Homeಅಂತರಾಷ್ಟ್ರೀಯಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

- Advertisement -
- Advertisement -

ಇಸ್ರೇಲ್‌ ಮೇಲೆ ಇರಾನ್‌ ಏಪ್ರಿಲ್ 13ರಂದು ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಇರಾನ್ ಇಸ್ರೇಲ್ ಕಡೆಗೆ ಉಡಾಯಿಸಿದ ಬಹುಪಾಲು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಯುನೈಟೆಡ್ ಸ್ಟೇಟ್ಸ್ ತಡೆದು ಹೊಡೆದುರುಳಿಸಿತು, ಇಸ್ರೇಲ್ ಅಲ್ಲ ಎಂದು ದಾಳಿಯ ಡೇಟಾವನ್ನು ವಿಶ್ಲೇಷಿಸುವ ವರದಿ ಹೇಳಿದೆ.

ಅಮೆರಿಕದ ಸುದ್ದಿವಾಹಿನಿ ದಿ ಇಂಟರ್‌ಸೆಪ್ಟ್‌ನೊಂದಿಗೆ ಮಾತನಾಡಿದ ಯುಎಸ್ ಮಿಲಿಟರಿ ಅಧಿಕಾರಿಗಳು, ಇಸ್ರೇಲ್ ತಲುಪುವ ಮೊದಲು ಇರಾನ್‌ ಉಡಾಯಿಸದ ಅರ್ಧಕ್ಕಿಂತ ಹೆಚ್ಚು ಕ್ಷಿಪಣಿಗಳನ್ನು ಇಸ್ರೇಲ್‌ ತಲುಪುವ ಮೊದಲು ಯುಎಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ, ಇರಾನ್ ಶನಿವಾರ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದೆ. 300ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಇಸ್ರೇಲ್‌ ಕಡೆ ಹಾರಿಸಿದೆ. ದಾಳಿಯ ನಂತರ ಮಿತ್ರರಾಷ್ಟ್ರಗಳಾದ US, ಜೋರ್ಡಾನ್, ಫ್ರಾನ್ಸ್ ಮತ್ತು ಬ್ರಿಟನ್ ಸಹಾಯದಿಂದ 99 ಪ್ರತಿಶತಕ್ಕಿಂತ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್‌ ಹೇಳಿತ್ತು.

ಇರಾನ್‌ನ ಅರ್ಧದಷ್ಟು ಶಸ್ತ್ರಾಸ್ತ್ರಗಳು ಕೆಲವು ರೀತಿಯ ತಾಂತ್ರಿಕ ವೈಫಲ್ಯವನ್ನು ಅನುಭವಿಸಿವೆ. ಉಳಿದ ಕ್ಷಿಪಣಿಗಳಲ್ಲಿ 80ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಯುಎಸ್ ನಾಶಪಡಿಸಿದೆ ಎಂದು ಯುಎಸ್ ಮಿಲಿಟರಿ ಪ್ರಾಥಮಿಕವಾಗಿ ಅಂದಾಜಿಸಿದೆ.

ಆದರೆ ಯುಎಸ್‌ ಎಲ್ಲಿ ಈ ಕ್ಷಿಪಣಿಗಳನ್ನು ತಡೆದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸೌದಿ ಅರೇಬಿಯಾದಲ್ಲಿ ಯುಎಸ್ ಸಕ್ರಿಯ ಮಿಲಿಟರಿ ನೆಲೆಯನ್ನು ಹೊಂದಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಸರಿಸುಮಾರು 25 ಕ್ರೂಸ್ ಕ್ಷಿಪಣಿಗಳನ್ನು ಐಎಎಫ್ (ಇಸ್ರೇಲಿ ಏರ್ ಫೋರ್ಸ್) ಫೈಟರ್ ಜೆಟ್‌ಗಳು ದೇಶದ ಗಡಿಯ ಹೊರಗೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (RAF) ಹಲವಾರು ಇರಾನಿನ ಕ್ಷಿಪಣಿಗಳನ್ನು ತಡೆದಿದೆ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ, ಆದರೆ ಜೋರ್ಡಾನ್ ಸರ್ಕಾರವು ಇರಾನಿನ ಶಸ್ತ್ರಾಸ್ತ್ರಗಳನ್ನು ಉರುಳಿಸಿರುವ ಬಗ್ಗೆ ಮಾಹಿತಿ ನೀಡಿದೆ, ಆದರೆ ಉರುಳಿಸಿದ ಕ್ಷಿಪಣಿಗಳ ಬಗ್ಗೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ.

ಇಸ್ರೇಲ್ ಪ್ರಕಾರ, ಇರಾನ್ 330ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಿದೆ. ಇದರಲ್ಲಿ 30 ಕ್ರೂಸ್ ಕ್ಷಿಪಣಿಗಳು, ಸರಿಸುಮಾರು 180 ಶಾಹೆಡ್ ಡ್ರೋನ್‌ಗಳು ಮತ್ತು 120 ಎಮಾಡ್ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಒಳಗೊಂಡಿತ್ತು. ಇದರಲ್ಲಿ ಎಲ್ಲಾ ಡ್ರೋನ್‌ಗಳು ಮತ್ತು  ಕ್ಷಿಪಣಿಗಳನ್ನು ಇರಾನ್ ಭೂಪ್ರದೇಶದಿಂದ ಉಡಾಯಿಸಲಾಗಿದ್ದರೆ, ಕೆಲವು ಕ್ಷಿಪಣಿಗಳನ್ನು ಯೆಮೆನ್‌ನಿಂದ ಉಡಾವಣೆ ಮಾಡಲಾಗಿದೆ.

ಎಪ್ರಿಲ್ 1ರಂದು ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇರಾನ್‌ ಹೇಳಿತ್ತು.  ಇದರ ಬೆನ್ನಲಿ ಇಸ್ರೇಲ್ ಲೆಬನಾನ್‌ ಮೇಲೂ ವೈಮಾನಿಕ ದಾಳಿಯನ್ನು ನಡೆಸಿತ್ತು. ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ ಇಸ್ರೇಲ್‌ನಿಂದ ಲೆಬನಾನ್‌, ಇರಾನ್‌ ಗುರಿಯಾಗಿಸಿಕೊಂಡು ನಡೆದಿದ್ದ ದಾಳಿ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹಟ್ಟು ಹಾಕಿತ್ತು.

ಇದನ್ನು ಓದಿ: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...