Homeಅಂತರಾಷ್ಟ್ರೀಯಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

- Advertisement -
- Advertisement -

ಇಸ್ರೇಲ್‌ ಮೇಲೆ ಇರಾನ್‌ ಏಪ್ರಿಲ್ 13ರಂದು ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಇರಾನ್ ಇಸ್ರೇಲ್ ಕಡೆಗೆ ಉಡಾಯಿಸಿದ ಬಹುಪಾಲು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಯುನೈಟೆಡ್ ಸ್ಟೇಟ್ಸ್ ತಡೆದು ಹೊಡೆದುರುಳಿಸಿತು, ಇಸ್ರೇಲ್ ಅಲ್ಲ ಎಂದು ದಾಳಿಯ ಡೇಟಾವನ್ನು ವಿಶ್ಲೇಷಿಸುವ ವರದಿ ಹೇಳಿದೆ.

ಅಮೆರಿಕದ ಸುದ್ದಿವಾಹಿನಿ ದಿ ಇಂಟರ್‌ಸೆಪ್ಟ್‌ನೊಂದಿಗೆ ಮಾತನಾಡಿದ ಯುಎಸ್ ಮಿಲಿಟರಿ ಅಧಿಕಾರಿಗಳು, ಇಸ್ರೇಲ್ ತಲುಪುವ ಮೊದಲು ಇರಾನ್‌ ಉಡಾಯಿಸದ ಅರ್ಧಕ್ಕಿಂತ ಹೆಚ್ಚು ಕ್ಷಿಪಣಿಗಳನ್ನು ಇಸ್ರೇಲ್‌ ತಲುಪುವ ಮೊದಲು ಯುಎಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ, ಇರಾನ್ ಶನಿವಾರ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದೆ. 300ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಇಸ್ರೇಲ್‌ ಕಡೆ ಹಾರಿಸಿದೆ. ದಾಳಿಯ ನಂತರ ಮಿತ್ರರಾಷ್ಟ್ರಗಳಾದ US, ಜೋರ್ಡಾನ್, ಫ್ರಾನ್ಸ್ ಮತ್ತು ಬ್ರಿಟನ್ ಸಹಾಯದಿಂದ 99 ಪ್ರತಿಶತಕ್ಕಿಂತ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್‌ ಹೇಳಿತ್ತು.

ಇರಾನ್‌ನ ಅರ್ಧದಷ್ಟು ಶಸ್ತ್ರಾಸ್ತ್ರಗಳು ಕೆಲವು ರೀತಿಯ ತಾಂತ್ರಿಕ ವೈಫಲ್ಯವನ್ನು ಅನುಭವಿಸಿವೆ. ಉಳಿದ ಕ್ಷಿಪಣಿಗಳಲ್ಲಿ 80ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಯುಎಸ್ ನಾಶಪಡಿಸಿದೆ ಎಂದು ಯುಎಸ್ ಮಿಲಿಟರಿ ಪ್ರಾಥಮಿಕವಾಗಿ ಅಂದಾಜಿಸಿದೆ.

ಆದರೆ ಯುಎಸ್‌ ಎಲ್ಲಿ ಈ ಕ್ಷಿಪಣಿಗಳನ್ನು ತಡೆದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸೌದಿ ಅರೇಬಿಯಾದಲ್ಲಿ ಯುಎಸ್ ಸಕ್ರಿಯ ಮಿಲಿಟರಿ ನೆಲೆಯನ್ನು ಹೊಂದಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಸರಿಸುಮಾರು 25 ಕ್ರೂಸ್ ಕ್ಷಿಪಣಿಗಳನ್ನು ಐಎಎಫ್ (ಇಸ್ರೇಲಿ ಏರ್ ಫೋರ್ಸ್) ಫೈಟರ್ ಜೆಟ್‌ಗಳು ದೇಶದ ಗಡಿಯ ಹೊರಗೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (RAF) ಹಲವಾರು ಇರಾನಿನ ಕ್ಷಿಪಣಿಗಳನ್ನು ತಡೆದಿದೆ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ, ಆದರೆ ಜೋರ್ಡಾನ್ ಸರ್ಕಾರವು ಇರಾನಿನ ಶಸ್ತ್ರಾಸ್ತ್ರಗಳನ್ನು ಉರುಳಿಸಿರುವ ಬಗ್ಗೆ ಮಾಹಿತಿ ನೀಡಿದೆ, ಆದರೆ ಉರುಳಿಸಿದ ಕ್ಷಿಪಣಿಗಳ ಬಗ್ಗೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ.

ಇಸ್ರೇಲ್ ಪ್ರಕಾರ, ಇರಾನ್ 330ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಿದೆ. ಇದರಲ್ಲಿ 30 ಕ್ರೂಸ್ ಕ್ಷಿಪಣಿಗಳು, ಸರಿಸುಮಾರು 180 ಶಾಹೆಡ್ ಡ್ರೋನ್‌ಗಳು ಮತ್ತು 120 ಎಮಾಡ್ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಒಳಗೊಂಡಿತ್ತು. ಇದರಲ್ಲಿ ಎಲ್ಲಾ ಡ್ರೋನ್‌ಗಳು ಮತ್ತು  ಕ್ಷಿಪಣಿಗಳನ್ನು ಇರಾನ್ ಭೂಪ್ರದೇಶದಿಂದ ಉಡಾಯಿಸಲಾಗಿದ್ದರೆ, ಕೆಲವು ಕ್ಷಿಪಣಿಗಳನ್ನು ಯೆಮೆನ್‌ನಿಂದ ಉಡಾವಣೆ ಮಾಡಲಾಗಿದೆ.

ಎಪ್ರಿಲ್ 1ರಂದು ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇರಾನ್‌ ಹೇಳಿತ್ತು.  ಇದರ ಬೆನ್ನಲಿ ಇಸ್ರೇಲ್ ಲೆಬನಾನ್‌ ಮೇಲೂ ವೈಮಾನಿಕ ದಾಳಿಯನ್ನು ನಡೆಸಿತ್ತು. ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ ಇಸ್ರೇಲ್‌ನಿಂದ ಲೆಬನಾನ್‌, ಇರಾನ್‌ ಗುರಿಯಾಗಿಸಿಕೊಂಡು ನಡೆದಿದ್ದ ದಾಳಿ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹಟ್ಟು ಹಾಕಿತ್ತು.

ಇದನ್ನು ಓದಿ: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...