Homeಅಂತರಾಷ್ಟ್ರೀಯಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

- Advertisement -
- Advertisement -

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ‘ಐಆರ್‌ಐಎಸ್ ದೆನಾ’ ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ.

ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ ಪೈಕಿ ಇದುವರೆಗೆ 87 ಮಂದಿಯ ಶವಗಳನ್ನು ಶ್ರೀಲಂಕಾದ ನೌಕಾಪಡೆಯು ಸಮುದ್ರದಿಂದ ಹೊರತೆಗೆದಿದೆ. 32 ಮಂದಿಯನ್ನು ಶ್ರೀಲಂಕಾ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ್ದು, ಅವರಿಗೆ ಗಾಲೆ ನಗರದ ಕಾರಪಿಟಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಸುಮಾರು 61 ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ದಕ್ಷಿಣ ಕರಾವಳಿಯ ಗಾಲೆ ನಗರದಿಂದ ಸುಮಾರು 40 ನಾಟಿಕಲ್ ಮೈಲಿ (ಸುಮಾರು 74 ಕಿ.ಮೀ.) ದೂರದಲ್ಲಿರುವ ಹಿಂದೂ ಮಹಾಸಾಗರದ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಇದು ತಮಿಳುನಾಡಿನ ಕನ್ಯಾಕುಮಾರಿಯಿಂದ ಸುಮಾರು 300 ಕಿ.ಮೀ. ದೂರದಲ್ಲಿದೆ ಎಂದು ವರದಿಯಾಗಿದೆ.

ಭಾರತದ ಆರ್ಥಿಕ ವಲಯದ (ಐಇಝೆಡ್‌) ಹೊರಗೆ ಈ ದಾಳಿ ನಡೆದಿದ್ದರೂ, ದೇಶದ ಅತ್ಯಂತ ಸಮೀಪದ ಜಲಪ್ರದೇಶದಲ್ಲಿ ಇಂತಹ ಸಂಘರ್ಷ ಸಂಭವಿಸಿರುವುದು ಭಾರತದ ಭದ್ರತಾ ದೃಷ್ಟಿಯಿಂದ ಕಳವಳಕಾರಿಯಾಗಿದೆ.

ಈ ದೊಡ್ಡ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಮೌನ ಪಾಲಿಸಿದೆ. ಇದು ರಾಜಕೀಯ ನಾಯಕರು ಮತ್ತು ಸಾರ್ವಜನಿಕರ ತೀವ್ರ ಟೀಕೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಮೋದಿ ಸರ್ಕಾರದ ಮೌನದ ಬಗ್ಗೆ ಆಶ್ವರ್ಯ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು, “ಸಂಘರ್ಷ ಭಾರತದ ಹಿತ್ತಲಿಗೆ (ಹಿಂದೂ ಮಹಾಸಾಗರ) ಬಂದಿದ್ದರೂ ಪ್ರಧಾನಿ ಮೌನವಾಗಿರುವುದು ‘ಆಘಾತಕಾರಿ” ಎಂದಿದ್ದಾರೆ. “ಪ್ರಧಾನಿಯವರು ದೇಶದ ಕಾರ್ಯತಂತ್ರದ ಸ್ವಾಯತ್ತತೆಯನ್ನು ರಾಜಿ ಮಾಡಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಮನೆಗೆ ಆಮಂತ್ರಿಸಿ ಕರೆದಿದ್ದ ಅತಿಥಿ ಹಡಗು ಹಿಂದಿರುಗುವಾಗ ಅದರ ಮೇಲೆ ದಾಳಿಯಾದರೂ ಮೋದಿ ಸರ್ಕಾರ ಮೌನವಾಗಿರುವುದು ರಾಷ್ಟ್ರೀಯ ಹಿತಾಸಕ್ತಿಯ ಅಧಃಪತನ” ಎಂದು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು, “ಇದು ಇತಿಹಾಸದಲ್ಲೇ ಅತ್ಯಂತ ‘ಹೇಡಿ ಮತ್ತು ಭಯಭೀತ’ ಸರ್ಕಾರ” ಎಂದಿದ್ದಾರೆ.

“ಭಾರತ ವಿದೇಶಿ ಶಕ್ತಿಗಳಿಗೆ ಗುಲಾಮನಂತಾಗಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

ಈ ದಾಳಿಯಿಂದ ಗಲ್ಫ್ ವಲಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಭಾರತದ 40% ತೈಲ ಮತ್ತು ಅನಿಲ ಪೂರೈಕೆಗೆ ಧಕ್ಕೆಯಾಗುವ ಆತಂಕವನ್ನು ಅನೇಕರು ವ್ಯಕ್ತಪಡಿಸಿದ್ದಾರೆ.

ಇದು ಮಾತ್ರವಲ್ಲದೆ, ಕಳೆದ ವಾರ ನಡೆದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆಯ ಬಗ್ಗೆಯೂ ಭಾರತ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಏಕೆಂದರೆ, ಭಾರತ ಐತಿಹಾಸಿಕವಾಗಿ ಇರಾನ್ ಜೊತೆ ಉತ್ತಮ ಸಂಬಂಧವನ್ನು ಹೊಂದಿರುವ ರಾಷ್ಟ್ರವಾಗಿದೆ. ಒಂದು ರೀತಿಯಲ್ಲಿ ಭಾರತ ಮತ್ತು ಇರಾನ್ ಆಪ್ತ ಸ್ನೇಹಿತರು ಎಂದು ಹೇಳಬಹುದು. ಹೀಗಿರುವಾಗ ಕೇಂದ್ರದ ಮೌನ ಪ್ರಶ್ನಾರ್ಹವಾಗಿದೆ.

ಮೃತ ನೌಕಾ ಸಿಬ್ಬಂದಿ ಭಾರತದ ಅತಿಥಿಗಳು

ಅಮೆರಿಕ ದಾಳಿಯಿಂದ ಸಾವಿಗೀಡಾದ ಇರಾನ್‌ ನೌಕಾ ಸಿಬ್ಬಂದಿ ಭಾರತ ಅತಿಥಿಗಳು. ಆಂಧ್ರ ಪ್ರದೇಶ ವಿಶಾಖಪಟ್ಟಣಂನಲ್ಲಿ ನಡೆದ ಬಹುರಾಷ್ಟ್ರೀಯ ನೌಕಾಪಡೆಯ ಸಮರಭ್ಯಾಸದಲ್ಲಿ ಪಾಲ್ಗೊಳ್ಳಲು ಇವರು ಭಾರತಕ್ಕೆ ಆಗಮಿಸಿದ್ದರು.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು, ಐಆರ್‌ಐಎಸ್‌ ದೆನಾ ನೌಕೆಯು ಭಾರತೀಯ ನೌಕಾಪಡೆಯ ಅತಿಥಿಯಾಗಿ ವಿಶಾಖಪಟ್ಟಣಂನ ‘ಮಿಲನ್ 2026’ ಕವಾಯತಿನಲ್ಲಿ ಭಾಗವಹಿಸಿತ್ತು. ಇಂತಹ ಅತಿಥಿ ನೌಕೆಯ ಮೇಲೆ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ದಾಳಿ ಮಾಡಿರುವುದು ಅಮಾನವೀಯ ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ಮೂಲಗಳ ಪ್ರಕಾರ, ಈ ನೌಕೆಯು ಫೆಬ್ರವರಿ 16 ರಿಂದ ಫೆಬ್ರವರಿ 25 ರವರೆಗೆ ಮಾತ್ರ ಭಾರತದ ಅಧಿಕೃತ ಅತಿಥಿಯಾಗಿತ್ತು. ಕವಾಯತು ಮುಗಿಸಿ ಫೆಬ್ರವರಿ 25 ರಂದೇ ಅದು ಭಾರತದ ಜಲಪ್ರದೇಶವನ್ನು ತೊರೆದಿದ್ದರಿಂದ, ದಾಳಿ ನಡೆದ ಸಮಯದಲ್ಲಿ (ಮಾರ್ಚ್ 4) ಅದು ತಾಂತ್ರಿಕವಾಗಿ ಭಾರತದ ಅತಿಥಿಯಾಗಿರಲಿಲ್ಲ ಎಂಬುದು ಸರ್ಕಾರದ ವಾದವಾಗಿದೆ ಎಂದು ವರದಿಯಾಗಿದೆ.

ಇಸ್ಲಾಮಿಕ್ ರೆವೆಲ್ಯೂಷನ್‌ ವರ್ಷಾಚರಣೆಗೆ ಶುಭಾಷಯ ತಿಳಿಸಿದ್ದ ಕೇಂದ್ರ ಈಗ ಮೌನ!

ಗಮನಾರ್ಹವಾಗಿ, ಇರಾನ್‌ನ ಇಸ್ಲಾಮಿಕ್ ರೆವೆಲ್ಯೂಷನ್‌ನ 47ನೇ ವರ್ಷಾಚರಣೆಯ ದಿನದಂದು, ಅಂದರೆ ಫೆಬ್ರವರಿ 11, 2026ರಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ಸರ್ಕಾರ ಮತ್ತು ಅಲ್ಲಿನ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದರು.

ಆದರೆ, ಇದೇ ಫೆಬ್ರವರಿ ಅಂತ್ಯಕ್ಕೆ ಅಂದರೆ 28ಕ್ಕೆ ನಡೆದ ಇರಾನ್ ಮೇಲಿನ ದಾಳಿ, ಮತ್ತು ಅಲ್ಲಿನ ಸರ್ವೋಚ್ಚ ನಾಯಕನ ಹತ್ಯೆ ಹಾಗೂ ಈಗ ಭಾರತದ ಕಾಲ ಬುಡದಲ್ಲೇ ನಡೆದಿರುವ ನೌಕೆ ಮೇಲಿನ ದಾಳಿಯ ಬಗ್ಗೆ ಭಾರತ ಮೌನ ವಹಿಸಿರುವುದು ಜನರನ್ನು ಆಶ್ಚರ್ಯಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...