Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...