Homeಅಂತರಾಷ್ಟ್ರೀಯವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (WHO)ಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಚೀನಾದ ಆಜ್ಞೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಆರಂಭಿಕ ಹಂತಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಗುಳಿಯುವುದಾಗಿ ಪತ್ರ ಬರೆದಿದ್ದಾರೆ.

“ಸಾಂಕ್ರಾಮಿಕ ರೋಗಕ್ಕೆ ಸ್ಪಂದಿಸುವಲ್ಲಿ ನೀವು ಮತ್ತು ನಿಮ್ಮ ಸಂಸ್ಥೆ ಪುನರಾವರ್ತಿತವಾಗಿ ಮಾಡಿದ ತಪ್ಪುಗಳು ಜಗತ್ತಿಗೆ ಅತ್ಯಂತ ದುಬಾರಿಯಾಗಿದೆ ಎಂಬುದು ಸ್ಪಷ್ಟವಾಗಿದೆ. WHOಗೆ  ಮುಂದುವರೆಯಲು ಇರುವ ಏಕೈಕ ಮಾರ್ಗವೆಂದರೆ ಚೀನಾದಿಂದ ಸ್ವಾತಂತ್ರ್ಯವನ್ನು ಪ್ರದರ್ಶಿಸಿಸುವುದು”ಎಂದು ಟೆಡ್ರೊಸ್ ಅಧಾನೊಮ್‌ಗೆ ಬರೆದ ಪತ್ರದಲ್ಲಿ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ಕಳೆದ ಡಿಸೆಂಬರ್‌ನಿಂದ ಪ್ರತಿ ಸಂದರ್ಭವನ್ನು ವಿವರಿಸಿದ್ದು, WHO ಜಗತ್ತಿಗೆ ಕೆಟ್ಟ ಸಲಹೆಯನ್ನು ನೀಡಿತು ಎಂದಿದ್ದಾರೆ.

ಪ್ರಮುಖ ಸುಧಾರಣೆಗಳಿಗೆ ಬದ್ಧರಾಗಲು ಟ್ರಂಪ್ ಟೆಡ್ರೊಸ್ ಅಧಾನೊಮ್‌ಗೆ 30 ದಿನಗಳ ಕಾಲಾವಕಾಶ ನೀಡಿದ್ದು, ಹಾಗೂ WHO ಇದನ್ನು ಅನುಸರಿಸದಿದ್ದರೆ, “ನಾನು WHOಗೆ ಅಮೆರಿಕಾದ ಹಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತೇನೆ ಮತ್ತು ನಮ್ಮ ಸದಸ್ಯತ್ವವನ್ನು ಮರುಪರಿಶೀಲಿಸುತ್ತೇನೆ” ಎಂದು ಎಚ್ಚರಿಸಿದ್ದಾರೆ.

WHOದ ನೀತಿ ನಿರೂಪಣಾ ಸಂಸ್ಥೆ ಸೋಮವಾರ ಸಭೆ ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ಟ್ರಂಪ್‌ರ ಪತ್ರವನ್ನು ಕಳುಹಿಸಲಾಗಿದೆ. ಈ ಸಭೆಯಲ್ಲಿ ಕೊರೊನಾ ವೈರಸ್‌ನ ಮೂಲದ ತನಿಖೆಯನ್ನು ವಿರೋಧಿಸಿದ್ದ ಚೀನಾ ಹಿಂದೆ ಸರಿಯಬೇಕಾಯಿತು. ಔಪಚಾರಿಕ ನಿರ್ಣಯವನ್ನು ಇಂದು ಅಂಗೀಕರಿಸುವ ನಿರೀಕ್ಷೆಯಿದೆ.

ಟ್ರಂಪ್ ಪತ್ರದಲ್ಲಿ “ಸಂಘಟನೆಯನ್ನು ಹೇಗೆ ಸುಧಾರಿಸುವುದು ಎಂಬುದರ ಕುರಿತು ನನ್ನ ಆಡಳಿತವು ಈಗಾಗಲೇ ನಿಮ್ಮೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ” ಎಂದು ಬರೆದಿದ್ದಾರೆ.

WHO ಯಾವುದೇ ವಿಪರೀತ ಸುಧಾರಣೆಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. 194 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಹೊಂದಿರುವ ವಿಶ್ವ ಆರೋಗ್ಯ ಸಭೆ, ಮೊಟಕುಗೊಂಡ ಅಧಿವೇಶನಕ್ಕಾಗಿ ವೀಡಿಯೊ ಸಮ್ಮೇಳನದಲ್ಲಿ ಸಭೆ ನಡೆಸುತ್ತಿದೆ, ಅದು ಕೆಲವೇ ಗಂಟೆಗಳಲ್ಲಿ ಕೊನೆಗೊಳ್ಳಲಿದೆ.

“ಅಮೇರಿಕಾ ಅಧ್ಯಕ್ಷರು ಹೇಳುತ್ತಿರುವ ಯಾವುದೇ ಪ್ರಮುಖ ಸುಧಾರಣೆಯನ್ನು ಸಾಮಾನ್ಯ ಸಂಸ್ಥೆ, ವಿಶ್ವ ಆರೋಗ್ಯ ಸಭೆ ಅನುಮೋದನೆಯೊಂದಿಗೆ ಮಾತ್ರ ಮಾಡಬಹುದಾಗಿದೆ” ಎಂದು ರಾಜತಾಂತ್ರಿಕರು ಹೇಳಿದ್ದಾರೆ.

ಖಚಿತವಾಗಿ ಹೇಳುವುದಾದರೆ, ವಿಶ್ವ ಸಂಸ್ಥೆಯ ಅಂಗ ಸಂಸ್ಥೆಯಾದ ಆರೋಗ್ಯ ಸಂಸ್ಥೆಯಿಂದ ಹೊರನಡೆಯುವ ಬಗ್ಗೆ ಟ್ರಂಪ್ ಆಡಳಿತವು ಮಾತನಾಡುತ್ತಿರುವುದು ಇದೇ ಮೊದಲಲ್ಲ. ಆದರೆ WHO ದ ಮುಖ್ಯಸ್ಥರಿಗೆ ಬರೆದ ಪತ್ರವು ಬೆದರಿಕೆಯನ್ನು ಔಪಚಾರಿಕಗೊಳಿಸುತ್ತದೆ.


ಓದಿ: ಕೊರೊನಾ ವೈರಸ್ ಹುಟ್ಟಿದ್ದು ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ: ಚೀನಾ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...