Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...