Homeಅಂತರಾಷ್ಟ್ರೀಯಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

- Advertisement -
- Advertisement -

ಇಸ್ರೇಲ್‌ ಮೇಲೆ ಇರಾನ್‌ ಏಪ್ರಿಲ್ 13ರಂದು ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಇರಾನ್ ಇಸ್ರೇಲ್ ಕಡೆಗೆ ಉಡಾಯಿಸಿದ ಬಹುಪಾಲು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಯುನೈಟೆಡ್ ಸ್ಟೇಟ್ಸ್ ತಡೆದು ಹೊಡೆದುರುಳಿಸಿತು, ಇಸ್ರೇಲ್ ಅಲ್ಲ ಎಂದು ದಾಳಿಯ ಡೇಟಾವನ್ನು ವಿಶ್ಲೇಷಿಸುವ ವರದಿ ಹೇಳಿದೆ.

ಅಮೆರಿಕದ ಸುದ್ದಿವಾಹಿನಿ ದಿ ಇಂಟರ್‌ಸೆಪ್ಟ್‌ನೊಂದಿಗೆ ಮಾತನಾಡಿದ ಯುಎಸ್ ಮಿಲಿಟರಿ ಅಧಿಕಾರಿಗಳು, ಇಸ್ರೇಲ್ ತಲುಪುವ ಮೊದಲು ಇರಾನ್‌ ಉಡಾಯಿಸದ ಅರ್ಧಕ್ಕಿಂತ ಹೆಚ್ಚು ಕ್ಷಿಪಣಿಗಳನ್ನು ಇಸ್ರೇಲ್‌ ತಲುಪುವ ಮೊದಲು ಯುಎಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ, ಇರಾನ್ ಶನಿವಾರ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದೆ. 300ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಇಸ್ರೇಲ್‌ ಕಡೆ ಹಾರಿಸಿದೆ. ದಾಳಿಯ ನಂತರ ಮಿತ್ರರಾಷ್ಟ್ರಗಳಾದ US, ಜೋರ್ಡಾನ್, ಫ್ರಾನ್ಸ್ ಮತ್ತು ಬ್ರಿಟನ್ ಸಹಾಯದಿಂದ 99 ಪ್ರತಿಶತಕ್ಕಿಂತ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್‌ ಹೇಳಿತ್ತು.

ಇರಾನ್‌ನ ಅರ್ಧದಷ್ಟು ಶಸ್ತ್ರಾಸ್ತ್ರಗಳು ಕೆಲವು ರೀತಿಯ ತಾಂತ್ರಿಕ ವೈಫಲ್ಯವನ್ನು ಅನುಭವಿಸಿವೆ. ಉಳಿದ ಕ್ಷಿಪಣಿಗಳಲ್ಲಿ 80ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಯುಎಸ್ ನಾಶಪಡಿಸಿದೆ ಎಂದು ಯುಎಸ್ ಮಿಲಿಟರಿ ಪ್ರಾಥಮಿಕವಾಗಿ ಅಂದಾಜಿಸಿದೆ.

ಆದರೆ ಯುಎಸ್‌ ಎಲ್ಲಿ ಈ ಕ್ಷಿಪಣಿಗಳನ್ನು ತಡೆದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸೌದಿ ಅರೇಬಿಯಾದಲ್ಲಿ ಯುಎಸ್ ಸಕ್ರಿಯ ಮಿಲಿಟರಿ ನೆಲೆಯನ್ನು ಹೊಂದಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಸರಿಸುಮಾರು 25 ಕ್ರೂಸ್ ಕ್ಷಿಪಣಿಗಳನ್ನು ಐಎಎಫ್ (ಇಸ್ರೇಲಿ ಏರ್ ಫೋರ್ಸ್) ಫೈಟರ್ ಜೆಟ್‌ಗಳು ದೇಶದ ಗಡಿಯ ಹೊರಗೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (RAF) ಹಲವಾರು ಇರಾನಿನ ಕ್ಷಿಪಣಿಗಳನ್ನು ತಡೆದಿದೆ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ, ಆದರೆ ಜೋರ್ಡಾನ್ ಸರ್ಕಾರವು ಇರಾನಿನ ಶಸ್ತ್ರಾಸ್ತ್ರಗಳನ್ನು ಉರುಳಿಸಿರುವ ಬಗ್ಗೆ ಮಾಹಿತಿ ನೀಡಿದೆ, ಆದರೆ ಉರುಳಿಸಿದ ಕ್ಷಿಪಣಿಗಳ ಬಗ್ಗೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ.

ಇಸ್ರೇಲ್ ಪ್ರಕಾರ, ಇರಾನ್ 330ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಿದೆ. ಇದರಲ್ಲಿ 30 ಕ್ರೂಸ್ ಕ್ಷಿಪಣಿಗಳು, ಸರಿಸುಮಾರು 180 ಶಾಹೆಡ್ ಡ್ರೋನ್‌ಗಳು ಮತ್ತು 120 ಎಮಾಡ್ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಒಳಗೊಂಡಿತ್ತು. ಇದರಲ್ಲಿ ಎಲ್ಲಾ ಡ್ರೋನ್‌ಗಳು ಮತ್ತು  ಕ್ಷಿಪಣಿಗಳನ್ನು ಇರಾನ್ ಭೂಪ್ರದೇಶದಿಂದ ಉಡಾಯಿಸಲಾಗಿದ್ದರೆ, ಕೆಲವು ಕ್ಷಿಪಣಿಗಳನ್ನು ಯೆಮೆನ್‌ನಿಂದ ಉಡಾವಣೆ ಮಾಡಲಾಗಿದೆ.

ಎಪ್ರಿಲ್ 1ರಂದು ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇರಾನ್‌ ಹೇಳಿತ್ತು.  ಇದರ ಬೆನ್ನಲಿ ಇಸ್ರೇಲ್ ಲೆಬನಾನ್‌ ಮೇಲೂ ವೈಮಾನಿಕ ದಾಳಿಯನ್ನು ನಡೆಸಿತ್ತು. ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ ಇಸ್ರೇಲ್‌ನಿಂದ ಲೆಬನಾನ್‌, ಇರಾನ್‌ ಗುರಿಯಾಗಿಸಿಕೊಂಡು ನಡೆದಿದ್ದ ದಾಳಿ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹಟ್ಟು ಹಾಕಿತ್ತು.

ಇದನ್ನು ಓದಿ: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...