Homeಅಂತರಾಷ್ಟ್ರೀಯಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

- Advertisement -
- Advertisement -

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ‘ಐಆರ್‌ಐಎಸ್ ದೆನಾ’ ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ.

ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ ಪೈಕಿ ಇದುವರೆಗೆ 87 ಮಂದಿಯ ಶವಗಳನ್ನು ಶ್ರೀಲಂಕಾದ ನೌಕಾಪಡೆಯು ಸಮುದ್ರದಿಂದ ಹೊರತೆಗೆದಿದೆ. 32 ಮಂದಿಯನ್ನು ಶ್ರೀಲಂಕಾ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ್ದು, ಅವರಿಗೆ ಗಾಲೆ ನಗರದ ಕಾರಪಿಟಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಸುಮಾರು 61 ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ದಕ್ಷಿಣ ಕರಾವಳಿಯ ಗಾಲೆ ನಗರದಿಂದ ಸುಮಾರು 40 ನಾಟಿಕಲ್ ಮೈಲಿ (ಸುಮಾರು 74 ಕಿ.ಮೀ.) ದೂರದಲ್ಲಿರುವ ಹಿಂದೂ ಮಹಾಸಾಗರದ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಇದು ತಮಿಳುನಾಡಿನ ಕನ್ಯಾಕುಮಾರಿಯಿಂದ ಸುಮಾರು 300 ಕಿ.ಮೀ. ದೂರದಲ್ಲಿದೆ ಎಂದು ವರದಿಯಾಗಿದೆ.

ಭಾರತದ ಆರ್ಥಿಕ ವಲಯದ (ಐಇಝೆಡ್‌) ಹೊರಗೆ ಈ ದಾಳಿ ನಡೆದಿದ್ದರೂ, ದೇಶದ ಅತ್ಯಂತ ಸಮೀಪದ ಜಲಪ್ರದೇಶದಲ್ಲಿ ಇಂತಹ ಸಂಘರ್ಷ ಸಂಭವಿಸಿರುವುದು ಭಾರತದ ಭದ್ರತಾ ದೃಷ್ಟಿಯಿಂದ ಕಳವಳಕಾರಿಯಾಗಿದೆ.

ಈ ದೊಡ್ಡ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಮೌನ ಪಾಲಿಸಿದೆ. ಇದು ರಾಜಕೀಯ ನಾಯಕರು ಮತ್ತು ಸಾರ್ವಜನಿಕರ ತೀವ್ರ ಟೀಕೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಮೋದಿ ಸರ್ಕಾರದ ಮೌನದ ಬಗ್ಗೆ ಆಶ್ವರ್ಯ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು, “ಸಂಘರ್ಷ ಭಾರತದ ಹಿತ್ತಲಿಗೆ (ಹಿಂದೂ ಮಹಾಸಾಗರ) ಬಂದಿದ್ದರೂ ಪ್ರಧಾನಿ ಮೌನವಾಗಿರುವುದು ‘ಆಘಾತಕಾರಿ” ಎಂದಿದ್ದಾರೆ. “ಪ್ರಧಾನಿಯವರು ದೇಶದ ಕಾರ್ಯತಂತ್ರದ ಸ್ವಾಯತ್ತತೆಯನ್ನು ರಾಜಿ ಮಾಡಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಮನೆಗೆ ಆಮಂತ್ರಿಸಿ ಕರೆದಿದ್ದ ಅತಿಥಿ ಹಡಗು ಹಿಂದಿರುಗುವಾಗ ಅದರ ಮೇಲೆ ದಾಳಿಯಾದರೂ ಮೋದಿ ಸರ್ಕಾರ ಮೌನವಾಗಿರುವುದು ರಾಷ್ಟ್ರೀಯ ಹಿತಾಸಕ್ತಿಯ ಅಧಃಪತನ” ಎಂದು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು, “ಇದು ಇತಿಹಾಸದಲ್ಲೇ ಅತ್ಯಂತ ‘ಹೇಡಿ ಮತ್ತು ಭಯಭೀತ’ ಸರ್ಕಾರ” ಎಂದಿದ್ದಾರೆ.

“ಭಾರತ ವಿದೇಶಿ ಶಕ್ತಿಗಳಿಗೆ ಗುಲಾಮನಂತಾಗಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

ಈ ದಾಳಿಯಿಂದ ಗಲ್ಫ್ ವಲಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಭಾರತದ 40% ತೈಲ ಮತ್ತು ಅನಿಲ ಪೂರೈಕೆಗೆ ಧಕ್ಕೆಯಾಗುವ ಆತಂಕವನ್ನು ಅನೇಕರು ವ್ಯಕ್ತಪಡಿಸಿದ್ದಾರೆ.

ಇದು ಮಾತ್ರವಲ್ಲದೆ, ಕಳೆದ ವಾರ ನಡೆದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆಯ ಬಗ್ಗೆಯೂ ಭಾರತ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಏಕೆಂದರೆ, ಭಾರತ ಐತಿಹಾಸಿಕವಾಗಿ ಇರಾನ್ ಜೊತೆ ಉತ್ತಮ ಸಂಬಂಧವನ್ನು ಹೊಂದಿರುವ ರಾಷ್ಟ್ರವಾಗಿದೆ. ಒಂದು ರೀತಿಯಲ್ಲಿ ಭಾರತ ಮತ್ತು ಇರಾನ್ ಆಪ್ತ ಸ್ನೇಹಿತರು ಎಂದು ಹೇಳಬಹುದು. ಹೀಗಿರುವಾಗ ಕೇಂದ್ರದ ಮೌನ ಪ್ರಶ್ನಾರ್ಹವಾಗಿದೆ.

ಮೃತ ನೌಕಾ ಸಿಬ್ಬಂದಿ ಭಾರತದ ಅತಿಥಿಗಳು

ಅಮೆರಿಕ ದಾಳಿಯಿಂದ ಸಾವಿಗೀಡಾದ ಇರಾನ್‌ ನೌಕಾ ಸಿಬ್ಬಂದಿ ಭಾರತ ಅತಿಥಿಗಳು. ಆಂಧ್ರ ಪ್ರದೇಶ ವಿಶಾಖಪಟ್ಟಣಂನಲ್ಲಿ ನಡೆದ ಬಹುರಾಷ್ಟ್ರೀಯ ನೌಕಾಪಡೆಯ ಸಮರಭ್ಯಾಸದಲ್ಲಿ ಪಾಲ್ಗೊಳ್ಳಲು ಇವರು ಭಾರತಕ್ಕೆ ಆಗಮಿಸಿದ್ದರು.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು, ಐಆರ್‌ಐಎಸ್‌ ದೆನಾ ನೌಕೆಯು ಭಾರತೀಯ ನೌಕಾಪಡೆಯ ಅತಿಥಿಯಾಗಿ ವಿಶಾಖಪಟ್ಟಣಂನ ‘ಮಿಲನ್ 2026’ ಕವಾಯತಿನಲ್ಲಿ ಭಾಗವಹಿಸಿತ್ತು. ಇಂತಹ ಅತಿಥಿ ನೌಕೆಯ ಮೇಲೆ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ದಾಳಿ ಮಾಡಿರುವುದು ಅಮಾನವೀಯ ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ಮೂಲಗಳ ಪ್ರಕಾರ, ಈ ನೌಕೆಯು ಫೆಬ್ರವರಿ 16 ರಿಂದ ಫೆಬ್ರವರಿ 25 ರವರೆಗೆ ಮಾತ್ರ ಭಾರತದ ಅಧಿಕೃತ ಅತಿಥಿಯಾಗಿತ್ತು. ಕವಾಯತು ಮುಗಿಸಿ ಫೆಬ್ರವರಿ 25 ರಂದೇ ಅದು ಭಾರತದ ಜಲಪ್ರದೇಶವನ್ನು ತೊರೆದಿದ್ದರಿಂದ, ದಾಳಿ ನಡೆದ ಸಮಯದಲ್ಲಿ (ಮಾರ್ಚ್ 4) ಅದು ತಾಂತ್ರಿಕವಾಗಿ ಭಾರತದ ಅತಿಥಿಯಾಗಿರಲಿಲ್ಲ ಎಂಬುದು ಸರ್ಕಾರದ ವಾದವಾಗಿದೆ ಎಂದು ವರದಿಯಾಗಿದೆ.

ಇಸ್ಲಾಮಿಕ್ ರೆವೆಲ್ಯೂಷನ್‌ ವರ್ಷಾಚರಣೆಗೆ ಶುಭಾಷಯ ತಿಳಿಸಿದ್ದ ಕೇಂದ್ರ ಈಗ ಮೌನ!

ಗಮನಾರ್ಹವಾಗಿ, ಇರಾನ್‌ನ ಇಸ್ಲಾಮಿಕ್ ರೆವೆಲ್ಯೂಷನ್‌ನ 47ನೇ ವರ್ಷಾಚರಣೆಯ ದಿನದಂದು, ಅಂದರೆ ಫೆಬ್ರವರಿ 11, 2026ರಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ಸರ್ಕಾರ ಮತ್ತು ಅಲ್ಲಿನ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದರು.

ಆದರೆ, ಇದೇ ಫೆಬ್ರವರಿ ಅಂತ್ಯಕ್ಕೆ ಅಂದರೆ 28ಕ್ಕೆ ನಡೆದ ಇರಾನ್ ಮೇಲಿನ ದಾಳಿ, ಮತ್ತು ಅಲ್ಲಿನ ಸರ್ವೋಚ್ಚ ನಾಯಕನ ಹತ್ಯೆ ಹಾಗೂ ಈಗ ಭಾರತದ ಕಾಲ ಬುಡದಲ್ಲೇ ನಡೆದಿರುವ ನೌಕೆ ಮೇಲಿನ ದಾಳಿಯ ಬಗ್ಗೆ ಭಾರತ ಮೌನ ವಹಿಸಿರುವುದು ಜನರನ್ನು ಆಶ್ಚರ್ಯಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...