ ಮುಸ್ಲಿಮರು ಕೂಡ ಹೊಂದಿದ್ದಾರೆ, ಯಾರೂ ಕೂಡ ಈ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಸರ್ಕಾರವು ಪತ್ರಿಕಾ ಹೇಳಿಕೆಯನ್ನು ನೀಡಿತ್ತು.

ಇದನ್ನು ಓದಿ: ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ನಂತರ 8,350 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದ ಬಿಜೆಪಿ ಸರ್ಕಾರ: ಆರ್‌ಟಿಐನಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...