Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...