Homeಅಂತರಾಷ್ಟ್ರೀಯಅಮೇರಿಕಾದಲ್ಲಿ ಟಿಕ್‌ ಟಾಕ್‌ ನಿಷೇಧ: ನ್ಯಾಯಾಲದಲ್ಲಿ ಪ್ರಶ್ನಿಸುತ್ತೇವೆ; ಕಂಪನಿ

ಅಮೇರಿಕಾದಲ್ಲಿ ಟಿಕ್‌ ಟಾಕ್‌ ನಿಷೇಧ: ನ್ಯಾಯಾಲದಲ್ಲಿ ಪ್ರಶ್ನಿಸುತ್ತೇವೆ; ಕಂಪನಿ

ಆಗಸ್ಟ್ 6 ರಂದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಅಮೆರಿಕನ್ನರಿಗೆ ಟಿಕ್‌ಟಾಕ್‌ನ ಚೀನಾದ ಮೂಲ ಕಂಪನಿ ಬೈಟ್‌ಡ್ಯಾನ್ಸ್‌ನೊಂದಿಗೆ ವ್ಯವಹಾರ ಮಾಡುವುದನ್ನು ನಿಲ್ಲಿಸಲು 45 ದಿನಗಳ ಕಾಲಾವಕಾಶ ನೀಡಿದರು.

- Advertisement -
- Advertisement -

ಟಿಕ್‌ ಟಾಕ್‌ ಅನ್ನು ನಿಷೇಧಿಸಿರುವ ಅಮೇರಿಕಾ ಸರ್ಕಾರದ ನಿರ್ಧಾರ ಮತ್ತು ಅದನ್ನು ರಾಷ್ಟ್ರೀಯ ಭದ್ರತಾ ಬೆದರಿಕೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಸವಾಲು ಹಾಕುವುದಾಗಿ ವಿಡಿಯೋ ಅಪ್ಲಿಕೇಶನ್ ಟಿಕ್ಟಾಕ್  ಕಂಪನಿ ಹೇಳಿದೆ ಎಂದು ಎಎಫ್‌ಪಿ ಭಾನುವಾರ ವರದಿ ಮಾಡಿದೆ.

ಆಗಸ್ಟ್ 6 ರಂದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಅಮೆರಿಕನ್ನರಿಗೆ ಟಿಕ್‌ಟಾಕ್‌ನ ಚೀನಾದ ಮೂಲ ಕಂಪನಿ ಬೈಟ್‌ಡ್ಯಾನ್ಸ್‌ನೊಂದಿಗೆ ವ್ಯವಹಾರ ಮಾಡುವುದನ್ನು ನಿಲ್ಲಿಸಲು 45 ದಿನಗಳ ಕಾಲಾವಕಾಶ ನೀಡಲಾಗಿತ್ತು.

ಆಗಸ್ಟ್ 15 ರಂದು ಅಮೆರಿಕದಲ್ಲಿ ತನ್ನ ಆಸ್ತಿಯನ್ನು ಮಾರಾಟ ಮಾಡಲು ಬೈಟ್‌ಡ್ಯಾನ್ಸ್‌ಗೆ 90 ದಿನಗಳ ಕಾಲಾವಕಾಶ ನೀಡಿದ್ದರು.

ಆಗಸ್ಟ್ 6 ರ ಆದೇಶವನ್ನು ಪ್ರಶ್ನಿಸುವುದಾಗಿ ಟಿಕ್ ಟಾಕ್ ಹೇಳಿದೆ. “ಕಾನೂನಿನ ನಿಯಮವನ್ನು ತ್ಯಜಿಸಲಾಗಿಲ್ಲ. ನಮ್ಮ ಕಂಪನಿ ಮತ್ತು ಬಳಕೆದಾರರನ್ನು ನ್ಯಾಯಯುತವಾಗಿ ಪರಿಗಣಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು, ನ್ಯಾಯಾಂಗ ವ್ಯವಸ್ಥೆಯ ಮೂಲಕ ಕಾರ್ಯನಿರ್ವಾಹಕ ಆದೇಶವನ್ನು ಪ್ರಶ್ನಿಸುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಟಿಕ್ ಟಾಕ್ ಕಂಪನಿ ತಿಳಿಸಿದೆ.

ಇದು ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಟಿಕ್‌ಟಾಕ್ ಪದೇ ಪದೇ ಉಚ್ಚರಿಸುತ್ತಿದೆ.

ಆಗಸ್ಟ್ 5 ರಂದು, ಬೈಟ್‌ಡ್ಯಾನ್ಸ್ ಲಿಮಿಟೆಡ್‌ನ ಸಂಸ್ಥಾಪಕ ಜಾಂಗ್ ಯಿಮಿಂಗ್, ಮೈಕ್ರೋಸಾಫ್ಟ್‌ಗೆ ಮಾರಾಟ ಮಾಡುವುದರಿಂದ, ಅಮೇರಿಕಾದಲ್ಲಿ ಟಿಕ್‌ಟಾಕ್ ನ ನಿಷೇಧವನ್ನು ತಡೆಯುವ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದರು.

ಮೈಕ್ರೋಸಾಫ್ಟ್ ಆಗಸ್ಟ್ 3 ರಂದು ಟಿಕ್‌ಟಾಕ್‌ನ ಕೆಲವು ಭಾಗಗಳನ್ನು ಖರೀದಿಸಲು ಬೈಟ್‌ಡ್ಯಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿತ್ತು.

ಜೂನ್ 15 ರಂದು ಗಾಲ್ವಾನ್ ವ್ಯಾಲಿ ಘರ್ಷಣೆಯ ನಂತರ ಭಾರತದಲ್ಲಿ ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿತ್ತು.

ಈ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಭಾರತೀಯ ಸೈನಿಕರ ಸಾವುಗಳಿಗೆ ಪ್ರತಿಯಾಗಿ ಚೀನಾದ ಸರಕು ಮತ್ತು ವ್ಯಾಪಾರವನ್ನು ಬಹಿಷ್ಕರಿಸುವ ಕೂಗನ್ನು ಹುಟ್ಟುಹಾಕಿದ್ದವು.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆಗಳನ್ನು ಉಲ್ಲೇಖಿಸಿ ಜೂನ್‌ನಲ್ಲಿ ಕೇಂದ್ರ ಸರ್ಕಾರವು ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು.

ನಿಷೇಧಿತ ಅಪ್ಲಿಕೇಶನ್‌ಗಳ ತದ್ರೂಪಗಳಾಗಿದ್ದ 47 ಅಪ್ಲಿಕೇಶನ್‌ಗಳನ್ನು ಸಹ ನಿರ್ಬಂಧಿಸಲಾಗಿದೆ. ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಭಾರತದ ಈ ಕ್ರಮವನ್ನು ಚೀನಾವು, ವಿಶ್ವ ವಾಣಿಜ್ಯ ಸಂಸ್ಥೆಯ ನಿಯಮಗಳ ಉಲ್ಲಂಘನೆ ಎಂದು ಕರೆದಿದೆ.


ಇದನ್ನೂ ಓದಿ: ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...