Homeಅಂತರಾಷ್ಟ್ರೀಯಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

- Advertisement -
- Advertisement -

ಇಸ್ರೇಲ್‌ ಮೇಲೆ ಇರಾನ್‌ ಏಪ್ರಿಲ್ 13ರಂದು ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಇರಾನ್ ಇಸ್ರೇಲ್ ಕಡೆಗೆ ಉಡಾಯಿಸಿದ ಬಹುಪಾಲು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಯುನೈಟೆಡ್ ಸ್ಟೇಟ್ಸ್ ತಡೆದು ಹೊಡೆದುರುಳಿಸಿತು, ಇಸ್ರೇಲ್ ಅಲ್ಲ ಎಂದು ದಾಳಿಯ ಡೇಟಾವನ್ನು ವಿಶ್ಲೇಷಿಸುವ ವರದಿ ಹೇಳಿದೆ.

ಅಮೆರಿಕದ ಸುದ್ದಿವಾಹಿನಿ ದಿ ಇಂಟರ್‌ಸೆಪ್ಟ್‌ನೊಂದಿಗೆ ಮಾತನಾಡಿದ ಯುಎಸ್ ಮಿಲಿಟರಿ ಅಧಿಕಾರಿಗಳು, ಇಸ್ರೇಲ್ ತಲುಪುವ ಮೊದಲು ಇರಾನ್‌ ಉಡಾಯಿಸದ ಅರ್ಧಕ್ಕಿಂತ ಹೆಚ್ಚು ಕ್ಷಿಪಣಿಗಳನ್ನು ಇಸ್ರೇಲ್‌ ತಲುಪುವ ಮೊದಲು ಯುಎಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ, ಇರಾನ್ ಶನಿವಾರ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದೆ. 300ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಇಸ್ರೇಲ್‌ ಕಡೆ ಹಾರಿಸಿದೆ. ದಾಳಿಯ ನಂತರ ಮಿತ್ರರಾಷ್ಟ್ರಗಳಾದ US, ಜೋರ್ಡಾನ್, ಫ್ರಾನ್ಸ್ ಮತ್ತು ಬ್ರಿಟನ್ ಸಹಾಯದಿಂದ 99 ಪ್ರತಿಶತಕ್ಕಿಂತ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್‌ ಹೇಳಿತ್ತು.

ಇರಾನ್‌ನ ಅರ್ಧದಷ್ಟು ಶಸ್ತ್ರಾಸ್ತ್ರಗಳು ಕೆಲವು ರೀತಿಯ ತಾಂತ್ರಿಕ ವೈಫಲ್ಯವನ್ನು ಅನುಭವಿಸಿವೆ. ಉಳಿದ ಕ್ಷಿಪಣಿಗಳಲ್ಲಿ 80ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಯುಎಸ್ ನಾಶಪಡಿಸಿದೆ ಎಂದು ಯುಎಸ್ ಮಿಲಿಟರಿ ಪ್ರಾಥಮಿಕವಾಗಿ ಅಂದಾಜಿಸಿದೆ.

ಆದರೆ ಯುಎಸ್‌ ಎಲ್ಲಿ ಈ ಕ್ಷಿಪಣಿಗಳನ್ನು ತಡೆದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸೌದಿ ಅರೇಬಿಯಾದಲ್ಲಿ ಯುಎಸ್ ಸಕ್ರಿಯ ಮಿಲಿಟರಿ ನೆಲೆಯನ್ನು ಹೊಂದಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಸರಿಸುಮಾರು 25 ಕ್ರೂಸ್ ಕ್ಷಿಪಣಿಗಳನ್ನು ಐಎಎಫ್ (ಇಸ್ರೇಲಿ ಏರ್ ಫೋರ್ಸ್) ಫೈಟರ್ ಜೆಟ್‌ಗಳು ದೇಶದ ಗಡಿಯ ಹೊರಗೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (RAF) ಹಲವಾರು ಇರಾನಿನ ಕ್ಷಿಪಣಿಗಳನ್ನು ತಡೆದಿದೆ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ, ಆದರೆ ಜೋರ್ಡಾನ್ ಸರ್ಕಾರವು ಇರಾನಿನ ಶಸ್ತ್ರಾಸ್ತ್ರಗಳನ್ನು ಉರುಳಿಸಿರುವ ಬಗ್ಗೆ ಮಾಹಿತಿ ನೀಡಿದೆ, ಆದರೆ ಉರುಳಿಸಿದ ಕ್ಷಿಪಣಿಗಳ ಬಗ್ಗೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ.

ಇಸ್ರೇಲ್ ಪ್ರಕಾರ, ಇರಾನ್ 330ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಿದೆ. ಇದರಲ್ಲಿ 30 ಕ್ರೂಸ್ ಕ್ಷಿಪಣಿಗಳು, ಸರಿಸುಮಾರು 180 ಶಾಹೆಡ್ ಡ್ರೋನ್‌ಗಳು ಮತ್ತು 120 ಎಮಾಡ್ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಒಳಗೊಂಡಿತ್ತು. ಇದರಲ್ಲಿ ಎಲ್ಲಾ ಡ್ರೋನ್‌ಗಳು ಮತ್ತು  ಕ್ಷಿಪಣಿಗಳನ್ನು ಇರಾನ್ ಭೂಪ್ರದೇಶದಿಂದ ಉಡಾಯಿಸಲಾಗಿದ್ದರೆ, ಕೆಲವು ಕ್ಷಿಪಣಿಗಳನ್ನು ಯೆಮೆನ್‌ನಿಂದ ಉಡಾವಣೆ ಮಾಡಲಾಗಿದೆ.

ಎಪ್ರಿಲ್ 1ರಂದು ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇರಾನ್‌ ಹೇಳಿತ್ತು.  ಇದರ ಬೆನ್ನಲಿ ಇಸ್ರೇಲ್ ಲೆಬನಾನ್‌ ಮೇಲೂ ವೈಮಾನಿಕ ದಾಳಿಯನ್ನು ನಡೆಸಿತ್ತು. ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ ಇಸ್ರೇಲ್‌ನಿಂದ ಲೆಬನಾನ್‌, ಇರಾನ್‌ ಗುರಿಯಾಗಿಸಿಕೊಂಡು ನಡೆದಿದ್ದ ದಾಳಿ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹಟ್ಟು ಹಾಕಿತ್ತು.

ಇದನ್ನು ಓದಿ: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...