Homeಅಂತರಾಷ್ಟ್ರೀಯವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (WHO)ಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಚೀನಾದ ಆಜ್ಞೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಆರಂಭಿಕ ಹಂತಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಗುಳಿಯುವುದಾಗಿ ಪತ್ರ ಬರೆದಿದ್ದಾರೆ.

“ಸಾಂಕ್ರಾಮಿಕ ರೋಗಕ್ಕೆ ಸ್ಪಂದಿಸುವಲ್ಲಿ ನೀವು ಮತ್ತು ನಿಮ್ಮ ಸಂಸ್ಥೆ ಪುನರಾವರ್ತಿತವಾಗಿ ಮಾಡಿದ ತಪ್ಪುಗಳು ಜಗತ್ತಿಗೆ ಅತ್ಯಂತ ದುಬಾರಿಯಾಗಿದೆ ಎಂಬುದು ಸ್ಪಷ್ಟವಾಗಿದೆ. WHOಗೆ  ಮುಂದುವರೆಯಲು ಇರುವ ಏಕೈಕ ಮಾರ್ಗವೆಂದರೆ ಚೀನಾದಿಂದ ಸ್ವಾತಂತ್ರ್ಯವನ್ನು ಪ್ರದರ್ಶಿಸಿಸುವುದು”ಎಂದು ಟೆಡ್ರೊಸ್ ಅಧಾನೊಮ್‌ಗೆ ಬರೆದ ಪತ್ರದಲ್ಲಿ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ಕಳೆದ ಡಿಸೆಂಬರ್‌ನಿಂದ ಪ್ರತಿ ಸಂದರ್ಭವನ್ನು ವಿವರಿಸಿದ್ದು, WHO ಜಗತ್ತಿಗೆ ಕೆಟ್ಟ ಸಲಹೆಯನ್ನು ನೀಡಿತು ಎಂದಿದ್ದಾರೆ.

ಪ್ರಮುಖ ಸುಧಾರಣೆಗಳಿಗೆ ಬದ್ಧರಾಗಲು ಟ್ರಂಪ್ ಟೆಡ್ರೊಸ್ ಅಧಾನೊಮ್‌ಗೆ 30 ದಿನಗಳ ಕಾಲಾವಕಾಶ ನೀಡಿದ್ದು, ಹಾಗೂ WHO ಇದನ್ನು ಅನುಸರಿಸದಿದ್ದರೆ, “ನಾನು WHOಗೆ ಅಮೆರಿಕಾದ ಹಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತೇನೆ ಮತ್ತು ನಮ್ಮ ಸದಸ್ಯತ್ವವನ್ನು ಮರುಪರಿಶೀಲಿಸುತ್ತೇನೆ” ಎಂದು ಎಚ್ಚರಿಸಿದ್ದಾರೆ.

WHOದ ನೀತಿ ನಿರೂಪಣಾ ಸಂಸ್ಥೆ ಸೋಮವಾರ ಸಭೆ ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ಟ್ರಂಪ್‌ರ ಪತ್ರವನ್ನು ಕಳುಹಿಸಲಾಗಿದೆ. ಈ ಸಭೆಯಲ್ಲಿ ಕೊರೊನಾ ವೈರಸ್‌ನ ಮೂಲದ ತನಿಖೆಯನ್ನು ವಿರೋಧಿಸಿದ್ದ ಚೀನಾ ಹಿಂದೆ ಸರಿಯಬೇಕಾಯಿತು. ಔಪಚಾರಿಕ ನಿರ್ಣಯವನ್ನು ಇಂದು ಅಂಗೀಕರಿಸುವ ನಿರೀಕ್ಷೆಯಿದೆ.

ಟ್ರಂಪ್ ಪತ್ರದಲ್ಲಿ “ಸಂಘಟನೆಯನ್ನು ಹೇಗೆ ಸುಧಾರಿಸುವುದು ಎಂಬುದರ ಕುರಿತು ನನ್ನ ಆಡಳಿತವು ಈಗಾಗಲೇ ನಿಮ್ಮೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ” ಎಂದು ಬರೆದಿದ್ದಾರೆ.

WHO ಯಾವುದೇ ವಿಪರೀತ ಸುಧಾರಣೆಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. 194 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಹೊಂದಿರುವ ವಿಶ್ವ ಆರೋಗ್ಯ ಸಭೆ, ಮೊಟಕುಗೊಂಡ ಅಧಿವೇಶನಕ್ಕಾಗಿ ವೀಡಿಯೊ ಸಮ್ಮೇಳನದಲ್ಲಿ ಸಭೆ ನಡೆಸುತ್ತಿದೆ, ಅದು ಕೆಲವೇ ಗಂಟೆಗಳಲ್ಲಿ ಕೊನೆಗೊಳ್ಳಲಿದೆ.

“ಅಮೇರಿಕಾ ಅಧ್ಯಕ್ಷರು ಹೇಳುತ್ತಿರುವ ಯಾವುದೇ ಪ್ರಮುಖ ಸುಧಾರಣೆಯನ್ನು ಸಾಮಾನ್ಯ ಸಂಸ್ಥೆ, ವಿಶ್ವ ಆರೋಗ್ಯ ಸಭೆ ಅನುಮೋದನೆಯೊಂದಿಗೆ ಮಾತ್ರ ಮಾಡಬಹುದಾಗಿದೆ” ಎಂದು ರಾಜತಾಂತ್ರಿಕರು ಹೇಳಿದ್ದಾರೆ.

ಖಚಿತವಾಗಿ ಹೇಳುವುದಾದರೆ, ವಿಶ್ವ ಸಂಸ್ಥೆಯ ಅಂಗ ಸಂಸ್ಥೆಯಾದ ಆರೋಗ್ಯ ಸಂಸ್ಥೆಯಿಂದ ಹೊರನಡೆಯುವ ಬಗ್ಗೆ ಟ್ರಂಪ್ ಆಡಳಿತವು ಮಾತನಾಡುತ್ತಿರುವುದು ಇದೇ ಮೊದಲಲ್ಲ. ಆದರೆ WHO ದ ಮುಖ್ಯಸ್ಥರಿಗೆ ಬರೆದ ಪತ್ರವು ಬೆದರಿಕೆಯನ್ನು ಔಪಚಾರಿಕಗೊಳಿಸುತ್ತದೆ.


ಓದಿ: ಕೊರೊನಾ ವೈರಸ್ ಹುಟ್ಟಿದ್ದು ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ: ಚೀನಾ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...