Homeಅಂತರಾಷ್ಟ್ರೀಯಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ರಾಬಿಟ್ ಹ್ಯಾಶ್ ಸಮುದಾಯುವು 1990ರ ಇಸವಿಯಿಂದ ತಮ್ಮ ಮೇಯರ್​ ಆಗಿ ನಾಯಿಗಳನ್ನು ಆಯ್ಕೆ ಮಾಡುತ್ತಾ ಬಂದಿದ್ದಾರೆ.

- Advertisement -
- Advertisement -

ವಿಶ್ವವೇ ಅಮೆರಿಕಾ ಚುನಾವಣಾ ಫಲಿತಾಂಶಕ್ಕಾಗಿ ಎದುರು ನೋಡುತ್ತಿದೆ. ನಿನ್ನೆಯಿಂದ ಕುತೂಹಲ ಉಳಿಸಿಕೊಂಡಿರುವ ಚುನಾವಣಾ ಫಲಿತಾಂಶ ಇನ್ನೂ ಹೊರಬಿದ್ದಿಲ್ಲ. ಡೊನಾಲ್ಡ್ ಟ್ರಂಪ್, ಜೋ ಬಿಡನ್ ನಡುವೆ ತೀವ್ರ ಪೈಪೋಟಿ ಇದೆ. ಆದರೆ ಇಲ್ಲೊಂದು ನಗರದಲ್ಲಿ ಮೇಯರ್‌ ಚುನಾವಣೆಯಲ್ಲಿ ಭರ್ಜರಿ ಬಹುಮತದಲ್ಲಿ ಬುಲ್‌ಡಾಗ್ ಜಯಗಳಿಸಿದೆ.

ಫಾಕ್ಸ್ ನ್ಯೂಸ್ ಪ್ರಕಾರ, ಅಮೆರಿಕಾದ ಕೆಂಟುಕಿಯ ರಾಬಿಟ್ ಹ್ಯಾಶ್‌ನ ಜನರು ಮೇಯರ್​ ಚುನಾವಣೆಯಲ್ಲಿ ವಿಲ್ಬರ್​ ಬೀಸ್ಟ್​ ಹೆಸರಿನ ಫ್ರೆಂಚ್ ಬುಲ್​ಡಾಗ್​​​ವೊಂದನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಅದರಲ್ಲೂ ವಿಲ್ಬರ್ ಬೀಸ್ಟ್ 13,143 ಮತಗಳಿಂದ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ ಎಂದು ರಾಬಿಟ್ ಹ್ಯಾಶ್ ಹಿಸ್ಟಾರಿಕಲ್ ಸೊಸೈಟಿ ತಿಳಿಸಿದೆ.

“ರಾಬಿಟ್ ಹ್ಯಾಶ್‌ನ ಮೇಯರ್ ಚುನಾವಣೆಯಲ್ಲಿ ವಿಲ್ಬರ್ ಬೀಸ್ಟ್ ಹೊಸ ಮೇಯರ್ ಆಗಿದ್ದು, ಒಟ್ಟು 22,985 ಮತಗಳಲ್ಲಿ 13,143 (ಇದುವರೆಗೆ ಗಳಿಸಿದ ಒಟ್ಟು ಮೊತ್ತ) ಮತಗಳನ್ನು ಪಡೆದಿದ್ದಾರೆ!” ಎಂದು ರಾಬಿಟ್ ಹ್ಯಾಶ್ ಹಿಸ್ಟಾರಿಕಲ್ ಸೊಸೈಟಿ ಬುಧವಾರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಜಾಕ್ ರಾಬಿಟ್ ಹೆಸರಿನ ಬೀಗಲ್​ ನಾಯಿ​ ಹಾಗೂ ಪಪ್ಪಿ ಹೆಸರಿನ ಗೋಲ್ಡನ್ ರಿಟ್ರೈವರ್ ನಾಯಿಗಳು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಪಡೆದುಕೊಂಡಿವೆ. ಇನ್ನು 12 ವರ್ಷದ ಲೇಡಿ ಸ್ಟೋನ್ ಹೆಸರಿನ ಬಾರ್ಡರ್​ ಕೋಲಿ ನಾಯಿ ಪಟ್ಟಣದ ರಾಯಭಾರಿ ಸ್ಥಾನವನ್ನ ಹಾಗೆ ಉಳಿಸಿಕೊಂಡಿದೆ.

PC: Rabbit Hash Historical Society@Facebook

ಕೆಂಟುಕಿ.ಕಾಂ ಪ್ರಕಾರ, ಓಹಿಯೋ ನದಿಯುದ್ದಕ್ಕೂ ವಾಸವಿರುವ ಸಮುದಾಯವಾದ ರಾಬಿಟ್ ಹ್ಯಾಶ್, 1990ರ ಇಸವಿಯಿಂದ ತಮ್ಮ ಮೇಯರ್​ ಆಗಿ ನಾಯಿಗಳನ್ನು ಆಯ್ಕೆ ಮಾಡುತ್ತಾ ಬಂದಿದ್ದಾರೆ. ಇಲ್ಲಿನ ಜನರು ಹಿಸ್ಟೋರಿಕಲ್ ಸೊಸೈಟಿಗೆ ತಲಾ 1 ಡಾಲರ್​ ದೇಣಿಗೆ ನೀಡುವ ಮೂಲಕ ಮತ ಹಾಕುತ್ತಾರೆ.

ಮೇಯರ್‌ ಆಗಿ ಆಯ್ಕೆಯಾದ ಫ್ರೆಂಚ್ ಬುಲ್‌ಡಾಗ್ ವಿಲ್ಬರ್ ನಾಯಿ ಅಧಿಕಾರ ವಹಿಸಿಕೊಂಡ ನಂತರ, ರಾಬಿಟ್ ಹ್ಯಾಶ್ ಹಿಸ್ಟಾರಿಕಲ್ ಸೊಸೈಟಿ ಮತ್ತು ಇತರ ದತ್ತಿ ಕಾರ್ಯಗಳಿಗಾಗಿ ಹಣವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ.


ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...