Homeಮುಖಪುಟಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

ಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

- Advertisement -
- Advertisement -

ಭಾರತದಲ್ಲಿ ಸಿಎಎ ಜಾರಿ ಕುರಿತು ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ಅಮೆರಿಕ ಮತ್ತು ವಿಶ್ವಸಂಸ್ಥೆ ಕಳವಳವನ್ನು ವ್ಯಕ್ತಪಡಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿಯ ವಕ್ತಾರರು ಮಂಗಳವಾರ ರಾಯಿಟರ್ಸ್‌ ಜೊತೆಗೆ ಈ ಬಗ್ಗೆ ಮಾತನಾಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯು ಮೂಲಭೂತವಾಗಿ ತಾರತಮ್ಯ ಸ್ವರೂಪದ್ದಾಗಿದೆ ಮತ್ತು ಭಾರತದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಟ್ಟುಪಾಡುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿ ಕಳವಳವನ್ನು ವ್ಯಕ್ತಪಡಿಸಿದೆ.

ಸಿಎಎ ನಿಯಮಗಳು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿಗೆ ಅನುಗುಣವಾಗಿವೆಯೇ ಎಂಬುದನ್ನು ಅಧ್ಯಯನ ಮಾಡುತ್ತಿದ್ದೇವೆ ಎಂದು ವಿಶ್ವಸಂಸ್ಥೆ ಹೇಳಿದೆ. ಅಮೆರಿಕದ ಸ್ಟೇಟ್ ಡಿಪಾರ್ಟ್ಮೆಂಟ್ ಕೂಡ ನಿಯಮಗಳ ಅಧಿಸೂಚನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಈ ಕಾಯಿದೆಯನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತದೆ ಎಂದು ಮೇಲ್ವಿಚಾರಣೆ ಮಾಡುತ್ತಿದ್ದೇವೆ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಮತ್ತು ಕಾನೂನಿನಡಿಯಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನತೆಯನ್ನು ನೀಡುವುದು ಮೂಲಭೂತ ಪ್ರಜಾಪ್ರಭುತ್ವದ ತತ್ವಗಳಾಗಿವೆ ಎಂದು ಅಮೆರಿಕದ ರಾಜ್ಯ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದು ವ್ಯಾಪಕವಾಗಿ ಟೀಕೆಗೆ ಕಾರಣವಾಗಿದೆ. ಇದು 2019 ಮತ್ತು 2020ರಲ್ಲಿ ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು. ಅಸ್ಸಾಂನಲ್ಲಿ ಎನ್‌ಆರ್‌ಸಿಯಂತೆ ನಾಗರಿಕರ ನೋಂದಣಿಯನ್ನು ಮಾಡಲು ರಾಷ್ಟ್ರವ್ಯಾಪಿ ಮುಂದಾದರೆ ಏನಾಗುತ್ತದೆ ಎಂಬುವುದು ಜನರಲ್ಲಿ ಭಯ ಮೂಡಿತ್ತು. ಅಸ್ಸಾಂನಲ್ಲಿ ಆರಂಭದಲ್ಲಿ 19ಲಕ್ಷಕ್ಕೂ ಹೆಚ್ಚು ಜನರನ್ನು ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿತ್ತು, ವರದಿಗಳ ಪ್ರಕಾರ, ಇದರಲ್ಲಿ ಕನಿಷ್ಠ 5 ಲಕ್ಷ ಹಿಂದೂಗಳು ಸೇರಿದ್ದಾರೆ. ಇದರಿಂದಾಗಿ ಸಿಎಎ ಎನ್‌ಆರ್‌ಸಿ ವಿರುದ್ಧ ದೇಶದಾದ್ಯಂತ ವ್ಯಾಪಕವಾದ ಪ್ರತಿಭಟನೆಗಳು ನಡೆದಿದ್ದವು.

ಸಿಎಎಗೆ ದೇಶದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಈ ಕಾಯ್ದೆಯನ್ನು ಟೀಕಿಸಿದ್ದರು, ಇದು ಮುಸ್ಲಿಮರ ವಿರುದ್ಧ ತಾರತಮ್ಯವನ್ನು ಹೊಂದಿದೆ ಎಂದು ಹೇಳಿದ್ದರು. ಫೆಬ್ರವರಿ 12ರಂದು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನೇತೃತ್ವದ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದೆ. ವಿವಿಧತೆಯಲ್ಲಿ ಏಕತೆ ಎಂಬ ಆದರ್ಶವು ದೇಶದಲ್ಲಿ ಗಂಭೀರ ಬೆದರಿಕೆಯನ್ನು ಎದುರಿಸುತ್ತಿರುವಾಗ ರಾಜ್ಯ ಸರ್ಕಾರವು ಕೋಮು ಸೌಹಾರ್ದತೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ ಎಂದು ತಮಿಳುನಾಡು ಸರಕಾರ ಹೇಳಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಸಿಎಎ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಮಮತಾ ಟೀಕಿಸಿದ್ದರು.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಸಿಎಎ ಬಗ್ಗೆ ವ್ಯಾಪಕವಾದ ವಿರೋಧವನ್ನು ವ್ಯಕ್ತಪಡಿಸಿದ್ದು, ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಬಿಜೆಪಿಯ ಸಿದ್ದಾಂತದ ಭಾಗ ಎಂದು ಹೇಳಿದ್ದಾರೆ. ಕಿರುಕುಳಕ್ಕೊಳಗಾದ ಯಾರಿಗಾದರೂ ಆಶ್ರಯ ನೀಡಿ ಆದರೆ ಪೌರತ್ವವು ಧರ್ಮ ಅಥವಾ ರಾಷ್ಟ್ರೀಯತೆಯನ್ನು ಆಧರಿಸಿರಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...