Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...