Homeಮುಖಪುಟಕೇಜ್ರಿವಾಲ್ ಬಂಧನ, ಕಾಂಗ್ರೆಸ್ ಖಾತೆ ಸ್ಥಗಿತ ವಿಚಾರ ಮತ್ತೊಮ್ಮೆ ಪ್ರಸ್ತಾಪಿಸಿದ ಯುಎಸ್: ಮುಕ್ತ, ನ್ಯಾಯಸಮ್ಮತ ಕಾನೂನು...

ಕೇಜ್ರಿವಾಲ್ ಬಂಧನ, ಕಾಂಗ್ರೆಸ್ ಖಾತೆ ಸ್ಥಗಿತ ವಿಚಾರ ಮತ್ತೊಮ್ಮೆ ಪ್ರಸ್ತಾಪಿಸಿದ ಯುಎಸ್: ಮುಕ್ತ, ನ್ಯಾಯಸಮ್ಮತ ಕಾನೂನು ಪ್ರಕ್ರಿಯೆಗೆ ಆಗ್ರಹ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಜಾಗತಿಕ ಮಟ್ಟದಲ್ಲಿ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಕೇಜ್ರಿವಾಲ್ ಬಂಧನ ಮತ್ತು ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಕುರಿತು ಯುಎಸ್ ಮತ್ತೊಮ್ಮೆ ಹೇಳಿಕೆ ಕೊಟ್ಟಿದೆ.

ಕೇಜ್ರಿವಾಲ್ ವಿರುದ್ದದ್ದ ಕಾನೂನು ಪ್ರಕ್ರಿಯೆಯು ‘ಮುಕ್ತ ಮತ್ತು ನ್ಯಾಯ ಸಮ್ಮತವಾಗಿರಬೇಕು’ ಎಂದು ಯುಎಸ್‌ನ ವಿದೇಶಾಂಗ ಇಲಾಖೆಯ ವಕ್ತಾರ ಹೇಳಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಭಾರತದಲ್ಲಿನ ಯುಎಸ್‌ ಹಿರಿಯ ರಾಯಭಾರಿ ಗ್ಲೊರಿಯಾ ಬರ್ಬೆನಾ ಅವರನ್ನು ಗುರುವಾರ ಕರೆಸಿಕೊಂಡ ವಿದೇಶಾಂಗ ಇಲಾಖೆ ಯುಎಸ್‌ನ ಹೇಳಿಕೆಯನ್ನು ಖಂಡಿಸಿತ್ತು.

ಆದರೆ, ಯುಎಸ್‌ ಮತ್ತೊಮ್ಮೆ ಕೇಜ್ರಿವಾಲ್ ಬಂಧನ ಮತ್ತು ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳ ಸ್ಥಗಿತದ ಕುರಿತು ಪ್ರತಿಕ್ರಿಯೆ ನೀಡಿದೆ.

“ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಮತ್ತು ಇತರ ಪ್ರಕ್ರಿಯೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚುನಾವಣೆಗೂ ಮುನ್ನ ಆದಾಯ ತೆರಿಗೆ ಅಧಿಕಾರಿಗಳು ತಮ್ಮ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್‌ ಪಕ್ಷದ ಆರೋಪಳ ಬಗ್ಗೆಯೂ ನಮಗೆ ತಿಳಿದಿದೆ” ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್‌ನ ವಕ್ತಾರ ಮ್ಯಾಥ್ಯೂ ಮಿಲ್ಲೆ ಹೇಳಿದ್ದಾರೆ.

ಪ್ರತಿಯೊಂದು ಸಮಸ್ಯೆಗಳಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳು ನಡೆಯಬೇಕು. ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಆದರೆ, ನಾವು ಸಾರ್ವಜನಿಕವಾಗಿ ಹೇಳಿರುವುದು ಪುನರುಚ್ಚಿಸುತ್ತೇನೆ, ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳು ನಡೆಯಬೇಕು” ಎಂದಿದ್ದಾರೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಸಮಯ ನೀಡುವಂತೆ ಜಾರಿ ನಿರ್ದೇಶನಾಲಯ ಬುಧವಾರ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದೆ.

ಇಡಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಈ ಅರ್ಜಿಯನ್ನು ಮಂಗಳವಾರವಷ್ಟೇ ಸಲ್ಲಿಸಲಾಗಿದ್ದು, ತಮ್ಮ ನಿಲುವು ದಾಖಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ. ಅಲ್ಲದೆ ಮಧ್ಯಂತರ ಪರಿಹಾರಕ್ಕೂ ಸ್ಪಂದಿಸಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ದೆಹಲಿ ನ್ಯಾಯಾಲಯ ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ. ಇಂದು ಕಸ್ಟಡಿ ಅವಧಿ ಮುಗಿಯುವ ಹಿನ್ನೆಲೆ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ವಿವರವಾದ ಉತ್ತರವನ್ನು ಇಂದು ನ್ಯಾಯಾಲಯಕ್ಕೆ ಕೇಜ್ರಿವಾಲ್ ನೀಡಲಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ : “ದೆಹಲಿ ಸರ್ಕಾರವನ್ನು ಜೈಲಿನಿಂದ ನಡೆಸುವಂತಿಲ್ಲ..”; ಲೆಫ್ಟಿನೆಂಟ್ ಜನರಲ್ ಸಕ್ಸೇನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...