Homeಅಂತರಾಷ್ಟ್ರೀಯಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

- Advertisement -
- Advertisement -

ಇಸ್ರೇಲ್‌ ಮೇಲೆ ಇರಾನ್‌ ಏಪ್ರಿಲ್ 13ರಂದು ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಇರಾನ್ ಇಸ್ರೇಲ್ ಕಡೆಗೆ ಉಡಾಯಿಸಿದ ಬಹುಪಾಲು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಯುನೈಟೆಡ್ ಸ್ಟೇಟ್ಸ್ ತಡೆದು ಹೊಡೆದುರುಳಿಸಿತು, ಇಸ್ರೇಲ್ ಅಲ್ಲ ಎಂದು ದಾಳಿಯ ಡೇಟಾವನ್ನು ವಿಶ್ಲೇಷಿಸುವ ವರದಿ ಹೇಳಿದೆ.

ಅಮೆರಿಕದ ಸುದ್ದಿವಾಹಿನಿ ದಿ ಇಂಟರ್‌ಸೆಪ್ಟ್‌ನೊಂದಿಗೆ ಮಾತನಾಡಿದ ಯುಎಸ್ ಮಿಲಿಟರಿ ಅಧಿಕಾರಿಗಳು, ಇಸ್ರೇಲ್ ತಲುಪುವ ಮೊದಲು ಇರಾನ್‌ ಉಡಾಯಿಸದ ಅರ್ಧಕ್ಕಿಂತ ಹೆಚ್ಚು ಕ್ಷಿಪಣಿಗಳನ್ನು ಇಸ್ರೇಲ್‌ ತಲುಪುವ ಮೊದಲು ಯುಎಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ, ಇರಾನ್ ಶನಿವಾರ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದೆ. 300ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಇಸ್ರೇಲ್‌ ಕಡೆ ಹಾರಿಸಿದೆ. ದಾಳಿಯ ನಂತರ ಮಿತ್ರರಾಷ್ಟ್ರಗಳಾದ US, ಜೋರ್ಡಾನ್, ಫ್ರಾನ್ಸ್ ಮತ್ತು ಬ್ರಿಟನ್ ಸಹಾಯದಿಂದ 99 ಪ್ರತಿಶತಕ್ಕಿಂತ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್‌ ಹೇಳಿತ್ತು.

ಇರಾನ್‌ನ ಅರ್ಧದಷ್ಟು ಶಸ್ತ್ರಾಸ್ತ್ರಗಳು ಕೆಲವು ರೀತಿಯ ತಾಂತ್ರಿಕ ವೈಫಲ್ಯವನ್ನು ಅನುಭವಿಸಿವೆ. ಉಳಿದ ಕ್ಷಿಪಣಿಗಳಲ್ಲಿ 80ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಯುಎಸ್ ನಾಶಪಡಿಸಿದೆ ಎಂದು ಯುಎಸ್ ಮಿಲಿಟರಿ ಪ್ರಾಥಮಿಕವಾಗಿ ಅಂದಾಜಿಸಿದೆ.

ಆದರೆ ಯುಎಸ್‌ ಎಲ್ಲಿ ಈ ಕ್ಷಿಪಣಿಗಳನ್ನು ತಡೆದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸೌದಿ ಅರೇಬಿಯಾದಲ್ಲಿ ಯುಎಸ್ ಸಕ್ರಿಯ ಮಿಲಿಟರಿ ನೆಲೆಯನ್ನು ಹೊಂದಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಸರಿಸುಮಾರು 25 ಕ್ರೂಸ್ ಕ್ಷಿಪಣಿಗಳನ್ನು ಐಎಎಫ್ (ಇಸ್ರೇಲಿ ಏರ್ ಫೋರ್ಸ್) ಫೈಟರ್ ಜೆಟ್‌ಗಳು ದೇಶದ ಗಡಿಯ ಹೊರಗೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (RAF) ಹಲವಾರು ಇರಾನಿನ ಕ್ಷಿಪಣಿಗಳನ್ನು ತಡೆದಿದೆ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ, ಆದರೆ ಜೋರ್ಡಾನ್ ಸರ್ಕಾರವು ಇರಾನಿನ ಶಸ್ತ್ರಾಸ್ತ್ರಗಳನ್ನು ಉರುಳಿಸಿರುವ ಬಗ್ಗೆ ಮಾಹಿತಿ ನೀಡಿದೆ, ಆದರೆ ಉರುಳಿಸಿದ ಕ್ಷಿಪಣಿಗಳ ಬಗ್ಗೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ.

ಇಸ್ರೇಲ್ ಪ್ರಕಾರ, ಇರಾನ್ 330ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಿದೆ. ಇದರಲ್ಲಿ 30 ಕ್ರೂಸ್ ಕ್ಷಿಪಣಿಗಳು, ಸರಿಸುಮಾರು 180 ಶಾಹೆಡ್ ಡ್ರೋನ್‌ಗಳು ಮತ್ತು 120 ಎಮಾಡ್ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಒಳಗೊಂಡಿತ್ತು. ಇದರಲ್ಲಿ ಎಲ್ಲಾ ಡ್ರೋನ್‌ಗಳು ಮತ್ತು  ಕ್ಷಿಪಣಿಗಳನ್ನು ಇರಾನ್ ಭೂಪ್ರದೇಶದಿಂದ ಉಡಾಯಿಸಲಾಗಿದ್ದರೆ, ಕೆಲವು ಕ್ಷಿಪಣಿಗಳನ್ನು ಯೆಮೆನ್‌ನಿಂದ ಉಡಾವಣೆ ಮಾಡಲಾಗಿದೆ.

ಎಪ್ರಿಲ್ 1ರಂದು ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇರಾನ್‌ ಹೇಳಿತ್ತು.  ಇದರ ಬೆನ್ನಲಿ ಇಸ್ರೇಲ್ ಲೆಬನಾನ್‌ ಮೇಲೂ ವೈಮಾನಿಕ ದಾಳಿಯನ್ನು ನಡೆಸಿತ್ತು. ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ ಇಸ್ರೇಲ್‌ನಿಂದ ಲೆಬನಾನ್‌, ಇರಾನ್‌ ಗುರಿಯಾಗಿಸಿಕೊಂಡು ನಡೆದಿದ್ದ ದಾಳಿ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹಟ್ಟು ಹಾಕಿತ್ತು.

ಇದನ್ನು ಓದಿ: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...