Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...