Homeಅಂತರಾಷ್ಟ್ರೀಯವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (WHO)ಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಚೀನಾದ ಆಜ್ಞೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಆರಂಭಿಕ ಹಂತಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಗುಳಿಯುವುದಾಗಿ ಪತ್ರ ಬರೆದಿದ್ದಾರೆ.

“ಸಾಂಕ್ರಾಮಿಕ ರೋಗಕ್ಕೆ ಸ್ಪಂದಿಸುವಲ್ಲಿ ನೀವು ಮತ್ತು ನಿಮ್ಮ ಸಂಸ್ಥೆ ಪುನರಾವರ್ತಿತವಾಗಿ ಮಾಡಿದ ತಪ್ಪುಗಳು ಜಗತ್ತಿಗೆ ಅತ್ಯಂತ ದುಬಾರಿಯಾಗಿದೆ ಎಂಬುದು ಸ್ಪಷ್ಟವಾಗಿದೆ. WHOಗೆ  ಮುಂದುವರೆಯಲು ಇರುವ ಏಕೈಕ ಮಾರ್ಗವೆಂದರೆ ಚೀನಾದಿಂದ ಸ್ವಾತಂತ್ರ್ಯವನ್ನು ಪ್ರದರ್ಶಿಸಿಸುವುದು”ಎಂದು ಟೆಡ್ರೊಸ್ ಅಧಾನೊಮ್‌ಗೆ ಬರೆದ ಪತ್ರದಲ್ಲಿ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ಕಳೆದ ಡಿಸೆಂಬರ್‌ನಿಂದ ಪ್ರತಿ ಸಂದರ್ಭವನ್ನು ವಿವರಿಸಿದ್ದು, WHO ಜಗತ್ತಿಗೆ ಕೆಟ್ಟ ಸಲಹೆಯನ್ನು ನೀಡಿತು ಎಂದಿದ್ದಾರೆ.

ಪ್ರಮುಖ ಸುಧಾರಣೆಗಳಿಗೆ ಬದ್ಧರಾಗಲು ಟ್ರಂಪ್ ಟೆಡ್ರೊಸ್ ಅಧಾನೊಮ್‌ಗೆ 30 ದಿನಗಳ ಕಾಲಾವಕಾಶ ನೀಡಿದ್ದು, ಹಾಗೂ WHO ಇದನ್ನು ಅನುಸರಿಸದಿದ್ದರೆ, “ನಾನು WHOಗೆ ಅಮೆರಿಕಾದ ಹಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತೇನೆ ಮತ್ತು ನಮ್ಮ ಸದಸ್ಯತ್ವವನ್ನು ಮರುಪರಿಶೀಲಿಸುತ್ತೇನೆ” ಎಂದು ಎಚ್ಚರಿಸಿದ್ದಾರೆ.

WHOದ ನೀತಿ ನಿರೂಪಣಾ ಸಂಸ್ಥೆ ಸೋಮವಾರ ಸಭೆ ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ಟ್ರಂಪ್‌ರ ಪತ್ರವನ್ನು ಕಳುಹಿಸಲಾಗಿದೆ. ಈ ಸಭೆಯಲ್ಲಿ ಕೊರೊನಾ ವೈರಸ್‌ನ ಮೂಲದ ತನಿಖೆಯನ್ನು ವಿರೋಧಿಸಿದ್ದ ಚೀನಾ ಹಿಂದೆ ಸರಿಯಬೇಕಾಯಿತು. ಔಪಚಾರಿಕ ನಿರ್ಣಯವನ್ನು ಇಂದು ಅಂಗೀಕರಿಸುವ ನಿರೀಕ್ಷೆಯಿದೆ.

ಟ್ರಂಪ್ ಪತ್ರದಲ್ಲಿ “ಸಂಘಟನೆಯನ್ನು ಹೇಗೆ ಸುಧಾರಿಸುವುದು ಎಂಬುದರ ಕುರಿತು ನನ್ನ ಆಡಳಿತವು ಈಗಾಗಲೇ ನಿಮ್ಮೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ” ಎಂದು ಬರೆದಿದ್ದಾರೆ.

WHO ಯಾವುದೇ ವಿಪರೀತ ಸುಧಾರಣೆಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. 194 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಹೊಂದಿರುವ ವಿಶ್ವ ಆರೋಗ್ಯ ಸಭೆ, ಮೊಟಕುಗೊಂಡ ಅಧಿವೇಶನಕ್ಕಾಗಿ ವೀಡಿಯೊ ಸಮ್ಮೇಳನದಲ್ಲಿ ಸಭೆ ನಡೆಸುತ್ತಿದೆ, ಅದು ಕೆಲವೇ ಗಂಟೆಗಳಲ್ಲಿ ಕೊನೆಗೊಳ್ಳಲಿದೆ.

“ಅಮೇರಿಕಾ ಅಧ್ಯಕ್ಷರು ಹೇಳುತ್ತಿರುವ ಯಾವುದೇ ಪ್ರಮುಖ ಸುಧಾರಣೆಯನ್ನು ಸಾಮಾನ್ಯ ಸಂಸ್ಥೆ, ವಿಶ್ವ ಆರೋಗ್ಯ ಸಭೆ ಅನುಮೋದನೆಯೊಂದಿಗೆ ಮಾತ್ರ ಮಾಡಬಹುದಾಗಿದೆ” ಎಂದು ರಾಜತಾಂತ್ರಿಕರು ಹೇಳಿದ್ದಾರೆ.

ಖಚಿತವಾಗಿ ಹೇಳುವುದಾದರೆ, ವಿಶ್ವ ಸಂಸ್ಥೆಯ ಅಂಗ ಸಂಸ್ಥೆಯಾದ ಆರೋಗ್ಯ ಸಂಸ್ಥೆಯಿಂದ ಹೊರನಡೆಯುವ ಬಗ್ಗೆ ಟ್ರಂಪ್ ಆಡಳಿತವು ಮಾತನಾಡುತ್ತಿರುವುದು ಇದೇ ಮೊದಲಲ್ಲ. ಆದರೆ WHO ದ ಮುಖ್ಯಸ್ಥರಿಗೆ ಬರೆದ ಪತ್ರವು ಬೆದರಿಕೆಯನ್ನು ಔಪಚಾರಿಕಗೊಳಿಸುತ್ತದೆ.


ಓದಿ: ಕೊರೊನಾ ವೈರಸ್ ಹುಟ್ಟಿದ್ದು ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ: ಚೀನಾ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...