Homeಅಂತರಾಷ್ಟ್ರೀಯಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

- Advertisement -
- Advertisement -

ಇಸ್ರೇಲ್‌ ಮೇಲೆ ಇರಾನ್‌ ಏಪ್ರಿಲ್ 13ರಂದು ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಇರಾನ್ ಇಸ್ರೇಲ್ ಕಡೆಗೆ ಉಡಾಯಿಸಿದ ಬಹುಪಾಲು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಯುನೈಟೆಡ್ ಸ್ಟೇಟ್ಸ್ ತಡೆದು ಹೊಡೆದುರುಳಿಸಿತು, ಇಸ್ರೇಲ್ ಅಲ್ಲ ಎಂದು ದಾಳಿಯ ಡೇಟಾವನ್ನು ವಿಶ್ಲೇಷಿಸುವ ವರದಿ ಹೇಳಿದೆ.

ಅಮೆರಿಕದ ಸುದ್ದಿವಾಹಿನಿ ದಿ ಇಂಟರ್‌ಸೆಪ್ಟ್‌ನೊಂದಿಗೆ ಮಾತನಾಡಿದ ಯುಎಸ್ ಮಿಲಿಟರಿ ಅಧಿಕಾರಿಗಳು, ಇಸ್ರೇಲ್ ತಲುಪುವ ಮೊದಲು ಇರಾನ್‌ ಉಡಾಯಿಸದ ಅರ್ಧಕ್ಕಿಂತ ಹೆಚ್ಚು ಕ್ಷಿಪಣಿಗಳನ್ನು ಇಸ್ರೇಲ್‌ ತಲುಪುವ ಮೊದಲು ಯುಎಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ, ಇರಾನ್ ಶನಿವಾರ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದೆ. 300ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಇಸ್ರೇಲ್‌ ಕಡೆ ಹಾರಿಸಿದೆ. ದಾಳಿಯ ನಂತರ ಮಿತ್ರರಾಷ್ಟ್ರಗಳಾದ US, ಜೋರ್ಡಾನ್, ಫ್ರಾನ್ಸ್ ಮತ್ತು ಬ್ರಿಟನ್ ಸಹಾಯದಿಂದ 99 ಪ್ರತಿಶತಕ್ಕಿಂತ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್‌ ಹೇಳಿತ್ತು.

ಇರಾನ್‌ನ ಅರ್ಧದಷ್ಟು ಶಸ್ತ್ರಾಸ್ತ್ರಗಳು ಕೆಲವು ರೀತಿಯ ತಾಂತ್ರಿಕ ವೈಫಲ್ಯವನ್ನು ಅನುಭವಿಸಿವೆ. ಉಳಿದ ಕ್ಷಿಪಣಿಗಳಲ್ಲಿ 80ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಯುಎಸ್ ನಾಶಪಡಿಸಿದೆ ಎಂದು ಯುಎಸ್ ಮಿಲಿಟರಿ ಪ್ರಾಥಮಿಕವಾಗಿ ಅಂದಾಜಿಸಿದೆ.

ಆದರೆ ಯುಎಸ್‌ ಎಲ್ಲಿ ಈ ಕ್ಷಿಪಣಿಗಳನ್ನು ತಡೆದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸೌದಿ ಅರೇಬಿಯಾದಲ್ಲಿ ಯುಎಸ್ ಸಕ್ರಿಯ ಮಿಲಿಟರಿ ನೆಲೆಯನ್ನು ಹೊಂದಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಸರಿಸುಮಾರು 25 ಕ್ರೂಸ್ ಕ್ಷಿಪಣಿಗಳನ್ನು ಐಎಎಫ್ (ಇಸ್ರೇಲಿ ಏರ್ ಫೋರ್ಸ್) ಫೈಟರ್ ಜೆಟ್‌ಗಳು ದೇಶದ ಗಡಿಯ ಹೊರಗೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (RAF) ಹಲವಾರು ಇರಾನಿನ ಕ್ಷಿಪಣಿಗಳನ್ನು ತಡೆದಿದೆ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ, ಆದರೆ ಜೋರ್ಡಾನ್ ಸರ್ಕಾರವು ಇರಾನಿನ ಶಸ್ತ್ರಾಸ್ತ್ರಗಳನ್ನು ಉರುಳಿಸಿರುವ ಬಗ್ಗೆ ಮಾಹಿತಿ ನೀಡಿದೆ, ಆದರೆ ಉರುಳಿಸಿದ ಕ್ಷಿಪಣಿಗಳ ಬಗ್ಗೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ.

ಇಸ್ರೇಲ್ ಪ್ರಕಾರ, ಇರಾನ್ 330ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಿದೆ. ಇದರಲ್ಲಿ 30 ಕ್ರೂಸ್ ಕ್ಷಿಪಣಿಗಳು, ಸರಿಸುಮಾರು 180 ಶಾಹೆಡ್ ಡ್ರೋನ್‌ಗಳು ಮತ್ತು 120 ಎಮಾಡ್ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಒಳಗೊಂಡಿತ್ತು. ಇದರಲ್ಲಿ ಎಲ್ಲಾ ಡ್ರೋನ್‌ಗಳು ಮತ್ತು  ಕ್ಷಿಪಣಿಗಳನ್ನು ಇರಾನ್ ಭೂಪ್ರದೇಶದಿಂದ ಉಡಾಯಿಸಲಾಗಿದ್ದರೆ, ಕೆಲವು ಕ್ಷಿಪಣಿಗಳನ್ನು ಯೆಮೆನ್‌ನಿಂದ ಉಡಾವಣೆ ಮಾಡಲಾಗಿದೆ.

ಎಪ್ರಿಲ್ 1ರಂದು ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇರಾನ್‌ ಹೇಳಿತ್ತು.  ಇದರ ಬೆನ್ನಲಿ ಇಸ್ರೇಲ್ ಲೆಬನಾನ್‌ ಮೇಲೂ ವೈಮಾನಿಕ ದಾಳಿಯನ್ನು ನಡೆಸಿತ್ತು. ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ ಇಸ್ರೇಲ್‌ನಿಂದ ಲೆಬನಾನ್‌, ಇರಾನ್‌ ಗುರಿಯಾಗಿಸಿಕೊಂಡು ನಡೆದಿದ್ದ ದಾಳಿ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹಟ್ಟು ಹಾಕಿತ್ತು.

ಇದನ್ನು ಓದಿ: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...