Homeಅಂತರಾಷ್ಟ್ರೀಯಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

- Advertisement -
- Advertisement -

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ‘ಐಆರ್‌ಐಎಸ್ ದೆನಾ’ ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ.

ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ ಪೈಕಿ ಇದುವರೆಗೆ 87 ಮಂದಿಯ ಶವಗಳನ್ನು ಶ್ರೀಲಂಕಾದ ನೌಕಾಪಡೆಯು ಸಮುದ್ರದಿಂದ ಹೊರತೆಗೆದಿದೆ. 32 ಮಂದಿಯನ್ನು ಶ್ರೀಲಂಕಾ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ್ದು, ಅವರಿಗೆ ಗಾಲೆ ನಗರದ ಕಾರಪಿಟಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಸುಮಾರು 61 ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ದಕ್ಷಿಣ ಕರಾವಳಿಯ ಗಾಲೆ ನಗರದಿಂದ ಸುಮಾರು 40 ನಾಟಿಕಲ್ ಮೈಲಿ (ಸುಮಾರು 74 ಕಿ.ಮೀ.) ದೂರದಲ್ಲಿರುವ ಹಿಂದೂ ಮಹಾಸಾಗರದ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಇದು ತಮಿಳುನಾಡಿನ ಕನ್ಯಾಕುಮಾರಿಯಿಂದ ಸುಮಾರು 300 ಕಿ.ಮೀ. ದೂರದಲ್ಲಿದೆ ಎಂದು ವರದಿಯಾಗಿದೆ.

ಭಾರತದ ಆರ್ಥಿಕ ವಲಯದ (ಐಇಝೆಡ್‌) ಹೊರಗೆ ಈ ದಾಳಿ ನಡೆದಿದ್ದರೂ, ದೇಶದ ಅತ್ಯಂತ ಸಮೀಪದ ಜಲಪ್ರದೇಶದಲ್ಲಿ ಇಂತಹ ಸಂಘರ್ಷ ಸಂಭವಿಸಿರುವುದು ಭಾರತದ ಭದ್ರತಾ ದೃಷ್ಟಿಯಿಂದ ಕಳವಳಕಾರಿಯಾಗಿದೆ.

ಈ ದೊಡ್ಡ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಮೌನ ಪಾಲಿಸಿದೆ. ಇದು ರಾಜಕೀಯ ನಾಯಕರು ಮತ್ತು ಸಾರ್ವಜನಿಕರ ತೀವ್ರ ಟೀಕೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಮೋದಿ ಸರ್ಕಾರದ ಮೌನದ ಬಗ್ಗೆ ಆಶ್ವರ್ಯ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು, “ಸಂಘರ್ಷ ಭಾರತದ ಹಿತ್ತಲಿಗೆ (ಹಿಂದೂ ಮಹಾಸಾಗರ) ಬಂದಿದ್ದರೂ ಪ್ರಧಾನಿ ಮೌನವಾಗಿರುವುದು ‘ಆಘಾತಕಾರಿ” ಎಂದಿದ್ದಾರೆ. “ಪ್ರಧಾನಿಯವರು ದೇಶದ ಕಾರ್ಯತಂತ್ರದ ಸ್ವಾಯತ್ತತೆಯನ್ನು ರಾಜಿ ಮಾಡಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಮನೆಗೆ ಆಮಂತ್ರಿಸಿ ಕರೆದಿದ್ದ ಅತಿಥಿ ಹಡಗು ಹಿಂದಿರುಗುವಾಗ ಅದರ ಮೇಲೆ ದಾಳಿಯಾದರೂ ಮೋದಿ ಸರ್ಕಾರ ಮೌನವಾಗಿರುವುದು ರಾಷ್ಟ್ರೀಯ ಹಿತಾಸಕ್ತಿಯ ಅಧಃಪತನ” ಎಂದು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು, “ಇದು ಇತಿಹಾಸದಲ್ಲೇ ಅತ್ಯಂತ ‘ಹೇಡಿ ಮತ್ತು ಭಯಭೀತ’ ಸರ್ಕಾರ” ಎಂದಿದ್ದಾರೆ.

“ಭಾರತ ವಿದೇಶಿ ಶಕ್ತಿಗಳಿಗೆ ಗುಲಾಮನಂತಾಗಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

ಈ ದಾಳಿಯಿಂದ ಗಲ್ಫ್ ವಲಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಭಾರತದ 40% ತೈಲ ಮತ್ತು ಅನಿಲ ಪೂರೈಕೆಗೆ ಧಕ್ಕೆಯಾಗುವ ಆತಂಕವನ್ನು ಅನೇಕರು ವ್ಯಕ್ತಪಡಿಸಿದ್ದಾರೆ.

ಇದು ಮಾತ್ರವಲ್ಲದೆ, ಕಳೆದ ವಾರ ನಡೆದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆಯ ಬಗ್ಗೆಯೂ ಭಾರತ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಏಕೆಂದರೆ, ಭಾರತ ಐತಿಹಾಸಿಕವಾಗಿ ಇರಾನ್ ಜೊತೆ ಉತ್ತಮ ಸಂಬಂಧವನ್ನು ಹೊಂದಿರುವ ರಾಷ್ಟ್ರವಾಗಿದೆ. ಒಂದು ರೀತಿಯಲ್ಲಿ ಭಾರತ ಮತ್ತು ಇರಾನ್ ಆಪ್ತ ಸ್ನೇಹಿತರು ಎಂದು ಹೇಳಬಹುದು. ಹೀಗಿರುವಾಗ ಕೇಂದ್ರದ ಮೌನ ಪ್ರಶ್ನಾರ್ಹವಾಗಿದೆ.

ಮೃತ ನೌಕಾ ಸಿಬ್ಬಂದಿ ಭಾರತದ ಅತಿಥಿಗಳು

ಅಮೆರಿಕ ದಾಳಿಯಿಂದ ಸಾವಿಗೀಡಾದ ಇರಾನ್‌ ನೌಕಾ ಸಿಬ್ಬಂದಿ ಭಾರತ ಅತಿಥಿಗಳು. ಆಂಧ್ರ ಪ್ರದೇಶ ವಿಶಾಖಪಟ್ಟಣಂನಲ್ಲಿ ನಡೆದ ಬಹುರಾಷ್ಟ್ರೀಯ ನೌಕಾಪಡೆಯ ಸಮರಭ್ಯಾಸದಲ್ಲಿ ಪಾಲ್ಗೊಳ್ಳಲು ಇವರು ಭಾರತಕ್ಕೆ ಆಗಮಿಸಿದ್ದರು.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು, ಐಆರ್‌ಐಎಸ್‌ ದೆನಾ ನೌಕೆಯು ಭಾರತೀಯ ನೌಕಾಪಡೆಯ ಅತಿಥಿಯಾಗಿ ವಿಶಾಖಪಟ್ಟಣಂನ ‘ಮಿಲನ್ 2026’ ಕವಾಯತಿನಲ್ಲಿ ಭಾಗವಹಿಸಿತ್ತು. ಇಂತಹ ಅತಿಥಿ ನೌಕೆಯ ಮೇಲೆ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ದಾಳಿ ಮಾಡಿರುವುದು ಅಮಾನವೀಯ ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ಮೂಲಗಳ ಪ್ರಕಾರ, ಈ ನೌಕೆಯು ಫೆಬ್ರವರಿ 16 ರಿಂದ ಫೆಬ್ರವರಿ 25 ರವರೆಗೆ ಮಾತ್ರ ಭಾರತದ ಅಧಿಕೃತ ಅತಿಥಿಯಾಗಿತ್ತು. ಕವಾಯತು ಮುಗಿಸಿ ಫೆಬ್ರವರಿ 25 ರಂದೇ ಅದು ಭಾರತದ ಜಲಪ್ರದೇಶವನ್ನು ತೊರೆದಿದ್ದರಿಂದ, ದಾಳಿ ನಡೆದ ಸಮಯದಲ್ಲಿ (ಮಾರ್ಚ್ 4) ಅದು ತಾಂತ್ರಿಕವಾಗಿ ಭಾರತದ ಅತಿಥಿಯಾಗಿರಲಿಲ್ಲ ಎಂಬುದು ಸರ್ಕಾರದ ವಾದವಾಗಿದೆ ಎಂದು ವರದಿಯಾಗಿದೆ.

ಇಸ್ಲಾಮಿಕ್ ರೆವೆಲ್ಯೂಷನ್‌ ವರ್ಷಾಚರಣೆಗೆ ಶುಭಾಷಯ ತಿಳಿಸಿದ್ದ ಕೇಂದ್ರ ಈಗ ಮೌನ!

ಗಮನಾರ್ಹವಾಗಿ, ಇರಾನ್‌ನ ಇಸ್ಲಾಮಿಕ್ ರೆವೆಲ್ಯೂಷನ್‌ನ 47ನೇ ವರ್ಷಾಚರಣೆಯ ದಿನದಂದು, ಅಂದರೆ ಫೆಬ್ರವರಿ 11, 2026ರಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ಸರ್ಕಾರ ಮತ್ತು ಅಲ್ಲಿನ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದರು.

ಆದರೆ, ಇದೇ ಫೆಬ್ರವರಿ ಅಂತ್ಯಕ್ಕೆ ಅಂದರೆ 28ಕ್ಕೆ ನಡೆದ ಇರಾನ್ ಮೇಲಿನ ದಾಳಿ, ಮತ್ತು ಅಲ್ಲಿನ ಸರ್ವೋಚ್ಚ ನಾಯಕನ ಹತ್ಯೆ ಹಾಗೂ ಈಗ ಭಾರತದ ಕಾಲ ಬುಡದಲ್ಲೇ ನಡೆದಿರುವ ನೌಕೆ ಮೇಲಿನ ದಾಳಿಯ ಬಗ್ಗೆ ಭಾರತ ಮೌನ ವಹಿಸಿರುವುದು ಜನರನ್ನು ಆಶ್ಚರ್ಯಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...