Homeಅಂತರಾಷ್ಟ್ರೀಯಅಮೇರಿಕಾದಲ್ಲಿ ಟಿಕ್‌ ಟಾಕ್‌ ನಿಷೇಧ: ನ್ಯಾಯಾಲದಲ್ಲಿ ಪ್ರಶ್ನಿಸುತ್ತೇವೆ; ಕಂಪನಿ

ಅಮೇರಿಕಾದಲ್ಲಿ ಟಿಕ್‌ ಟಾಕ್‌ ನಿಷೇಧ: ನ್ಯಾಯಾಲದಲ್ಲಿ ಪ್ರಶ್ನಿಸುತ್ತೇವೆ; ಕಂಪನಿ

ಆಗಸ್ಟ್ 6 ರಂದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಅಮೆರಿಕನ್ನರಿಗೆ ಟಿಕ್‌ಟಾಕ್‌ನ ಚೀನಾದ ಮೂಲ ಕಂಪನಿ ಬೈಟ್‌ಡ್ಯಾನ್ಸ್‌ನೊಂದಿಗೆ ವ್ಯವಹಾರ ಮಾಡುವುದನ್ನು ನಿಲ್ಲಿಸಲು 45 ದಿನಗಳ ಕಾಲಾವಕಾಶ ನೀಡಿದರು.

- Advertisement -
- Advertisement -

ಟಿಕ್‌ ಟಾಕ್‌ ಅನ್ನು ನಿಷೇಧಿಸಿರುವ ಅಮೇರಿಕಾ ಸರ್ಕಾರದ ನಿರ್ಧಾರ ಮತ್ತು ಅದನ್ನು ರಾಷ್ಟ್ರೀಯ ಭದ್ರತಾ ಬೆದರಿಕೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಸವಾಲು ಹಾಕುವುದಾಗಿ ವಿಡಿಯೋ ಅಪ್ಲಿಕೇಶನ್ ಟಿಕ್ಟಾಕ್  ಕಂಪನಿ ಹೇಳಿದೆ ಎಂದು ಎಎಫ್‌ಪಿ ಭಾನುವಾರ ವರದಿ ಮಾಡಿದೆ.

ಆಗಸ್ಟ್ 6 ರಂದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಅಮೆರಿಕನ್ನರಿಗೆ ಟಿಕ್‌ಟಾಕ್‌ನ ಚೀನಾದ ಮೂಲ ಕಂಪನಿ ಬೈಟ್‌ಡ್ಯಾನ್ಸ್‌ನೊಂದಿಗೆ ವ್ಯವಹಾರ ಮಾಡುವುದನ್ನು ನಿಲ್ಲಿಸಲು 45 ದಿನಗಳ ಕಾಲಾವಕಾಶ ನೀಡಲಾಗಿತ್ತು.

ಆಗಸ್ಟ್ 15 ರಂದು ಅಮೆರಿಕದಲ್ಲಿ ತನ್ನ ಆಸ್ತಿಯನ್ನು ಮಾರಾಟ ಮಾಡಲು ಬೈಟ್‌ಡ್ಯಾನ್ಸ್‌ಗೆ 90 ದಿನಗಳ ಕಾಲಾವಕಾಶ ನೀಡಿದ್ದರು.

ಆಗಸ್ಟ್ 6 ರ ಆದೇಶವನ್ನು ಪ್ರಶ್ನಿಸುವುದಾಗಿ ಟಿಕ್ ಟಾಕ್ ಹೇಳಿದೆ. “ಕಾನೂನಿನ ನಿಯಮವನ್ನು ತ್ಯಜಿಸಲಾಗಿಲ್ಲ. ನಮ್ಮ ಕಂಪನಿ ಮತ್ತು ಬಳಕೆದಾರರನ್ನು ನ್ಯಾಯಯುತವಾಗಿ ಪರಿಗಣಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು, ನ್ಯಾಯಾಂಗ ವ್ಯವಸ್ಥೆಯ ಮೂಲಕ ಕಾರ್ಯನಿರ್ವಾಹಕ ಆದೇಶವನ್ನು ಪ್ರಶ್ನಿಸುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಟಿಕ್ ಟಾಕ್ ಕಂಪನಿ ತಿಳಿಸಿದೆ.

ಇದು ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಟಿಕ್‌ಟಾಕ್ ಪದೇ ಪದೇ ಉಚ್ಚರಿಸುತ್ತಿದೆ.

ಆಗಸ್ಟ್ 5 ರಂದು, ಬೈಟ್‌ಡ್ಯಾನ್ಸ್ ಲಿಮಿಟೆಡ್‌ನ ಸಂಸ್ಥಾಪಕ ಜಾಂಗ್ ಯಿಮಿಂಗ್, ಮೈಕ್ರೋಸಾಫ್ಟ್‌ಗೆ ಮಾರಾಟ ಮಾಡುವುದರಿಂದ, ಅಮೇರಿಕಾದಲ್ಲಿ ಟಿಕ್‌ಟಾಕ್ ನ ನಿಷೇಧವನ್ನು ತಡೆಯುವ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದರು.

ಮೈಕ್ರೋಸಾಫ್ಟ್ ಆಗಸ್ಟ್ 3 ರಂದು ಟಿಕ್‌ಟಾಕ್‌ನ ಕೆಲವು ಭಾಗಗಳನ್ನು ಖರೀದಿಸಲು ಬೈಟ್‌ಡ್ಯಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿತ್ತು.

ಜೂನ್ 15 ರಂದು ಗಾಲ್ವಾನ್ ವ್ಯಾಲಿ ಘರ್ಷಣೆಯ ನಂತರ ಭಾರತದಲ್ಲಿ ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿತ್ತು.

ಈ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಭಾರತೀಯ ಸೈನಿಕರ ಸಾವುಗಳಿಗೆ ಪ್ರತಿಯಾಗಿ ಚೀನಾದ ಸರಕು ಮತ್ತು ವ್ಯಾಪಾರವನ್ನು ಬಹಿಷ್ಕರಿಸುವ ಕೂಗನ್ನು ಹುಟ್ಟುಹಾಕಿದ್ದವು.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆಗಳನ್ನು ಉಲ್ಲೇಖಿಸಿ ಜೂನ್‌ನಲ್ಲಿ ಕೇಂದ್ರ ಸರ್ಕಾರವು ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು.

ನಿಷೇಧಿತ ಅಪ್ಲಿಕೇಶನ್‌ಗಳ ತದ್ರೂಪಗಳಾಗಿದ್ದ 47 ಅಪ್ಲಿಕೇಶನ್‌ಗಳನ್ನು ಸಹ ನಿರ್ಬಂಧಿಸಲಾಗಿದೆ. ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಭಾರತದ ಈ ಕ್ರಮವನ್ನು ಚೀನಾವು, ವಿಶ್ವ ವಾಣಿಜ್ಯ ಸಂಸ್ಥೆಯ ನಿಯಮಗಳ ಉಲ್ಲಂಘನೆ ಎಂದು ಕರೆದಿದೆ.


ಇದನ್ನೂ ಓದಿ: ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....