Homeಅಂತರಾಷ್ಟ್ರೀಯಅಮೇರಿಕಾದಲ್ಲಿ ಟಿಕ್‌ ಟಾಕ್‌ ನಿಷೇಧ: ನ್ಯಾಯಾಲದಲ್ಲಿ ಪ್ರಶ್ನಿಸುತ್ತೇವೆ; ಕಂಪನಿ

ಅಮೇರಿಕಾದಲ್ಲಿ ಟಿಕ್‌ ಟಾಕ್‌ ನಿಷೇಧ: ನ್ಯಾಯಾಲದಲ್ಲಿ ಪ್ರಶ್ನಿಸುತ್ತೇವೆ; ಕಂಪನಿ

ಆಗಸ್ಟ್ 6 ರಂದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಅಮೆರಿಕನ್ನರಿಗೆ ಟಿಕ್‌ಟಾಕ್‌ನ ಚೀನಾದ ಮೂಲ ಕಂಪನಿ ಬೈಟ್‌ಡ್ಯಾನ್ಸ್‌ನೊಂದಿಗೆ ವ್ಯವಹಾರ ಮಾಡುವುದನ್ನು ನಿಲ್ಲಿಸಲು 45 ದಿನಗಳ ಕಾಲಾವಕಾಶ ನೀಡಿದರು.

- Advertisement -
- Advertisement -

ಟಿಕ್‌ ಟಾಕ್‌ ಅನ್ನು ನಿಷೇಧಿಸಿರುವ ಅಮೇರಿಕಾ ಸರ್ಕಾರದ ನಿರ್ಧಾರ ಮತ್ತು ಅದನ್ನು ರಾಷ್ಟ್ರೀಯ ಭದ್ರತಾ ಬೆದರಿಕೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಸವಾಲು ಹಾಕುವುದಾಗಿ ವಿಡಿಯೋ ಅಪ್ಲಿಕೇಶನ್ ಟಿಕ್ಟಾಕ್  ಕಂಪನಿ ಹೇಳಿದೆ ಎಂದು ಎಎಫ್‌ಪಿ ಭಾನುವಾರ ವರದಿ ಮಾಡಿದೆ.

ಆಗಸ್ಟ್ 6 ರಂದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಅಮೆರಿಕನ್ನರಿಗೆ ಟಿಕ್‌ಟಾಕ್‌ನ ಚೀನಾದ ಮೂಲ ಕಂಪನಿ ಬೈಟ್‌ಡ್ಯಾನ್ಸ್‌ನೊಂದಿಗೆ ವ್ಯವಹಾರ ಮಾಡುವುದನ್ನು ನಿಲ್ಲಿಸಲು 45 ದಿನಗಳ ಕಾಲಾವಕಾಶ ನೀಡಲಾಗಿತ್ತು.

ಆಗಸ್ಟ್ 15 ರಂದು ಅಮೆರಿಕದಲ್ಲಿ ತನ್ನ ಆಸ್ತಿಯನ್ನು ಮಾರಾಟ ಮಾಡಲು ಬೈಟ್‌ಡ್ಯಾನ್ಸ್‌ಗೆ 90 ದಿನಗಳ ಕಾಲಾವಕಾಶ ನೀಡಿದ್ದರು.

ಆಗಸ್ಟ್ 6 ರ ಆದೇಶವನ್ನು ಪ್ರಶ್ನಿಸುವುದಾಗಿ ಟಿಕ್ ಟಾಕ್ ಹೇಳಿದೆ. “ಕಾನೂನಿನ ನಿಯಮವನ್ನು ತ್ಯಜಿಸಲಾಗಿಲ್ಲ. ನಮ್ಮ ಕಂಪನಿ ಮತ್ತು ಬಳಕೆದಾರರನ್ನು ನ್ಯಾಯಯುತವಾಗಿ ಪರಿಗಣಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು, ನ್ಯಾಯಾಂಗ ವ್ಯವಸ್ಥೆಯ ಮೂಲಕ ಕಾರ್ಯನಿರ್ವಾಹಕ ಆದೇಶವನ್ನು ಪ್ರಶ್ನಿಸುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಟಿಕ್ ಟಾಕ್ ಕಂಪನಿ ತಿಳಿಸಿದೆ.

ಇದು ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಟಿಕ್‌ಟಾಕ್ ಪದೇ ಪದೇ ಉಚ್ಚರಿಸುತ್ತಿದೆ.

ಆಗಸ್ಟ್ 5 ರಂದು, ಬೈಟ್‌ಡ್ಯಾನ್ಸ್ ಲಿಮಿಟೆಡ್‌ನ ಸಂಸ್ಥಾಪಕ ಜಾಂಗ್ ಯಿಮಿಂಗ್, ಮೈಕ್ರೋಸಾಫ್ಟ್‌ಗೆ ಮಾರಾಟ ಮಾಡುವುದರಿಂದ, ಅಮೇರಿಕಾದಲ್ಲಿ ಟಿಕ್‌ಟಾಕ್ ನ ನಿಷೇಧವನ್ನು ತಡೆಯುವ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದರು.

ಮೈಕ್ರೋಸಾಫ್ಟ್ ಆಗಸ್ಟ್ 3 ರಂದು ಟಿಕ್‌ಟಾಕ್‌ನ ಕೆಲವು ಭಾಗಗಳನ್ನು ಖರೀದಿಸಲು ಬೈಟ್‌ಡ್ಯಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿತ್ತು.

ಜೂನ್ 15 ರಂದು ಗಾಲ್ವಾನ್ ವ್ಯಾಲಿ ಘರ್ಷಣೆಯ ನಂತರ ಭಾರತದಲ್ಲಿ ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿತ್ತು.

ಈ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಭಾರತೀಯ ಸೈನಿಕರ ಸಾವುಗಳಿಗೆ ಪ್ರತಿಯಾಗಿ ಚೀನಾದ ಸರಕು ಮತ್ತು ವ್ಯಾಪಾರವನ್ನು ಬಹಿಷ್ಕರಿಸುವ ಕೂಗನ್ನು ಹುಟ್ಟುಹಾಕಿದ್ದವು.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆಗಳನ್ನು ಉಲ್ಲೇಖಿಸಿ ಜೂನ್‌ನಲ್ಲಿ ಕೇಂದ್ರ ಸರ್ಕಾರವು ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು.

ನಿಷೇಧಿತ ಅಪ್ಲಿಕೇಶನ್‌ಗಳ ತದ್ರೂಪಗಳಾಗಿದ್ದ 47 ಅಪ್ಲಿಕೇಶನ್‌ಗಳನ್ನು ಸಹ ನಿರ್ಬಂಧಿಸಲಾಗಿದೆ. ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಭಾರತದ ಈ ಕ್ರಮವನ್ನು ಚೀನಾವು, ವಿಶ್ವ ವಾಣಿಜ್ಯ ಸಂಸ್ಥೆಯ ನಿಯಮಗಳ ಉಲ್ಲಂಘನೆ ಎಂದು ಕರೆದಿದೆ.


ಇದನ್ನೂ ಓದಿ: ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...