Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...